Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಾಸಕ ಸ್ಥಾನದಿಂದ ಮುನಿರತ್ನ ಅವರನ್ನು...

ಶಾಸಕ ಸ್ಥಾನದಿಂದ ಮುನಿರತ್ನ ಅವರನ್ನು ಅನರ್ಹಗೊಳಿಸಿ: ಡಿ.ಕೆ. ಸುರೇಶ್

ವಾರ್ತಾಭಾರತಿವಾರ್ತಾಭಾರತಿ14 Sept 2024 6:14 PM IST
share
ಶಾಸಕ ಸ್ಥಾನದಿಂದ ಮುನಿರತ್ನ ಅವರನ್ನು ಅನರ್ಹಗೊಳಿಸಿ: ಡಿ.ಕೆ. ಸುರೇಶ್

ಬೆಂಗಳೂರು: ಜಾತಿ ನಿಂದನೆ, ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಹಾಗೂ ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಶಾಸಕ ಮುನಿರತ್ನ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಬೇಕು ಹಾಗೂ ಸ್ಪೀಕರ್ ಅವರು ಶಾಸಕ ಸ್ಥಾನದಿಂದ ವಜಾ ಮಾಡಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದರು.

ಶನಿವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮುನಿರತ್ನ ಅವರಂತ ನಾಯಕರು ರಾಜ್ಯದಲ್ಲಿ ಇದ್ದರೆ ಜಾತಿ ಸಂಘರ್ಷಗಳು ಹೆಚ್ಚಾಗುತ್ತವೆ. ಆದ ಕಾರಣಕ್ಕೆ ಇವರ ಮೇಲೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಹಾಗೂ ಗೃಹ ಸಚಿವರಲ್ಲಿ ಮನವಿ ಮಾಡುತ್ತೇನೆ ಎಂದರು.

ಬಿಜೆಪಿ ಕೇಂದ್ರ ನಾಯಕರಿಗೆ ಕಿವಿ ಕೇಳಿಸುತ್ತಿದ್ದರೆ, ಕೀಳು ಮಟ್ಟದ ಪದ ಬಳಕೆ ಮಾಡಿರುವ ಈ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲಿ. ಸಮುದಾಯದ ತಾಯಂದಿರನ್ನು ಮುನಿರತ್ನ ಅವಮಾನಿಸಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್ ಇದಕ್ಕೆ ಏನು ಉತ್ತರಿಸುತ್ತೀರಾ? ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಇದರ ಬಗ್ಗೆ ಉತ್ತರಿಸಬೇಕು ಎಂದು ಸುರೇಶ್ ಹೇಳಿದರು.

ಬಾಯಲ್ಲಿ ರಾಮನ ಜಪ, ಮಹಿಳೆಯರಿಗೆ ಅಪಮಾನ: ಒಂದು ಕಡೆ ರಾಮನ, ಸಂಸ್ಕøತಿಯ ಜಪ ಮಾಡುತ್ತ ಇನ್ನೊಂದು ಕಡೆ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡುವುದು. ಎಲ್ಲಿ, ಯಾರ ಬಳಿ ಮಾತನಾಡುತ್ತ ಇದ್ದೀನಿ ಎನ್ನುವ ಅರಿವೂ ಅವರಿಗಿಲ್ಲದೇ ಹೆಂಡತಿ, ತಾಯಿಯನ್ನು ಮಂಚಕ್ಕೆ ಕರೆಯುವ ಕೆಟ್ಟ ಪ್ರವೃತ್ತಿ ಕೇಂದ್ರದ ಬಿಜೆಪಿ ನಾಯಕರಿಗೆ ಕೇಳಿಸುತ್ತಿಲ್ಲವೇ? ಆರೆಸ್ಸೆಸ್ ನಂಟು ಇಟ್ಟುಕೊಂಡಿರುವ ಇವರ ನಡವಳಿಕೆ ನಾಚಿಕೆ ತರುವಂತಹದ್ದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಒಕ್ಕಲಿಗರನ್ನು ಅಪಮಾನ ಮಾಡಲಾಗಿದೆ. ಈಗ ಸಮುದಾಯದ ಪರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ನಿಲ್ಲುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರೇಶ್, ಇದರ ಬಗ್ಗೆ ಕುಮಾರಸ್ವಾಮಿ ಏನೇನು ಹೇಳಿಕೆ ನೀಡುತ್ತಾರೆ ಎಂಬುದನ್ನು ಮಧ್ಯಮದವರು ಗಮನಿಸಿ ನೋಡಿ. ನರೇಂದ್ರ ಮೋದಿಗೆ ಹೇಳಿ ಮುನಿರತ್ನರನ್ನು ಪಕ್ಷ ವಜಾ ಮಾಡಿಸುತ್ತಾರೆ ಎಂದು ಹೇಳಿದರು.

