Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಧರ್ಮಸ್ಥಳ ದೂರುʼದಾರನಿಗೆ ಪವರ್...

ʼಧರ್ಮಸ್ಥಳ ದೂರುʼದಾರನಿಗೆ ಪವರ್ ಟಿವಿಯಿಂದ ನಿಂದನೆ; ದೂರು ದಾಖಲು

ದೂರುದಾರ ದಲಿತ ವ್ಯಕ್ತಿಗೆ ಬೆದರಿಕೆ ಆರೋಪ; ರಾಕೇಶ್ ಶೆಟ್ಟಿ ವಿರುದ್ಧ SC/ST ಕಾಯ್ದೆಯಡಿ ಕ್ರಮಕ್ಕೆ ಕೋರಿಕೆ

ವಾರ್ತಾಭಾರತಿವಾರ್ತಾಭಾರತಿ26 July 2025 12:38 AM IST
share
ʼಧರ್ಮಸ್ಥಳ ದೂರುʼದಾರನಿಗೆ ಪವರ್ ಟಿವಿಯಿಂದ ನಿಂದನೆ; ದೂರು ದಾಖಲು

ಬೆಂಗಳೂರು : ಧರ್ಮಸ್ಥಳದಲ್ಲಿ ಸಾಮೂಹಿಕವಾಗಿ ಹೂತು ಹಾಕಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿರುವ ಸಾಕ್ಷಿಗೆ ಪವರ್ ಟಿವಿ ಮತ್ತು ಅದರ ಮುಖ್ಯಸ್ಥ ರಾಕೇಶ್ ಶೆಟ್ಟಿ, ಬಹಿರಂಗವಾಗಿ "ನೀಚರಲ್ಲೇ ನೀಚ" ಎಂದು ನಿಂದಿಸುತ್ತಿರುವುದಾಗಿ ಪರಮೇಶ್ ವಿ. ಬೆಳತ್ತೂರು ಎಂಬವರು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಾಕ್ಷಿಗೆ ಸಾರ್ವಜನಿಕವಾಗಿ ಅವಮಾನ ಮಾಡಬೇಕು ಎಂಬ ಉದ್ದೇಶದಿಂದ "ನೀಚರಲ್ಲೇ ನೀಚ" ಎಂದು ಜಾತಿಯನ್ನು ಉದ್ದೇಶಿಸಿ ಮಾಡಿರುವ ಅವಮಾನವೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ 1989 ರ ಅಡಿಯಲ್ಲಿ ಅಪರಾಧವಾಗಿರುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜು.3ರಂದು ಧರ್ಮಸ್ಥಳದ ದೂರುದಾರ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದಾರೆ. ಆ ಬಳಿಕ, ದೂರುದಾರ ತಾನು ಕೆಳಜಾತಿಗೆ ಸೇರಿದ್ದು, ಧರ್ಮಸ್ಥಳದ ಕೆಲವರು ತಮ್ಮ ಪ್ರಭಾವ ಬಳಸಿ, ನೂರಾರು ಪುರುಷರು, ಯುವತಿಯರು ಮತ್ತು ಮಹಿಳೆಯರ ಮೃತದೇಹಗಳನ್ನು ಹೂತು ಹಾಕಿಸಿದ್ದಾರೆ ಎಂದು ಅವರು ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನಿರಂತರ ದೌರ್ಜನ್ಯಕ್ಕೊಳಗಾಗಿ ಜೀವ ಭಯದಲ್ಲಿಯೇ ಬದುಕಿರುವುದಾಗಿ ದೂರುದಾರನು ತಿಳಿಸಿದ್ದು, ಆತ್ಮಸಾಕ್ಷಿಯ ಪ್ರೇರಣೆಯಿಂದಾಗಿ ಹಿಂದೆ ಪ್ರಕರಣಗಳ ಮೃತದೇಹಗಳನ್ನು ತಾನು ಹೂತು ಹಾಕಿರುವ ಸ್ಥಳಗಳನ್ನು ತೋರಿಸಲು ಮುಂದಾಗಿದ್ದಾರೆ. ದಾಖಲೆಗಳ ಅನುಸಾರ ಆ ವ್ಯಕ್ತಿಯು ದಲಿತನಾಗಿದ್ದು, ಪ್ರಕರಣವು ದೇಶದಾದ್ಯಂತ ಗಮನ ಸೆಳೆದಿದೆ ಎಂದು ಪರಮೇಶ್ ಅವರು ಸಲ್ಲಿರುವ ದೂರಿನಲ್ಲಿದೆ.

