Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕ್ರಿಮಿನಲ್ ಪ್ರಕರಣಗಳ ಸಿಐಡಿ ತನಿಖೆಗಾಗಿ...

ಕ್ರಿಮಿನಲ್ ಪ್ರಕರಣಗಳ ಸಿಐಡಿ ತನಿಖೆಗಾಗಿ 10 ಕ್ರಮಗಳ ಮಾರ್ಗಸೂಚಿ : ಕಟ್ಟುನಿಟ್ಟಾಗಿ ಪಾಲಿಸಲು ಡಿಜಿಪಿ ಡಾ.ಎಂ.ಎ.ಸಲೀಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ20 Jun 2025 9:43 PM IST
share
ಕ್ರಿಮಿನಲ್ ಪ್ರಕರಣಗಳ ಸಿಐಡಿ ತನಿಖೆಗಾಗಿ 10 ಕ್ರಮಗಳ ಮಾರ್ಗಸೂಚಿ : ಕಟ್ಟುನಿಟ್ಟಾಗಿ ಪಾಲಿಸಲು ಡಿಜಿಪಿ ಡಾ.ಎಂ.ಎ.ಸಲೀಂ ಸೂಚನೆ

ಬೆಂಗಳೂರು : ಅಪರಾಧ ಪ್ರಕರಣಗಳನ್ನು ಹೆಚ್ಚಿನ ತನಿಖೆಗಾಗಿ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಮಾರ್ಗಸೂಚಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಜಾರಿಗೊಳಿಸಿದ್ದಾರೆ.

ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, 10 ಅಂಶಗಳ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಅಧಿಕಾರಿಗಳಿಗೆ ಡಿಜಿಪಿ ನಿರ್ದೇಶಿಸಿದ್ದಾರೆ. ಅವುಗಳಲ್ಲಿ, ಸಿಐಡಿಗೆ ವರ್ಗಾವಣೆ ಬಗ್ಗೆ ಪೊಲೀಸ್ ಪ್ರಧಾನ ಕಚೇರಿಯ ಆದೇಶ ಸ್ವೀಕರಿಸಿದ ಘಟಕದ ಮುಖ್ಯಸ್ಥರು, ಕೂಡಲೇ ಸಂಬಂಧಿಸಿದ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ತನಿಖೆಯಲ್ಲಿ ಸಂಗ್ರಹಿಸಿದ ಸಾಕ್ಷ್ಯಾಧಾರಗಳು ಸೇರಿ ದಾಖಲೆಗಳನ್ನು ಮೂರು ದಿನಗಳೊಳಗಾಗಿ ತನ್ನ ಪರಿಶೀಲನೆಗೆ ಸೂಚಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಸ್ಥಳೀಯ ತನಿಖಾಧಿಕಾರಿಗಳು ತನ್ನ ಘಟಕದ ಮುಖ್ಯಸ್ಥರಿಂದ ಸೂಚನೆ ಮತ್ತು ಆದೇಶಗಳನ್ನು ಸ್ವೀಕರಿಸಿದ ತಕ್ಷಣ, ಪ್ರಕರಣದ ಕೇಸ್ ಡೈರಿಯನ್ನು ದಿನಾಂಕ ಪ್ರಕಾರವಾಗಿ ನವೀಕರಿಸಬೇಕು. ಪೊಲೀಸ್ ಐಟಿ ತನಿಖೆಯ ಕ್ರಮಗಳನ್ನು ನವೀಕರಿಸಬೇಕು. ಬಾಕಿ ಇರುವ ತನಿಖಾ ಕ್ರಮ ಮತ್ತು ವಿಷಯಗಳನ್ನು ಪಟ್ಟಿ ಮಾಡಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಸ್ಥಳೀಯ ತನಿಖಾಧಿಕಾರಿಗಳು ತನಿಖಾ ಕಡತವನ್ನು ಪರಿವಿಡಿಯೊಂದಿಗೆ ಕ್ರಮಬದ್ದವಾಗಿ ಸಿದ್ಧಗೊಳಿಸಬೇಕು. ಕಾಲಾನುಸಾರ ತನ್ನ ಹಿಂದಿನ ತನಿಖಾಧಿಕಾರಿ ಹಾಗೂ ತಾನು ಕೈಗೊಂಡ ತನಿಖೆ ಕುರಿತಂತೆ ಮತ್ತು ಬಾಕಿ ಇರುವ ತನಿಖೆ ಕ್ರಮ ಮತ್ತು ವಿಷಯಗಳನ್ನು ಒಳಗೊಂಡ ಒಂದು ವರದಿಯನ್ನು ಸಿದ್ಧಪಡಿಸಿಕೊಂಡು ತನ್ನ ಘಟಕದ ಮುಖ್ಯಸರಿಗೆ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಘಟಕದ ಮುಖ್ಯಸ್ಥರು ಆ ವರದಿ ಸ್ವೀಕರಿಸಿದ 2 ದಿನಗಳೊಳಗೆ ಸಿಐಡಿ ಘಟಕದ ಪೊಲೀಸ್ ಅಧೀಕ್ಷಕ(ಆಡಳಿತ)ರನ್ನು ಸಂಪರ್ಕಿಸಿ, ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿದ ಬಗ್ಗೆ ಮತ್ತು ಸ್ಥಳೀಯ ತನಿಖಾಧಿಕಾರಿಗಳೊಂದಿಗೆ ಪ್ರಕರಣವನ್ನು ಹಸ್ತಾಂತರಿಸುವ ಪೂರ್ವ ಸಭೆಯಲ್ಲಿ ಚರ್ಚಿಸಲು ದಿನಾಂಕ ನಿಗದಿಪಡಿಸಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಸಿಐಡಿ ಘಟಕದ ಪೊಲೀಸ್ ಅಧೀಕ್ಷಕರು, ಸ್ಥಳೀಯ ತನಿಖಾಧಿಕಾರಿಯಿಂದ ತನಿಖೆ ಕಡತದ ಹಸ್ತಾಂತರ ಪೂರ್ವಭಾವಿ ಸಭೆಯ ದಿನಾಂಕವನ್ನು ನಿಗಧಿಪಡಿಸಬೇಕು. ಈ ಸಭೆಯಲ್ಲಿ ಹಾಜರಾಗಿ ಸ್ಥಳೀಯ ಪೊಲೀಸ್ ಅಧಿಕಾರಿಗಳು ಕೈಗೊಂಡ ತನಿಖಾ ಕ್ರಮಗಳು, ಸಂಗ್ರಹಿಸಿದ ಸಾಕ್ಷ್ಯಾಧಾರಗಳು ಹಾಗೂ ಸಂಗತಿಗಳ ಸಿಐಡಿಗೆ ವಿವರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಈ ಸಭೆಯಲ್ಲಿ ಹಾಜರಿರುವ ಸಿಐಡಿ ಅಧಿಕಾರಿಗಳಿಗೆ ತನಿಖೆಯಲ್ಲಿ ಕಡ್ಡಾಯವಿರುವ ಯಾವುದಾದರೂ ಕಾನೂನುಗಳನ್ನು ಪಾಲಿಸದೇ ಇರುವುದು ಕಂಡುಬಂದಲ್ಲಿ ಅಥವಾ ನ್ಯಾಯಾಲಯದಲ್ಲಿ ತಡೆಯಾಜ್ಞೆ ಆದೇಶವಾಗಿದ್ದಲ್ಲಿ ಅಥವಾ ಸರಕಾರದಿಂದ ಅಥವಾ ಪೊಲೀಸ್ ಪ್ರಧಾನ ಕಚೇರಿಯಿಂದ ಪ್ರಕರಣ ಹಸ್ತಾಂತರ ತಡೆಯುವ ಯಾವುದೇ ಸೂಚನೆಗಳಿದ್ದರೆ ಗಮನಕ್ಕೆ ತರಬೇಕು. ಮುಂದಿನ ಆದೇಶದ ಬಳಿಕ ಪ್ರಕರಣಗಳನ್ನು ಸಿಐಡಿ ಸ್ವೀಕರಿಸಬೇಕು. ಸಿಐಡಿ ಸ್ವೀಕರಿಸದ ಪ್ರಕರಣಗಳನ್ನು ಸ್ಥಳೀಯ ಪೊಲೀಸರು ತನಿಖೆ ಮುಂದುವರೆಸಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಸಿಐಡಿ ಅಧಿಕಾರಿಗಳು ತನಿಖೆ ಸಂಬಂಧ ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಅಥವಾ ಸಾಕ್ಷ್ಯ ಸಂಗ್ರಹಕ್ಕೆ ಸ್ಥಳದಲ್ಲಿ ಮೊಕ್ಕಾಂ ಹೂಡಿದಾಗ, ಆಯಾ ಘಟಕದ ಮುಖ್ಯಸ್ಥರು ಸಿಐಡಿ ಅಧಿಕಾರಿಗಳ ಕೋರಿಕೆ ಮೇಲೆ ಅಗತ್ಯ ಸಿಬ್ಬಂದಿ, ವಾಹನ ಮತ್ತು ಇತರೆ ಸೌಲಭ್ಯವನ್ನು ಪೂರೈಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ತನಿಖಾ ಸಮಯದಲ್ಲಿ ಸಿಐಡಿ ಅಧಿಕಾರಿಗಳು ಆರೋಪಿಯನ್ನು ವಿಚಾರಣೆ ಮಾಡಿ ಘಟಕದ ನಿರ್ದಿಷ್ಟ ಪೊಲೀಸ್ ಠಾಣೆಯಲ್ಲಿ ಬಂಧನದಲ್ಲಿ ಇರಿಸಲು ಉದ್ದೇಶಿಸಿದಾಗ ಘಟಕಾಧಿಕಾರಿಗಳು ಸಂಬಂಧಪಟ್ಟ ಠಾಣಾಧಿಕಾರಿಗೆ ಲಾಕಪ್ ವ್ಯವಸ್ಥೆ ಮಾಡಲು ಸೂಚನೆ ನೀಡಬೇಕು. ಪ್ರಕರಣ ಸುಗಮ ತನಿಖೆಗಾಗಿ ಸಿಐಡಿ ತನಿಖಾಧಿಕಾರಿಗಳೊಂದಿಗೆ ಘಟಕಾಧಿಕಾರಿಗಳು ಸದಾ ಸಮನ್ವಯತೆ ಸಾಧಿಸಬೇಕು ಎಂದು ಸುತ್ತೋಲೆಯಲ್ಲಿ ಡಿಜಿಪಿ ಡಾ.ಎಂ.ಎ.ಸಲೀಂ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X