ರೇಣುಕಾಸ್ವಾಮಿಗೆ ಆದ ಗತಿ ನಿನಗೆ ಆಗುತ್ತದೆ ಎಂದು ಗುತ್ತಿಗೆದಾರನಿಗೆ ಮುನಿರತ್ನ ಬೆದರಿಕೆ ಹಾಕಿರುವ ಆರೋಪದ ಕುರಿತು ಪ್ರತಿಕ್ರಿಯಿಸಿದ ಸುರೇಶ್, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದೀಪಕ್, ಮುನಿರತ್ನ ಸಂಬಂಧಿ. ನೂರಕ್ಕೆ ನೂರರಷ್ಟು ಇದಕ್ಕೆ ಇವರ ಸಂಬಂಧ ಇದ್ದೇ ಇರುತ್ತದೆ. ಆಡಿಯೋದಲ್ಲಿ ರೌಡಿ ಸೈಲೆಂಟ್ ಸುನೀಲ್ ಹೆಸರು ಹೇಳಿದ್ದಾರೆ. ಅಂದರೆ ಯಾವ ರೀತಿಯ ವಾತಾವರಣ ಸೃಷ್ಟಿ ಮಾಡಿದ್ದಾರೆ ಎಂಬುದು ಇದನ್ನು ನೋಡಿದರೆ ತಿಳಿಯುತ್ತದೆ ಎಂದರು.

ಗೃಹ ಮಂತ್ರಿ ಇದರ ಬಗ್ಗೆ ಹೆಚ್ಚು ಗಮನ ಕೊಡಬೇಕು. ಮುನಿರತ್ನ ಮೇಲೆ ಯಾವ, ಯಾವ ಆರೋಪಗಳಿಗೆ ಅದನ್ನು ಮುಂದಿಟ್ಟುಕೊಂಡು ಕಾನೂನು ಕ್ರಮ ತೆಗೆದುಕೊಳ್ಳಬೇಕು. ಒಕ್ಕಲಿಗರ ಹಾಗೂ ದಲಿತರ ಮತ ಬೇಕಾದಾಗ ಕಾಲಿಗೆ ಬೀಳುವ ಮುನಿರತ್ನ, ಇಷ್ಟು ಹೀನಾಯವಾಗಿ ಮಾತನಾಡುತ್ತಾನೆ. ಏನೇನೋ ಪ್ರಸಾರ ಮಾಡುವ ಮಾಧ್ಯಮಗಳು, ಇಂತಹ ಸಮಾಜ ಘಾತುಕ ಶಕ್ತಿಯ ವಿರುದ್ಧ ಪ್ರಸಾರ ಮಾಡಬೇಕು ಎಂದು ಅವರು ಹೇಳಿದರು.

ನಾಗಮಂಗಲದಲ್ಲಿನ ಗಲಾಟೆ ಕಾಂಗ್ರೆಸ್ ಚಿತಾವಣೆ ಎಂದು ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಅವರು, ವಾರಕ್ಕೊಮ್ಮೆ ಬಂದು ಏನೇನೋ ಮಾತನಾಡುವ ಕುಮಾರಸ್ವಾಮಿಯೇ ಇದಕ್ಕೆ ಕಾರಣ ಇರಬಹುದು ಎಂದು ನಾನೂ ಹೇಳಬಹುದು ಅಲ್ಲವೇ? ಅವರು ಏನು ಆರೋಪ ಮಾಡುತ್ತಾರೋ ಆದೇ ರೀತಿ ನಾನೂ ಆರೋಪ ಮಾಡುತ್ತೇನೆ ಎಂದರು.

ರಾಹುಲ್ ಗಾಂಧಿ ಭೇಟಿ ಕಾಕತಾಳೀಯ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುಟುಂಬದ ಜೊತೆ ಪ್ರವಾಸಕ್ಕೆ ತೆರಳಿ ಐದಾರು ವರ್ಷಗಳೇ ಕಳೆದಿದ್ದವು. ಅನೇಕ ಬಾರಿ ನ್ಯಾಯಾಲಯದಿಂದ ಅನುಮತಿ ಪಡೆಯಲು ಆಗಿರಲಿಲ್ಲ. ಅಮೇರಿಕಾ ಭೇಟಿ ಬಗ್ಗೆ ಮಾಧ್ಯಮಗಳು ಉಹಾಪೋಹದ ಸುದ್ದಿಗಳನ್ನು ಮಾಡುತ್ತಿವೆ. ಅಲ್ಲಿ ರಾಹುಲ್ ಗಾಂಧಿ ಅವರ ಭೇಟಿ ಕಾಕತಾಳೀಯ ಎಂದು ಸುರೇಶ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X