Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಪಕ್ಷಗಳು ರಾಜ್ಯ ಸರಕಾರದ ಕೆಲಸವನ್ನು...

ವಿಪಕ್ಷಗಳು ರಾಜ್ಯ ಸರಕಾರದ ಕೆಲಸವನ್ನು ಕಾಮಾಲೆ ಕಣ್ಣಿಂದ ನೋಡುವುದನ್ನು ಬಿಡಲಿ : ಡಿ.ಕೆ.ಶಿವಕುಮಾರ್

► "ಬೆಲೆ ಏರಿಕೆಯಿಂದ ಹೆಣ್ಣು ಮಕ್ಕಳು ಚಿನ್ನದ ಮಾಂಗಲ್ಯ ಸರ ಖರೀದಿಸಲು ಸಾಧ್ಯವಾಗುತ್ತಿಲ್ಲ" ► ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 April 2025 4:18 PM IST
share
ವಿಪಕ್ಷಗಳು ರಾಜ್ಯ ಸರಕಾರದ ಕೆಲಸವನ್ನು ಕಾಮಾಲೆ ಕಣ್ಣಿಂದ ನೋಡುವುದನ್ನು ಬಿಡಲಿ : ಡಿ.ಕೆ.ಶಿವಕುಮಾರ್

ಬೆಂಗಳೂರು : “ದೇಶದಲ್ಲಿ ಇಂಧನ, ಅಗತ್ಯ ವಸ್ತುಗಳು, ರಸಗೊಬ್ಬರ, ಚಿನ್ನ, ಸಿಮೆಂಟ್, ಕಬ್ಬಿಣ ಸೇರಿದಂತೆ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರಕಾರ. ಜನರ ಮೇಲೆ ಈ ಬೆಲೆ ಏರಿಕೆ ಹೊರೆ ತಗ್ಗಿಸಲು ನಾವು ಗ್ಯಾರಂಟಿ ಯೋಜನೆ ಕೊಟ್ಟಿದ್ದು, ರೈತರ ಬದುಕು ಕಾಪಾಡಲು ಹಾಲಿನ ಬೆಲೆ ಏರಿಸಿದ್ದೇವೆ. ಹೀಗಾಗಿ ಜನಾಕ್ರೋಶ ಏನಿದ್ದರೂ ಬಿಜೆಪಿ ಸರಕಾರದ ವಿರುದ್ಧ ವ್ಯಕ್ತವಾಗಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದರು.

ಕೇಂದ್ರ ಬಿಜೆಪಿ ಸರಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರಕಾರ. ಹೀಗಾಗಿ ಬಿಜೆಪಿ ನಾಯಕರ ಆಕ್ರೋಶ ಏನಿದ್ದರೂ ಕೇಂದ್ರ ಸರಕಾರದ ವಿರುದ್ಧ ಇರಬೋಕೇ ಹೊರತು, ಬಡವರ ಪರವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವ ಕಾಂಗ್ರೆಸ್ ಸರಕಾರದ ವಿರುದ್ಧವಲ್ಲ. ಬಿಜೆಪಿಯಲ್ಲಿ ಹಾಗೂ ಜನತಾ ದಳದಲ್ಲಿ ಆಂತರಿಕ ಜಗಳ, ನಾಯಕತ್ವದ ಕೊರತೆ ಮುಚ್ಚಿಡಲು ಇಂದು ರಾಜ್ಯಾದ್ಯಂತ ಹೋರಾಟ ಮಾಡಲು ಮುಂದಾಗಿದ್ದಾರೆ. ನಮ್ಮದು ರೈತಪರ ಸರಕಾರ, ಎಲ್ಲಾ ವರ್ಗದ ಜನರ ಪರವಾದ ಸರಕಾರ. ನಾವು ರೈತರಿಗೆ ನೆರವಾಗಲು ಹಾಲಿನ ಬೆಲೆ ರೂ.4 ಹೆಚ್ಚಳ ಮಾಡಿದ್ದೇವೆ. ದನಕರುಗಳ ಮೇವುಗಳಾದ ಇಂಡಿ, ಬೂಸಾ ಬೆಲೆ ಹೆಚ್ಚಾಗಿದೆ. ಹೀಗಾಗಿ ನಾವು ರೈತರಿಗೆ ನೆರವಾಗಲು ರೂ.4 ಹೆಚ್ಚಿಗೆ ಸಿಗುವಂತೆ ಮಾಡಿದರೆ ಪ್ರತಿಭಟನೆ ಮಾಡುತ್ತೀರಿ. ಆಮೂಲಕ ನೀವು ರೈತ ವಿರೋಧಿ ಎಂಬುದನ್ನು ಸಾಬೀತುಪಡಿಸಿದ್ದೀರಿ” ಎಂದು ಹರಿಹಾಯ್ದರು.

