Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಡಿಎಯಿಂದ ಯೋಜನಾ ಪ್ರಾಧಿಕಾರದ...

ಬಿಡಿಎಯಿಂದ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಜಿಬಿಎಗೆ ಹಸ್ತಾಂತರ : ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ10 Oct 2025 9:43 PM IST
share
ಬಿಡಿಎಯಿಂದ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಜಿಬಿಎಗೆ ಹಸ್ತಾಂತರ : ಡಿಸಿಎಂ ಡಿ.ಕೆ.ಶಿವಕುಮಾರ್
"ಜಿಬಿಎ ವಿರೋಧಿಸುವವರು ಪಾಲಿಕೆ ಚುನಾವಣೆಗಳನ್ನು ಬಹಿಷ್ಕರಿಸಲಿ"

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನಗರದ ಯೋಜನಾ ಪ್ರಾಧಿಕಾರದ ಜವಾಬ್ದಾರಿ, ಟಿಡಿಆರ್ ನೀಡುವ ಅಧಿಕಾರವನ್ನು ನೀಡಲಾಗಿದೆ. ಬಿಡಿಎಯಿಂದ ಈ ಅಧಿಕಾರವನ್ನು ಜಿಬಿಎಗೆ ಹಸ್ತಾಂತರಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಜಿಬಿಎ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಮಿತಿಯ ಮೊದಲ ಸಭೆಯಲ್ಲಿ ಹಾಗೂ ಸಭೆಗೂ ಮುನ್ನ ಹಾಗೂ ಸಭೆ ನಂತರ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು.

"ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜಿಬಿಎ ಸಮಿತಿಯ ಮೊದಲ ಸಭೆ ನಡೆದಿದ್ದು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮೊದಲಿಗೆ ಜಿಬಿಎ ಜಾರಿಗೆ ತರುವಲ್ಲಿ ಶ್ರಮಿಸಿದ ಬಿ.ಎಸ್ ಪಾಟೀಲ್, ರವಿಚಂದ್ರನ್, ಸಿದ್ದಯ್ಯ ಅವರನ್ನೊಳಗೊಂಡ ಸಮಿತಿಗೆ ಅಭಿನಂದನೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಅಧಿಕಾರಿಗಳಾದ ತುಷಾರ್ ಗಿರಿನಾಥ್ ಹಾಗೂ ಮಹೇಶ್ವರ್ ರಾವ್ ಅವರ ತಂಡದ ಪರಿಶ್ರಮಕ್ಕೆ ಅಭಿನಂದನೆ ಸಲ್ಲಿಸುವುದು ಹಾಗೂ ವಿರೋಧ ಪಕ್ಷಗಳ ಸಲಹೆ ಮೇರೆಗೆ ಜಂಟಿ ಸದನ ಸಮಿತಿ ಮಾಡಿದೆವು. ರಿಜ್ವಾನ್ ಅರ್ಷದ್ ಅವರ ನೇತೃತ್ವದ ಸಮಿತಿ ಜನರು, ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಇನ್ನು ವಿಧಾನಸಭೆ ಹಾಗೂ ಪರಿಷತ್ ಸದಸ್ಯರು ಇದಕ್ಕೆ ಸಹಕಾರ ನೀಡಿದ್ದು, ಎಲ್ಲಾ ಪಕ್ಷದ ಶಾಸಕರಿಗೆ ಅಭಿನಂದಿಸುವ ನಿರ್ಣಯ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

“ಉಳಿದಂತೆ ಐದು ಪಾಲಿಕೆಗಳ ಕಟ್ಟಡ ನಿರ್ಮಾಣಕ್ಕೆ ಜಾಗಗಳನ್ನು ಗುರುತಿಸಲಾಗಿದೆ. ಬಿಬಿಎಂಪಿ ಮುಖ್ಯಕಚೇರಿಯಾಗಿದ್ದ ಕಟ್ಟಡವು ಜಿಬಿಎ ಕಚೇರಿಯಾಗಿರುತ್ತದೆ. ಬೆಂಗಳೂರು ಕೇಂದ್ರ ಸೇರಿದಂತೆ ನೂತನ ಕಟ್ಟಡ ನಿರ್ಮಾಣ ಆಗುವವರೆಗೂ ಬೇರೆ ಪಾಲಿಕಾಗಳ ಸಭೆಗೆ ಇದೇ ಕಟ್ಟಡದಲ್ಲಿ ಅವಕಾಶ ಮಾಡಿಕೊಡಲಾಗುವುದು. ಇನ್ನು ಎಲ್ಲಾ ಐದು ಪಾಲಿಕೆಗಳ ಕಟ್ಟಡ ವಿನ್ಯಾಸ ಒಂದೇ ರೀತಿ ಇರಲಿದೆ” ಎಂದು ತಿಳಿಸಿದರು.

