Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಧರ್ಮಸ್ಥಳ ದೂರು | ಎಸ್‍ಐಟಿ ತನಿಖೆ...

ಧರ್ಮಸ್ಥಳ ದೂರು | ಎಸ್‍ಐಟಿ ತನಿಖೆ ರಾಜಕೀಯ ಪ್ರೇರಿತ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮುಖಂಡರು ಹೇಳಲಿ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ22 July 2025 8:35 PM IST
share
ಧರ್ಮಸ್ಥಳ ದೂರು | ಎಸ್‍ಐಟಿ ತನಿಖೆ ರಾಜಕೀಯ ಪ್ರೇರಿತ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮುಖಂಡರು ಹೇಳಲಿ: ದಿನೇಶ್ ಗುಂಡೂರಾವ್

ಹುಬ್ಬಳ್ಳಿ : ʼಧರ್ಮಸ್ಥಳ ದೂರುʼ ಕುರಿತು ಎಸ್‍ಐಟಿ ತನಿಖೆ ರಾಜಕೀಯ ಪ್ರೇರಿತ ಎಂದು ಬಿಜೆಪಿ ನಾಯಕರು ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಇದೇ ಮಾತನ್ನು ದಕ್ಷಿಣ ಕನ್ನಡ ಜಿಲ್ಲೆಯ ಮುಖಂಡರು ಹೇಳಲಿ ಎಂದು ತಿಳಿಸಿದರು.

ಮಂಗಳವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‍ಐಟಿ ತನಿಖೆ ರಾಜಕೀಯ ಪ್ರೇರಿತವಾದದ್ದು ಎಂದು ಬಿಜೆಪಿ ನಾಯಕರು ನೀಡಿರುವ ಹೇಳಿಕೆಗೆ ಯಾವುದೇ ಆಧಾರ ಇಲ್ಲ. ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಒತ್ತಡ ಹಾಕುತ್ತಿದ್ದರು. ಈ ಹಿನ್ನೆಲೆಯಲ್ಲಿ ಸರಕಾರ ಎಸ್‍ಐಟಿ ರಚನೆ ಮಾಡಿ ತನಿಖೆಗೆ ಮುಂದಾಗಿದೆ ಎಂದು ಹೇಳಿದರು.

ಈ ಪ್ರಕರಣದಲ್ಲಿ ಅನೇಕ ಗೊಂದಲಗಳು ಉಂಟಾಗಿವೆ. ಸಾಕಷ್ಟು ಹೆಣಗಳನ್ನು ಮುಚ್ಚಿ ಹಾಕಿದ್ದಾರೆ ಎಂಬ ಆರೋಪ ಇದೆ. ಇದು ಎಷ್ಟರ ಮಟ್ಟಿಗೆ ಸತ್ಯ ಎಂಬುದನ್ನು ನೋಡಬೇಕಿದೆ. ಆದುದರಿಂದ, ಈ ಬಗ್ಗೆ ರಾಜ್ಯದೆಲ್ಲೆಡೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ತನಿಖೆಯ ಹಿಂದೆ ಯಾವುದೆ ರಾಜಕೀಯ ಉದ್ದೇಶಗಳಿಲ್ಲ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ಸಣ್ಣ ವರ್ತಕರಿಗೆ ವಾಣಿಜ್ಯ ತೆರಿಗೆ ಇಲಾಖೆಯವರು ಜಿಎಸ್‍ಟಿ ನೋಟಿಸ್ ನೀಡುತ್ತಿರುವ ವಿಚಾರವಾಗಿ ಸಹಾಯವಾಣಿ ತೆರೆಯಲು ಬಿಜೆಪಿ ಮುಂದಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿಯವರಿಗೆ ಜಿಎಸ್‍ಟಿ ವಿಚಾರವಾಗಿ ಸಾಕಷ್ಟು ತಿಳುವಳಿಕೆ ಕೊರತೆ ಇದೆ. ಜಿಎಸ್‍ಟಿ ವಿಚಾರದಲ್ಲಿ ಸರಕಾರದ ಮಧ್ಯಪ್ರವೇಶಕ್ಕೆ ಅಧಿಕಾರ ಇಲ್ಲ ಎಂದು ಹೇಳಿದರು.

ಕೇಂದ್ರ ಸರಕಾರಕ್ಕೆ ಮುಖಭಂಗ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ವಿರುದ್ಧ ಮುಡಾ ಪ್ರಕರಣದಲ್ಲಿ ಈ.ಡಿ ತನಿಖೆಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಇದೊಂದು ಬಹಳ ಗಂಭೀರವಾದ ವಿಚಾರ. ಸರಕಾರದ ವಿಷಯಗಳಲ್ಲಿ ತಾವು ಯಾಕೆ ಭಾಗಿಯಾಗುತ್ತೀರಿ ಎಂದು ಈ.ಡಿಯನ್ನು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಪ್ರಶ್ನಿಸಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮುಡಾ ಪ್ರಕರಣದಲ್ಲಿ ಈ.ಡಿ ತನಿಖೆ ಕುರಿತು ಪದೇ ಪದೇ ಹೇಳಿಕೆಗಳನ್ನು ಕೊಡುತ್ತಿದ್ದರು. ಈಗ ಅವರೇ ಸ್ಪಷ್ಟನೆ ಕೊಡಲಿ. ಈ.ಡಿ, ಐಟಿ, ಸಿಬಿಐ ಬಗ್ಗೆ ಮೇಲಿಂದ ಮೇಲೆ ಮಾತನಾಡುತ್ತಿದ್ದ ಪ್ರಹ್ಲಾದ್ ಜೋಶಿಗೆ ಯಾವ ನೈತಿಕತೆಯಿದೆ. ಸುಪ್ರೀಂಕೋರ್ಟ್ ತೀರ್ಪು ಕೇಂದ್ರ ಸರಕಾರಕ್ಕೆ ದೊಡ್ಡ ಮುಖ ಭಂಗ ಎಂದು ದಿನೇಶ್ ಗುಂಡೂರಾವ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X