ಬೆಲೆ ಹೆಚ್ಚಿಸಿದರೂ ಹಾಲಿನ ದರ ನಮ್ಮಲ್ಲೇ ಕಡಿಮೆ:

“ಹಾಲಿನ ಬೆಲೆ ಕೇರಳದಲ್ಲಿ 52, ಗುಜರಾತ್ 53, ದೆಹಲಿ 55, ಮಹಾರಾಷ್ಟ್ರದಲ್ಲಿ 52, ತೆಲಂಗಾಣದಲ್ಲಿ 58, ಅಸ್ಸಾಂ 60, ಹರಿಯಾಣದಲ್ಲಿ 56, ರಾಜಸ್ಥಾನದಲ್ಲಿ 50, ಮಧ್ಯಪ್ರದೇಶದಲ್ಲಿ 52, ಪಂಜಾಬ್ ನಲ್ಲಿ 56, ಉತ್ತರ ಪ್ರದೇಶದಲ್ಲಿ 56 ರೂಪಾಯಿಗಳಿವೆ. ನಮ್ಮ ರಾಜ್ಯದಲ್ಲಿ ಈ ಎಲ್ಲಾ ರಾಜ್ಯಗಳಿಗಿಂತ 10-12 ರೂಪಾಯಿ ಕಡಿಮೆ ಇದೆ. ನಾವು ರೈತರ ಬದುಕು ರಕ್ಷಣೆಗೆ 4 ರೂಪಾಯಿ ಹೆಚ್ಚಿಸಿದ್ದೇವೆ ಎಂದರು.

ಮಾಂಗಲ್ಯ ಸರ ಖರೀದಿಸಲು ಸಾಧ್ಯವಾಗುತ್ತಿಲ್ಲ :

ಕೇಂದ್ರ ಬಿಜೆಪಿ ಸರಕಾರದಿಂದ ಸಿಮೆಂಟ್, ಕಬ್ಬಿಣ, ಅಡುಗೆ ಎಣ್ಣೆ, ಸೋಪು, ಉಪ್ಪು, ಟಿವಿ, ಟೂತ್ ಬ್ರೇಷ್, ಸೇರಿದಂತೆ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ. ಕಳೆದ 11 ವರ್ಷಗಳಿಂದ ಹೆಣ್ಣು ಮಕ್ಕಳು ಚಿನ್ನದ ಮಾಂಗಲ್ಯ ಸರ ಖರೀದಿಸಲು ಸಾಧ್ಯವಾಗುತ್ತಿಲ್ಲ. 10 ಗ್ರಾಂ ಚಿನ್ನ 40 ಸಾವಿರದಿಂದ 96 ಸಾವಿರಕ್ಕೆ ಏರಿಕೆಯಾಗಿದೆ. 10 ಸಾವಿರ ಇದ್ದ ಮೊಬೈಲ್ 30 ಸಾವಿರವಾಗಿದೆ. ಸಿಮೆಂಟ್ 268 ರಿಂದ 410 ಆಗಿದೆ. ಇದಕ್ಕೆಲ್ಲ ಯಾರು ಕಾರಣ? ಬಿಜೆಪಿ. ಹೀಗಾಗಿ ಜನಾಕ್ರೋಶ ಬಿಜೆಪಿ ಸರಕಾರದ ವಿರುದ್ಧ ಆಗಬೇಕು” ಎಂದು ತಿರುಗೇಟು ನೀಡಿದರು.

