Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಭ್ರಷ್ಟಾಚಾರಿಗಳನೆಲ್ಲಾ ಶುದ್ಧಹಸ್ತ ಮಾಡುವ...

ಭ್ರಷ್ಟಾಚಾರಿಗಳನೆಲ್ಲಾ ಶುದ್ಧಹಸ್ತ ಮಾಡುವ ಅದ್ಯಾವ ಮಾಂತ್ರಿಕ ಪೆಟ್ಟಿಗೆ ನಿಮ್ಮ ಬಳಿ ಇದೆ : ದಿನೇಶ್ ಗುಂಡೂರಾವ್

ಸರಣಿ ಪ್ರಶ್ನೆಗಳಿಗೆ ಉತ್ತರಿಸುವಂತೆ ಪ್ರಧಾನಿ ಮೋದಿಯನ್ನು ಆಗ್ರಹಿಸಿದ ಸಚಿವ

ವಾರ್ತಾಭಾರತಿವಾರ್ತಾಭಾರತಿ26 March 2024 6:04 PM IST
share
ಭ್ರಷ್ಟಾಚಾರಿಗಳನೆಲ್ಲಾ ಶುದ್ಧಹಸ್ತ ಮಾಡುವ ಅದ್ಯಾವ ಮಾಂತ್ರಿಕ ಪೆಟ್ಟಿಗೆ ನಿಮ್ಮ ಬಳಿ ಇದೆ : ದಿನೇಶ್ ಗುಂಡೂರಾವ್

ಬೆಂಗಳೂರು: ‘ಭ್ರಷ್ಟಾಚಾರಿಗಳನೆಲ್ಲಾ ಶುದ್ಧಹಸ್ತ ಮಾಡುವ ಅದ್ಯಾವ ಮಾಂತ್ರಿಕ ಪೆಟ್ಟಿಗೆ ನಿಮ್ಮ ಬಳಿ ಇದೆ ಮೋದಿಯವರೆ?, ಉತ್ತರಿಸುವಿರಾ ಅಥವಾ ಉತ್ತರ ಕೊಡಿಸುವಿರಾ?’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದಿಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ಎಕ್ಸ್‌ ನಲ್ಲಿ ಸರಣಿ ಪೋಸ್ಟ್ ಹಾಕಿರುವ ಅವರು, ‘ಮೋದಿಯವರೆ, ಅಜಿತ್ ಪವಾರ್, ಮುಕುಲ್ ರಾಯ್, ನವೀನ್ ಜಿಂದಾಲ್, ತಪಸ್ ರಾಯ್, ಪೆಮಾ ಖಂಡ್ ಇವರ ಮೇಲೆಲ್ಲಾ ಭ್ರಷ್ಟಾಚಾರದ ಆರೋಪವಿದೆ. ಇವರೆಲ್ಲಾ ಈಗ ನಿಮ್ಮ ಸಖ್ಯ ಬೆಳೆಸಿದ್ದಾರೆ. ಇಲ್ಲಿ ಕೆಲವರಿಗೆ ಉನ್ನತ ಹುದ್ದೆ ಸಿಕ್ಕಿದೆ ಹಾಗೂ ಎಲ್ಲರಿಗೂ ತನಿಖೆಯಿಂದ ಮುಕ್ತಿ ಸಿಕ್ಕಿದೆ. ನಿಮ್ಮ ಪಕ್ಷದ ಸಖ್ಯ ಬೆಳೆಸುವ ಮೊದಲು ಇವರೆನ್ನೆಲ್ಲಾ ಬಂಧಿಸಿ ಜೈಲಿಗಟ್ಟಲು ಗೆಜ್ಜೆ ಕಟ್ಟಿ ಕುಣಿಯುತ್ತಿದ್ದ ಸಿಬಿಐ, ಐಟಿ ಮತ್ತು ಇಡಿ ಈಗ ಶೋಚನೀಯವಾಗಿ ಸೋತು ತಣ್ಣಗೆ ಮಲಗಿವೆ’ ಎಂದು ಲೇವಡಿ ಮಾಡಿದ್ದಾರೆ.

‘ಮೋದಿಯವರೆ, ಭ್ರಷ್ಟಾಚಾರದ ಆರೋಪ ಹೊತ್ತಿದ್ದ ಮಹಾರಾಷ್ಟ್ರದ ನಾರಾಯಣ ರಾಣೆಯವರನ್ನು ಇಡಿ ಬಂಧಿಸುವ ಹಂತಕ್ಕೂ ಹೋಗಿತ್ತು. ಆದರೆ ರಾಣೆ ನಿಮ್ಮ ಪಕ್ಷ ಸೇರಿದರು ಜೊತೆಗೆ ಕೇಂದ್ರ ಮಂತ್ರಿಯೂ ಆದರು. ವಿಸ್ಮಯವೆಂದರೆ ರಾಣೆ ನಿಮ್ಮ ಪಕ್ಷ ಸೇರಿದ ತಕ್ಷಣವೇ ಈಡಿ ಅವರ ವಿರುದ್ಧದ ಕೇಸ್ ಫೈಲ್ ಮುಚ್ಚಿಟ್ಟು ತೆಪ್ಪಗಾಯಿತು.

