Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡಿ.ಕೆ. ಸಹೋದರರನ್ನು ಟೀಕಿಸಿ ರಾಜಕೀಯ...

ಡಿ.ಕೆ. ಸಹೋದರರನ್ನು ಟೀಕಿಸಿ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಎಚ್‌ಡಿಕೆ, ಯೋಗೇಶ್ವರ್ ಯತ್ನ: ರಮೇಶ್ ಬಾಬು

ವಾರ್ತಾಭಾರತಿವಾರ್ತಾಭಾರತಿ6 Oct 2023 8:31 PM IST
share
ಡಿ.ಕೆ. ಸಹೋದರರನ್ನು ಟೀಕಿಸಿ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಎಚ್‌ಡಿಕೆ, ಯೋಗೇಶ್ವರ್ ಯತ್ನ: ರಮೇಶ್ ಬಾಬು

ಬೆಂಗಳೂರು, ಅ.6: ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಮರಿ ಖರ್ಗೆ ಎಂದಿರುವ ಬಿಜೆಪಿ ನಾಯಕ ಸಿ.ಟಿ.ರವಿ ಅವರನ್ನು ಚಡ್ಡಿ ಎಂದರೇ ತಪ್ಪಿಲ್ಲ ಎಂದು ಕಾಂಗ್ರೆಸ್ ನಾಯಕ ರಮೇಶ್ ಬಾಬು ಟೀಕಿಸಿದ್ದಾರೆ.

ಶುಕ್ರವಾರ ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಸಿ.ಟಿ.ರವಿ ಮಾತನಾಡುವಾಗ ಅತ್ಯಂತ ಕೀಳು ಮಟ್ಟದ ಭಾಷೆ ಬಳಸಿದ್ದಾರೆ. ಕೋಮು ಸೌಹಾರ್ಧತೆಗೆ ಯಾರೇ ಧಕ್ಕೆ ತಂದರು ಅವರ ಬಾಲ ಕತ್ತರಿಸುವುದಾಗಿ ಪ್ರಿಯಾಂಕ್ ಖರ್ಗೆ ಅವರು ಹೇಳಿಕೆ ನೀಡಿದ್ದರು. ಸರಕಾರದ ಒಂದು ಭಾಗವಾಗಿ ಈ ಮಾತನ್ನು ಹೇಳಿದ್ದರು.ಆದರೆ, ಸಿ.ಟಿ.ರವಿ ಅವರು ಬಳಸಿದ ಮರಿ ಖರ್ಗೆ ಪದ ಅತ್ಯಂತ ಕೀಳು ಅಭಿರುಚಿ. ಇಂತಹ ಹೇಳಿಕೆಯನ್ನು ಕಪಿಚೇಷ್ಠೆ ಎಂದು ಕರೆಯಬಹುದು ಎಂದು ಹೇಳಿದರು.

ಕೀಳು ಮಟ್ಟದ ಭಾಷೆಯನ್ನು ಬಿಟ್ಟು ಚರ್ಚೆ ಮಾಡಿದರೆ ಕಾಂಗ್ರೆಸ್ ಪಕ್ಷ ಸದಾ ಸಿದ್ದವಿರುತ್ತದೆ. ಚರ್ಚೆ ಮಾಡಿದಾಗ ಮಾತ್ರ ಒಂದು ಆಲೋಚನೆ ಹುಟ್ಟಲು ಸಾಧ್ಯ. ಮುಂದಾದರು ಕಪಿಚೇಷ್ಟಿಯ ಮಾತುಗಳನ್ನು ಬಿಟ್ಟು, ಕುವೆಂಪು ಅವರ ಆಶಕಯದಂತೆ ಸರ್ವ ಜನಾಂಗದ ಶಾಂತಿಯ ತೋಟದಂತೆ ಬಾಳಿ ಎಂದು ಸಿ.ಟಿ.ರವಿ ಹಾಗೂ ಬಿಜೆಪಿ ನಾಯಕರಿಗೆ ಸಲಹೆ ನೀಡುತ್ತೇನೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ ತನ್ನ ನೆಲೆಯನ್ನು ಕಳೆದುಕೊಂಡಿದೆ. ಆದ ಕಾರಣಕ್ಕೆ ತನ್ನ ಪಕ್ಷದ ಅನೇಕ ಹಿರಿಯ ನಾಯಕರಿಗೆ ವಿಶ್ರಾಂತಿ ನೀಡುವುದರ ಮೂಲಕ ಹೈಕಮಾಂಡ್ ಮನೆಗೆ ಕಳುಹಿಸಿದೆ. ಮತ್ತೊಂದೆಡೆ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರತ್ನಗಂಬಳಿ ಸ್ವಾಗತ ನೀಡಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಈಶ್ವರಪ್ಪ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಅನೇಕ ನಾಯಕರುಗಳಿಗೆ ವಿಶ್ರಾಂತಿಯ ಸೂಚನೆ ನೀಡಿದೆ ಎಂದು ಆರೋಪಿಸಿದರು.

ʼʼರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಯತ್ನʼʼ

ಅಭೂತಪೂರ್ವ ಜೋಡಿಗಳಾಗಿ ಕುಮಾರಸ್ವಾಮಿ ಅವರು ಮತ್ತು ಸಿ.ಪಿ.ಯೋಗಿಶ್ವರ್ ಇಬ್ಬರೂ ಸೇರಿಕೊಂಡು ಕೀಳು ಹಾಗೂ ವೈಯಕ್ತಿಕ ಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ರಾಜಕೀಯ ಅನಿವಾರ್ಯತೆ ಈ ಇಬ್ಬರಿಗೂ ಹೆಚ್ಚಾಗಿ ಕಾಡುತ್ತಿದೆ. ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರನ್ನು ಟೀಕೆ ಮಾಡಿದರೆ ಮಾತ್ರ ತಮ್ಮ ರಾಜಕೀಯ ಅಸ್ತಿತ್ವ ಉಳಿಯುತ್ತದೆ ಎಂದು ನಂಬಿದ್ದಾರೆ. ಯೋಗೇಶ್ವರ್ ಅವರು ಬಿಜೆಪಿಯಿಂದ ಒಂದು ಸಲ ಗೆಲುವು ಸಾಧಿಸಿದ್ದು ಬಿಟ್ಟರೆ ಕಳೆದ 15 ವರ್ಷಗಳಲ್ಲಿ ಗೆಲುವು ಅನ್ನುವುದನ್ನೇ ಕಂಡಿಲ್ಲ ಎಂದರು.

ಇನ್ನೊಂದೆಡೆ, ಕುಮಾರಸ್ವಾಮಿ ಅವರು ತಮ್ಮ ಕುಟುಂಬವನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ, ಚನ್ನಪಟ್ಟಣವನ್ನು ಉಳಿಸಿಕೊಳ್ಳುವ ಸಲುವಾಗಿ ಈ ರೀತಿಯ ರಾಜಕಾರಣ ಮಾಡುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಬರುವುದಕ್ಕಿಂತ ಮುಂಚೆ, ಪರಸ್ಪರ ಅವಹೇಳನ ಮಾಡಿಕೊಂಡು ರಾಮನಗರದಲ್ಲಿ ಕೆಟ್ಟ ಸಂಸ್ಕøತಿಯನ್ನು ಹುಟ್ಟು ಹಾಕಿದವರು, ಈಗ ಅಭೂತಪೂರ್ವ ಜೋಡಿಗಳಾಗಿ ಪಕ್ಷ ಕಟ್ಟುತ್ತಾರೆ ಎಂದರೆ ಕಟ್ಟಲಿ ಇದೊಂದು ಸಂತಸದ ವಿಚಾರ.

ಆದರೆ ಪದೇ, ಪದೇ ಡಿ.ಕೆ.ಸಹೋದರರನ್ನು ವಿನಾಕಾರಣ ಟೀಕೆ ಮಾಡುತ್ತಾ, ಅವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಾ ರಾಜಕಾರಣ ಮಾಡಲು ಮುಂದಾಗಿದ್ದಾರೆ ಎಂದು ರಮೇಶ್ ಬಾಬು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X