“ಇಂದು ಪಾಲಿಕೆ ಸಮಿತಿಯ ವೆಚ್ಚದ ಹಣಕಾಸಿನ ಮಿತಿ ಹೆಚ್ಚಿಸಲಾಗಿದೆ. ಪಾಲಿಕೆ ಆಯುಕ್ತರುಗಳ ವೆಚ್ಚದ ಮಿತಿಯನ್ನು 1 ಕೋಟಿ ರೂಪಾಯಿಯಿಂದ 3 ಕೋಟಿ ರೂ. ಏರಿಸಲಾಗಿದೆ. ಆಮೂಲಕ ಐದು ಪಾಲಿಕೆಗಳ ಆಯುಕ್ತರಿಗೆ 15 ಕೋಟಿ ರೂ. ನೀಡಲಾಗುವುದು. ಸ್ಥಾಯಿ ಸಮಿತಿ ವೆಚ್ಚದ ಮಿತಿಯನ್ನು 3 ಕೋಟಿ ರೂಪಾಯಿಯಿಂದ 5 ಕೋಟಿ ರೂಪಾಯಿಗೆ ಏರಿಕೆ ಮಾಡಲಾಗಿದೆ. ಐದು ಪಾಲಿಕೆಗಳ ಸ್ಥಾಯಿ ಸಮಿತಿಗಾಗಿ 25 ಕೋಟಿ ನೀಡಲಾಗುವುದು. ಇನ್ನು ಪಾಲಿಕೆ ಮೇಯರ್ ಅವರ ವೆಚ್ಚದ ಮಿತಿಯನ್ನು 5 ಕೋಟಿಯಿಂದ 10 ಕೋಟಿಗೆ ಏರಿಸಲಾಗಿದ್ದು, ಐದು ಪಾಲಿಕೆಗಳಿಂದ 50 ಕೋಟಿ ರೂ. ಆಗಲಿದೆ. ಇದೊಂದು ಐತಿಹಾಸಿಕ ತೀರ್ಮಾನ” ಎಂದು ತಿಳಿಸಿದರು.

ಬೆಂಗಳೂರಿಗೆ ಹೊಸ ರೂಪ ನೀಡಲು ಜಿಬಿಎ:

“ಬೆಂಗಳೂರಿಗೆ ಹೊಸ ರೂಪ ನೀಡಲು ನಮ್ಮ ಸರ್ಕಾರ ವಿರೋಧ ಪಕ್ಷ ಮತ್ತು ಆಡಳಿತ ಪಕ್ಷದ ಶಾಸಕರು ಹಾಗೂ ಜನರ ಅಭಿಪ್ರಾಯ ಸಂಗ್ರಹಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯ್ದೆಯನ್ನು ರೂಪಿಸಿ ವಿಧಾನ ಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಅನುಮೋದನೆ ಪಡೆಯಿತು. ಏ.23ರಂದು ರಾಜ್ಯಪಾಲರು ಜಿಬಿಎ ಕಾಯ್ದೆಗೆ ಒಪ್ಪಿಗೆ ನೀಡಿದ್ದು, ಸರ್ಕಾರ ಹಾಗೂ ಬೆಂಗಳೂರಿನ ನಾಗರೀಕರ ಪರವಾಗಿ ಘನವೆತ್ತ ರಾಜ್ಯಪಾಲರಿಗೆ ಧನ್ಯವಾದ ತಿಳಿಸುತ್ತೇನೆ. ಮೇ 15ರಂದು ಸರ್ಕಾರ ಜಿಬಿಎ ಕಾಯ್ದೆ ಜಾರಿಗೆ ತಂದು, ಜು.25ರಂದು ಜಿಬಿಎ ಅಡಿಯಲ್ಲಿ ಬೆಂಗಳೂರಿನಲ್ಲಿ ಐದು ಪಾಲಿಕೆ ರಚಿಸಲು ಅಧಿಸೂಚನೆ ಹೊರಡಿಸಲಾಯಿತು” ಎಂದು ಹೇಳಿದರು.