‘ಮೋದಿಯವರೆ, ನಾರದಾ ಚಿಟ್ ಫಂಡ್ ಹಗರಣ ಸಹಿತ ಹಲವು ಹಗರಣಗಳ ಆರೋಪಿಯಾಗಿರುವ ಸುವೇಂದು ಅಧಿಕಾರಿ ಟಿಎಂಸಿ ಮುಖಂಡರಾಗಿದ್ದರು. ತನಿಖಾ ಸಂಸ್ಥೆಗಳು ಅವರ ಬೆನ್ನು ಬೀಳುತ್ತಿದ್ದಂತೆ ನಿಮ್ಮ ಪಕ್ಷ ಸೇರಿದರು ಜೊತೆಗೆ ಪಶ್ಚಿಮ ಬಂಗಾಳದ ವಿಪಕ್ಷ ನಾಯಕರಾದರು. ಏನಿದರ ರಹಸ್ಯ ಮೋದಿಯವರೆ?’ ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

‘ಮೋದಿಯವರೆ, ಶಾರದಾ ಚಿಟ್ ಫಂಡ್ ಹಗರಣ, ಲೂಯಿಸ್ ಬರ್ಗರ್ ಲಂಚ ಹಗರಣದ ಆರೋಪಿ ಹಿಮಂತ್ ಬಿಸ್ವ ಶರ್ಮಾ ನಿಮ್ಮ ಪಕ್ಷ ಸೇರಿದ ಮೇಲೆ ಅಸ್ಸಾಂ ಸಿಎಂ ಆಗಿದ್ದಾರೆ. ಹಾಗಾದರೆ ಅವರ ವಿರುದ್ದದ ಭ್ರಷ್ಟಾಚಾರದ ಆರೋಪ ಏನಾಯ್ತು?, ಮಹಾರಾಷ್ಟ್ರದ ಅಶೋಕ್ ಚೌಹಾಣ್ ವಿರುದ್ಧ ಆದರ್ಶ್ ಹೌಸಿಂಗ್ ಸೊಸೈಟಿ ಆರೋಪವಿದೆ. ಈ ಹಗರಣದ ಬಗ್ಗೆ ನಿಮ್ಮದೇ ಸರಕಾರ ಲೋಕಸಭೆಯಲ್ಲಿ ಶ್ವೇತಪತ್ರ ಹೊರಡಿಸಿತ್ತು. ಇದೀಗ ಅಶೋಕ್ ಚೌಹಾಣ್ ನಿಮ್ಮ ಪಕ್ಷ ಸೇರಿದ್ದಾರೆ. ಅದಕ್ಕೆ ಪ್ರತಿಫಲವಾಗಿ ನೀವು ಅವರಿಗೆ ರಾಜ್ಯಸಭಾ ಸದಸ್ಯತ್ವ ದಯಪಾಲಿಸಿದ್ದೀರಿ. ಏನಿದರ ಮರ್ಮ ಮೋದಿಯವರೆ?’ ಎಂದು ಅವರು ಕೇಳಿದ್ದಾರೆ.

‘ಭ್ರಷ್ಟಾಚಾರದ ವಿರುದ್ಧ ಬೊಗಳೆ ಭಾಷಣ ಬಿಗಿಯುವ ಮೋದಿಯವರಿಗೆ ಕೆಲ ಮೂಲಭೂತ ಪ್ರಶ್ನೆಗಳು. ಮೋದಿಯವರೆ, ಈ ಪ್ರಶ್ನೆಗಳಿಗೆ ನೀವಾದರೂ ಉತ್ತರಿಸಿ. ನಿಮ್ಮ ಪಕ್ಷದ ಇತರ ನಾಯಕರಿಂದಾದರೂ ಉತ್ತರ ಕೊಡಿಸಿ. ಪ್ರಧಾನಿಯವರೆ, ನೀವು ಪ್ರಾಮಾಣಿಕವಾಗಿ ಭ್ರಷ್ಟಾಚಾರದ ವಿರುದ್ಧವಾಗಿದ್ದರೆ ಇತರೆ ಪಕ್ಷದ ಭ್ರಷ್ಟಾಚಾರಿಗಳನೆಲ್ಲಾ ರತ್ನಗಂಬಳಿ ಹಾಸಿ ನಿಮ್ಮ ಪಕ್ಷಕ್ಕೇಕೆ ಸೇರಿಸಿಕೊಳ್ಳುತ್ತಿದ್ದೀರಿ?. ಆ ಭ್ರಷ್ಟಚಾರಿಗಳೆಲ್ಲಾ ನಿಮ್ಮ ಪಕ್ಷ ಸೇರಿದ ಮೇಲೆ ಅವರ ವಿರುದ್ಧದ ತನಿಖೆಗಳು ಸ್ಥಗಿತಗೊಳ್ಳುವುದ್ಯಾಕೆ?’ ಎಂದು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X