ಜಿಲ್ಲಾ ಮಟ್ಟದಲ್ಲೂ ಪ್ರತಿಭಟನೆ ಮಾಡಿ :

“ರಾಜ್ಯ ಹಾಗೂ ದೇಶದ ಜನ ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡಿದರು. 2023ರ ವಿಧಾನಸಭೆ ಚುನಾವಣೆಯಲ್ಲಿ ನಾನು ಭವಿಷ್ಯ ನುಡಿದಂತೆ 136 ಸೀಟು ಗೆದ್ದೆವು. ನಂತರ ಬಂದ ಉಪಚುನಾವಣೆಗಳಲ್ಲಿ ಚನ್ನಪಟ್ಟಣ, ಶಿಗ್ಗಾಂವ್ ಹಾಗೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತು. ಈ ಮೂರರಲ್ಲಿ ಜನ ಎರಡು ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನು ಸೋಲಿಸಿದರು. ಇದಕ್ಕೆ ಕಾರಣವೇನು ಎಂದು ಬಿಜೆಪಿ ನಾಯಕರು ಹೇಳಬೇಕು” ಎಂದು ಪ್ರಶ್ನಿಸಿದರು.

ಕಾಮಾಲೆ ಕಣ್ಣಿಂದಲ್ಲ, ಆತ್ಮಸಾಕ್ಷಿಯಿಂದ ನೋಡಿ :

“ರಸ್ತೆ ಸರಿ ಇಲ್ಲವಾದರೆ ಕುದುರೆ ಮೇಲೆ ಹೋಗಿ, ಕರೆಂಟ್ ಇಲ್ಲವಾದರೆ ತಂತಿ ಹಿಡಿದು ನೋಡಿ ಎಂದು ಮಾಜಿ ಸಿಎಂ ಜೆ.ಹೆಚ್ ಪಟೇಲರು ಹೇಳಿದ್ದರು. ಆದರೆ ನಾನು ಆ ರೀತಿ ಹೇಳುವುದಿಲ್ಲ. ನಮ್ಮ ಸರಕಾರ ಕಳೆದ 2 ವರ್ಷಗಳಿಂದ ಯಶಸ್ವಿಯಾಗಿ ಉತ್ತಮ ಆಡಳಿತ ನೀಡುತ್ತಾ ಬಂದಿದ್ದೇವೆ. ನಿನ್ನೆ ನಾನು ಹಾಗೂ ಮುಖ್ಯಮಂತ್ರಿಗಳು ಕಲಬುರ್ಗಿ ಹಾಗೂ ಬೀದರ್ ಗೆ ತೆರಳಿ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದೆವು. ಬೀದರ್ ಒಂದೇ ಜಿಲ್ಲೆಯಲ್ಲಿ ರೂ. 2025 ಕೋಟಿ ಮೊತ್ತದ ಕಾಮಗಾರಿಗೆ ಚಾಲನೆ ನೀಡಿ ಬಂದಿದ್ದೇವೆ. ಕಲಬುರಗಿಯಲ್ಲಿ ಉದ್ಯೋಗ ಮೇಳ ನಡೆಸಲಾಗಿತ್ತು, ಕಲ್ಯಾಣ ಪಥ ಯೋಜನೆ ಮೂಲಕ ರಸ್ತೆ ಅಭಿವೃದ್ಧಿಗೆ ರೂ.1500 ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರೂ.5 ಸಾವಿರ ಕೋಟಿ ಮೀಸಲಿಡಲಾಗಿದೆ. ನನ್ನ ಇಲಾಖೆಯಲ್ಲಿ ರೂ.22 ಸಾವಿರ ಕೋಟಿ ಮೀಸಲಿಡಲಾಗಿದೆ” ಎಂದು ತಿಳಿಸಿದರು.

