Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂಜೆ 7 ಗಂಟೆ ಬಳಿಕ ಯಾವುದೇ ವ್ಯಾಪಾರ...

ಸಂಜೆ 7 ಗಂಟೆ ಬಳಿಕ ಯಾವುದೇ ವ್ಯಾಪಾರ ಚಟುವಟಿಕೆಗಳು ಇಲ್ಲದೆ ಮಂಗಳೂರು ಸತ್ತು ಹೋಗಿದೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ19 Aug 2025 9:35 PM IST
share
ಸಂಜೆ 7 ಗಂಟೆ ಬಳಿಕ ಯಾವುದೇ ವ್ಯಾಪಾರ ಚಟುವಟಿಕೆಗಳು ಇಲ್ಲದೆ ಮಂಗಳೂರು ಸತ್ತು ಹೋಗಿದೆ : ಡಿ.ಕೆ.ಶಿವಕುಮಾರ್

ಬೆಂಗಳೂರು, ಆ.19: ಮಂಗಳೂರು ದೊಡ್ಡ ನಗರವಾಗಿ ಗುರುತಿಸಿಕೊಂಡಿದ್ದರೂ ಸಂಜೆ ಏಳು ಗಂಟೆ ಬಳಿಕ ಯಾವುದೇ ವ್ಯಾಪಾರ-ವಾಹಿವಾಟು ಚಟುವಟಿಕೆಗಳು ಇಲ್ಲದೆ ಸತ್ತು ಹೋಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಂಗಳವಾರ ಶಾಸನ ರಚನಾ ಕಲಾಪದಲ್ಲಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಅವರು ಮಂಡಿಸಿದ ಕೆರೆಗಳ ಸಂರಕ್ಷಣೆ ಹಿನ್ನೆಲೆ 2025ನೆ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕದ ಚರ್ಚೆಯಲ್ಲಿ ಉಪಮುಖ್ಯಮಂತ್ರಿ ಮಾತನಾಡಿದರು.

ಮಂಗಳೂರಿನಲ್ಲಿ ಅತಿ ಹೆಚ್ಚು ವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜುಗಳಿವೆ. ಆದರೆ ಒಂದೇ ಒಂದು ಪಂಚತಾರ ಹೋಟೆಲ್‍ಗಳಿಲ್ಲ. ಏರ್‌ ಪೋರ್ಟ್ ಇದ್ದರು ಅಲ್ಲಿ ಹೋಟೆಲ್ ನಿರ್ಮಾಣಕ್ಕೆ ಬಂಡವಾಳ ಹೂಡಲು ಹೆದರುತ್ತಿದ್ದಾರೆ. ಅಲ್ಲದೆ, ನಾನು ಗ್ರಾನೈಟ್ ವ್ಯವಹಾರ ಮಾಡುತ್ತಿದ್ದ ವೇಳೆ ಮಂಗಳೂರಿಗೆ ಕಲ್ಲು ಸರಬರಾಜು ಮಾಡುತ್ತಿದ್ದೆ. ಆಗ ತುಂಬಾ ನಗರ ಚಟುವಟಿಕೆಯಿಂದ ಕೂಡಿತ್ತು. ಆದರೆ ಈಗ ಸಂಪೂರ್ಣ ಸತ್ತು ಹೋಗಿದೆ, ಚಟುವಟಿಕೆಗಳೆ ಇಲ್ಲ ಎಂದು ತಿಳಿಸಿದರು.

ನಾವೆಲ್ಲರೂ ಕಳಕಳಿಯಿಂದ ಕೆಲಸ ಮಾಡುತ್ತಿದ್ದೇವೆ. ಕರಾವಳಿಯ ಜನರ ಬಗ್ಗೆ ನಮಗೆ ಕಾಳಜಿಯಿದೆ ಏಕೆಂದರೆ ಕೆರೆ ಬಫರ್ ವಲಯದ ಕಾರಣಕ್ಕೆ ಅವರ ಬದುಕಿಗೆ ಕಷ್ಟವಾಗುತ್ತದೆ. ಮನೆಗಳನ್ನು ಕಟ್ಟಿಕೊಳ್ಳಲು ಆಗುವುದೇ ಇಲ್ಲ. ಕೇರಳ, ಗೋವಾದವರು ಎನ್‍ಜಿಟಿ, ಕೇಂದ್ರ ಸರಕಾರ ಹೀಗೆ ಎಲ್ಲರಿಂದಲೂ ಅನುಮತಿ ಪಡೆದಿದ್ದಾರೆ. ಆದರೆ ನಾವು ಒದ್ದಾಡುತ್ತಿದ್ದೇವೆ. ಸಿಆರ್‍ಜೆಡ್ ನಿಂದಲೂ ಕರಾವಳಿಯವರು ತೊಂದರೆಗೆ ಒಳಗಾಗುತ್ತಿದ್ದಾರೆ. ಇದನ್ನು ಮೀರಿ ಕೆಲಸ ಮಾಡುವುದು ಹೇಗೆ ಎನ್ನುವುದರ ಬಗ್ಗೆ ನಾನು ಆಲೋಚಿಸಿದ್ದೇನೆ ಎಂದು ಉಲ್ಲೇಖಿಸಿದರು.

ಮೊದಲು ಇದರ ಬಗ್ಗೆ ಪ್ರಾಥಮಿಕ ಸಭೆ ನಡೆಸಿದ ಮೇಲೆ ಮಂಗಳೂರಿಗೆ ತೆರಳಿ ಉಡುಪಿ ಸೇರಿದಂತೆ ಕರಾವಳಿ ಭಾಗದ ಎಲ್ಲರನ್ನು ಕರೆಸಿ ಚರ್ಚೆ ನಡೆಸೋಣ. ಏಕೆಂದರೆ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗಬೇಕು. ಜನರು ಮುಂಬೈ, ಗೋವಾಗಳಿಗೆ ತೆರಳುವುದು ತಪ್ಪಬೇಕು ಎಂದು ಅವರು ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X