“ಸೆ.2ರಂದು ಈ ಪಾಲಿಕೆಗಳ ರಚನೆ ಆದೇಶ ಹೊರಡಿಸಲಾಗಿದ್ದು, ನಂತರ ಐದು ಪಾಲಿಕೆಗಳಿಗೆ ಆಯುಕ್ತರನ್ನು ನೇಮಿಸಲಾಗಿದೆ. ಬೆಂಗಳೂರು ಕೇಂದ್ರ ಪಾಲಿಕೆಯಲ್ಲಿ 50, ಬೆಂಗಳೂರು ದಕ್ಷಿಣಕ್ಕೆ 72, ಬೆಂಗಳೂರು ಪೂರ್ವಕ್ಕೆ 63, ಬೆಂಗಳೂರು ಪಶ್ಚಿಮದಲ್ಲಿ 111, ಬೆಂಗಳೂರು ಉತ್ತರದಲ್ಲಿ 72 ವಾರ್ಡ್ ಸೇರಿ ಒಟ್ಟು 368 ವಾರ್ಡ್ ಗಳನ್ನು ರಚಿಸಲಾಗಿದೆ. ಈ ಹಿಂದೆ 198 ವಾರ್ಡ್ ಇದ್ದವು, ಈಗ 368 ವಾರ್ಡ್ ಆಗಿವೆ. ಈ ವಾರ್ಡ್ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪಣೆಗೆ ಅವಕಾಶ ಕಲ್ಪಿಸಲಾಗಿದೆ” ಎಂದು ತಿಳಿಸಿದರು.

“74ನೇ ತಿದ್ದುಪಡಿ ಉಲ್ಲಂಘನೆ ಆಗದಂತೆ ನಾವು ಈ ಪಾಲಿಕೆಗಳನ್ನು ರಚಿಸಿದ್ದೇವೆ. ಬೆಂಗಳೂರಿನಲ್ಲಿ ಉತ್ತಮ ಆಡಳಿತ ನೀಡಿ, ಸರ್ಕಾರವನ್ನು ಜನರ ಬಳಿಗೆ ತೆಗೆದು ಕೊಂಡುಹೋಗಬೇಕು. ಬೆಂಗಳೂರು ರಾಜ್ಯದ ಹೃದಯ ಭಾಗ. ಇಲ್ಲಿ 1.40 ಕೋಟಿ ಜನಸಂಖ್ಯೆ ಇದೆ. ಸಂಚಾರ ದಟ್ಟಣೆ ಸೇರಿದಂತೆ ಅನೇಕ ಸಮಸ್ಯೆ ಬಗೆಹರಿಸಲು ಈ ಜಿಬಿಎ ರಚಿಸಲಾಗಿದೆ ಮಾಡಲಾಗಿದೆ. ಸರ್ಕಾರದ ಸಹಕಾರ ಇಲ್ಲದೆ ಯಾವುದೇ ಪಾಲಿಕೆ ಯಶಸ್ವಿಯಾಗಿ ಆಡಳಿತ ಮಾಡಲು ಸಾಧ್ಯವಿಲ್ಲ. ಹೀಗಾಗಿ ಈ ತೀರ್ಮಾನ ಮಾಡಿದ್ದೇವೆ. ಆಮೂಲಕ ಬೆಂಗಳೂರು ಹೊಸ ಇತಿಹಾಸ ಪುಟಕ್ಕೆ ಸೇರಿದೆ” ಎಂದರು.

“ಪಾಲಿಕೆ ಆಡಳಿತ ವ್ಯವಸ್ಥೆಯಲ್ಲಿ ಯಾವುದೇ ಪಕ್ಷ ಗೆದ್ದರು ಸರಕಾರದ ಶ್ರೀರಕ್ಷೆ ಸದಾ ಪಾಲಿಕೆ ಮೇಲೆ ಇರಬೇಕು. ಎಲ್ಲಾ ಸಂದರ್ಭಗಳಲ್ಲಿ ಅನುದಾನದ ನೆರವು ಇರಬೇಕು ಎಂದು ಮುಖ್ಯಮಂತ್ರಿಗಳನ್ನು ಜಿಬಿಎ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಜಿಬಿಎ ಸಮಿತಿಯಲ್ಲಿ ಬಿಡಿಎ, ಬಿಎಂಆರ್ ಡಿಎ, ಬೆಸ್ಕಾಂ, ಬಿಡಬ್ಯೂಎಸ್ ಎಸ್ ಬಿ ಸೇರಿದಂತೆ ಇನ್ನು ಅನೇಕ ಸಂಸ್ಥೆಗಳ ಕಮಿಷನರ್, ಪೊಲೀಸ್ ಆಯುಕ್ತರು, ಸಂಚಾರಿ ಪೊಲೀಸ್ ಕಮಿಷನರ್, ಎಲ್ಲಾ ಅಧಿಕಾರಿಗಳು ಸದಸ್ಯರಾಗಿ ಇರುತ್ತಾರೆ. ಬೆಂಗಳೂರಿನ ಜನಪ್ರತಿನಿಧಿಗಳು ಹಾಗೂ ಬೆಂಗಳೂರಿನಲ್ಲಿ ಮತದಾನದ ಹಕ್ಕು ಹೊಂದಿರುವ ಎಲ್ಲಾ ಜನಪ್ರತಿನಿಧಿಗಳ ಜೊತೆಗೆ ಬೆಂಗಳೂರಿನಲ್ಲಿ ವಾಸಿಸುವ ಲೋಕಸಭಾ ಸದಸ್ಯರು, ಮುಖ್ಯ ಕಾರ್ಯದರ್ಶಿ ಹಾಗೂ ಎಸಿಎಸ್ ಅಧಿಕಾರಿಗಳನ್ನು ಈ ಸಮಿತಿಯಲ್ಲಿ ಸೇರಿಸುವ ಬಗ್ಗೆ ಇಂದು ತೀರ್ಮಾನ ಮಾಡಲಾಗಿದೆ” ಎಂದು ತಿಳಿಸಿದರು.