“ಬೆಂಗಳೂರು ನಗರದಲ್ಲಿ ಮೆಟ್ರೋ ವಿಸ್ತರಣೆ, ಟನಲ್ ರಸ್ತೆ, ಎಲಿವೇಟೆಡ್ ಕಾರಿಡಾರ್, ವಿದ್ಯುತ್, ಕಸ ನಿರ್ವಹಣೆಗಾಗಿ 1 ಲಕ್ಷ ಕೋಟಿ ಮೊತ್ತದ ಕಾರ್ಯಕ್ರಮ ರೂಪಿಸಲಾಗಿದೆ. ಇದೆಲ್ಲವೂ ಅಭಿವೃದ್ಧಿಯಲ್ಲವೇ? ವಿರೋಧ ಪಕ್ಷಗಳು ನಮ್ಮ ಸರಕಾರದ ಕೆಲಸಗಳನ್ನು ಕಾಮಾಲೆ ಕಣ್ಣಿನಲ್ಲಿ ನೋಡುತ್ತಿವೆ. ನೀವು ನಿಮ್ಮ ಆತ್ಮಸಾಕ್ಷಿ ದೃಷ್ಟಿಯಲ್ಲಿ ನೋಡಿ, ಆಗ ನಮ್ಮ ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಕಾಣುತ್ತವೆ” ಎಂದು ಸವಾಲೆಸೆದರು.

ಕುಮಾರಸ್ವಾಮಿ ಅಣ್ಣ ತಮ್ಮಂದಿರ ಆಸ್ತಿಯನ್ನು ನಾನಿನ್ನೂ ಬಿಚ್ಚಿಟ್ಟಿಲ್ಲ :

“ಕುಮಾರಸ್ವಾಮಿ ನನ್ನ ವಿರುದ್ಧ ಟನ್ ಗಟ್ಟಲೆ ಸಾಕ್ಷಾಧಾರಗಳನ್ನು ಇಟ್ಟುಕೊಂಡಿದ್ದಾರೆ. ಇದನ್ನು ಏಕೆ ಇಟ್ಟುಕೊಂಡಿದ್ದಾರೆ, ಲಾರಿಗಳಲ್ಲಿ ರಾಜ್ಯಪಾಲರ ಬಳಿ ಕಳುಹಿಸುತ್ತಿಲ್ಲ ಏಕೆ? ಮಿಸ್ಟರ್ ಕುಮಾರಸ್ವಾಮಿ, ಈ ಡಿ.ಕೆ. ಶಿವಕುಮಾರ್ ನಿನ್ನ ಹಾಗೂ ಬಿಜೆಪಿಯ ಗೊಡ್ಡು ಬೆದರಿಕೆಗೆ ಹೆದರುವ ಮಗ ಅಲ್ಲ. ನಮ್ಮ ಕಷ್ಟ, ನಮ್ಮ ಶ್ರಮ, ನಮ್ಮ ಬದುಕು. ನಾವು ಆಸ್ತಿ ಮಾಡಿಕೊಳ್ಳುತ್ತೇವೆ. ಅದರ ಸತ್ಯಾಸತ್ಯತೆ ಸರಕಾರ ಪರಿಶೀಲನೆ ಮಾಡಲಿ. ನಾನು ನಿನ್ನ ಚರಿತ್ರೆಯನ್ನು ಇನ್ನು ಬಿಚ್ಚಿಲ್ಲ. ನಿಮ್ಮ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು ಎಂಬುದನ್ನು ನಾನಿನ್ನು ಬಿಚ್ಚಿಟ್ಟಿಲ್ಲ” ಎಂದು ವಾಗ್ದಾಳಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X