ಪವರ್ ಟಿವಿ ಎಂಬ ಸುದ್ದಿ ವಾಹಿನಿಯು ಯುಟ್ಯೂಬ್ ಮತ್ತು ಸಾಮಾಜಿಕ ಜಾಲತಾಣದಲ್ಲಿರುವ ಮಾಧ್ಯಮಗಳಲ್ಲಿ, ಕಳೆದ ಮೂರು ದಿನಗಳಿಂದ ಸತತವಾಗಿ ಆ ವ್ಯಕ್ತಿಯನ್ನು "ಹುಚ್ಚ", "ನೀಚ" "ನೀಚರಲ್ಲೇ ನೀಚ" ಎಂದು ಸಾರ್ವಜನಿಕವಾಗಿ ನಿಂದಿಸುತ್ತಿದ್ದಾರೆ. ಈ ರೀತಿಯ ಹೇಳಿಕೆಗಳು "The Scheduled Castes And Scheduled Tribes (Prevention of Atrocities) Act, 1989" ತೀವ್ರ ಸ್ವರೂಪದ ಉಲ್ಲಂಘನೆಯಾಗಿರುತ್ತದೆ ಎಂದು ಸಾಮಾಜಿಕ ಚಿಂತಕರು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ದೂರುದಾರ ವ್ಯಕ್ತಿಯು ರಕ್ಷಿತ ಸ್ಥಳದಲ್ಲಿ ರಕ್ಷಣಾ ಬೆಂಗಾವಿನಲ್ಲಿರುವ ಕಾರಣ ಆತನೇ ಖುದ್ದಾಗಿ ಪೊಲೀಸ್ ಠಾಣೆಗೆ ಹಾಜರಾಗಿ ದೂರನ್ನು ನೀಡಬಹುದಾದ ಸಾಧ್ಯತೆ ಇಲ್ಲ. ದೂರುದಾರನಿಗೆ ರಾಕೇಶ್ ಶೆಟ್ಟಿ ಪದೇ ಪದೇ ನಿಂದಿಸುತ್ತಿರುವುದು ಕಾನೂನು ಬಾಹಿರ ಮಾತ್ರವಲ್ಲ, ದಲಿತರ ರಕ್ಷಣೆಗೆಂದು ಹೊರ ತಂದಿರುವ ಕಾಯ್ದೆಯ ತ್ರೀವ್ರ ಸ್ವರೂಪದ ಉಲ್ಲಂಘನೆ ಮತ್ತು ಅಮಾನವೀಯ. ರಾಕೇಶ್ ಶೆಟ್ಟಿಯ ಹೇಳಿಕೆಗಳು, ಆ ರಕ್ಷಿತ ವ್ಯಕ್ತಿಯನ್ನು ಸಾರ್ವಜನಿಕವಾಗಿ ನಿಂದಿಸಿ, ಮಾಹಿತಿಯನ್ನು ಪೊಲೀಸರಿಗೆ ಬಹಿರಂಗಪಡಿಸದಂತೆ ಮಾಡುವ ಉದ್ದೇಶವಿದ್ದಂತೆ ಕಂಡು ಬರುತ್ತದೆ. ಅದ್ದರಿಂದ, ಈ ಕೂಡಲೇ ಕಾನೂನಿನ್ವಯ ರಾಕೇಶ್ ಶೆಟ್ಟಿ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.

ದೂರು ಸ್ವೀಕರಿಸಿರುವ ಕಾಡುಗೋಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಈ ಕುರಿತು ಹೆಚ್ಚುವರಿ ತನಿಖೆ ಅಗತ್ಯವಿದೆ ಎಂದು ಎಫ್‌ಐಆರ್ ದಾಖಲಿಸಲು ನ್ಯಾಯಾಲಯದಿಂದ ಅನುಮತಿ ಕೋರಿದ್ದಾರೆ. ದೂರುದಾರ ಪರಮೇಶ್ ಅವರು ಜುಲೈ 28 ರಂದು ನ್ಯಾಯಾಲಯದಲ್ಲಿ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X