ಜಿಬಿಎ ವಿರೋಧಿಸುವವರು ಪಾಲಿಕೆ ಚುನಾವಣೆಗಳನ್ನು ಬಹಿಷ್ಕರಿಸಲಿ:

ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಜಿಬಿಎ ರದ್ದು ಮಾಡಲಾಗುವುದು, ಸಭೆಯ ಅಜೆಂಡಾವನ್ನೇ ತಿಳಿಸಿಲ್ಲ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಮೊದಲ ಸಭೆಯಲ್ಲಿ ಅಜೆಂಡಾ ಇರುವುದಿಲ್ಲ. ಜಿಬಿಎ ಯಾವ ದಿಕ್ಕಿನಲ್ಲಿ ಸಾಗಬೇಕು ಎಂದು ತೀರ್ಮಾನವನ್ನು ಮೊದಲ ಸಭೆಯಲ್ಲಿ ಮಾಡಲಾಗುವುದು. ಈ ಸಭೆಗೆ ಗೈರಾಗುವ ಮೂಲಕ ಬಿಜೆಪಿ ನಾಯಕರು ಬೆಂಗಳೂರು ನಗರದ ವಿರುದ್ಧವಾಗಿ ನಿಂತಿದ್ದಾರೆ. ಜನರು ಕೊಟ್ಟ ಅಧಿಕಾರಕ್ಕೆ ದ್ರೋಹ ಬಗೆದಿದ್ದಾರೆ. ಜನರ ಪರವಾಗಿ ಧ್ವನಿ ಎತ್ತುವುದಕ್ಕಿಂತ ಅವರಿಗೆ ರಾಜಕಾರಣ ಮುಖ್ಯವಾಗಿದೆ. ಅವರ ಈ ನಡೆಗೆ ವಿಷಾದ ವ್ಯಕ್ತಪಡಿಸುತ್ತೇವೆ. ಇನ್ನು ಜಿಬಿಎ ರದ್ದುಗೊಳಿಸುವ ವಿಚಾರವಾಗಿ ಹೇಳುವುದಾದರೆ, ಕಾಂಗ್ರೆಸ್ ಸರ್ಕಾರದ ತೀರ್ಮಾಣವನ್ನು ಯಾವುದೇ ಬೇರೆ ಸರ್ಕಾರ ಬದಲಾವಣೆ ಮಾಡಲು ಸಾಧ್ಯವಾಗಿಲ್ಲ. ಭೂಸುಧಾರಣಾ ಕಾಯ್ದೆಯಿಂದ ಬ್ಯಾಂಕುಗಳ ರಾಷ್ಟ್ರೀಕರಣ, ಆಹಾರ ಭದ್ರತೆ, ಉದ್ಯೋಗ ಖಾತ್ರಿ, ಶೈಕ್ಷಣಿಕ ಹಕ್ಕು ಸೇರಿದಂತೆ ಗ್ಯಾರಂಟಿ ಯೋಜನೆಗಳವರೆಗೂ ಕಾಂಗ್ರೆಸ್ ಸರ್ಕಾರಗಳ ತೀರ್ಮಾನವನ್ನು ಬದಲಿಸಲು ಸಾಧ್ಯವಾಗಿಲ್ಲ. ಅವರು ಜಿಬಿಎ ವಿರುದ್ಧ ಪ್ರತಿಭಟಿಸುವುದೇ ಆದರೆ, ಅವರು ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಬಹಿಷ್ಕರಿಸಲಿ. ಅವರು ಏನಾದರೂ ಟೀಕೆ ಮಾಡಲಿ ನಾವು ನಮ್ಮ ಜನಪರ ಕೆಲಸ ಮುಂದುವರಿಸುತ್ತೇವೆ” ಎಂದು ತಿರುಗೇಟು ನೀಡಿದರು.

ಜಿಬಿಎ ಸದಸ್ಯರೇ ಸಭೆಗೆ ಬಂದಿಲ್ಲ ಎಂದು ಕೇಳಿದಾಗ, “ಸಚಿವ ಕೃಷ್ಣಾ ಭೈರೇಗೌಡರು ಹಾಸನದಲ್ಲಿ ಹಾಸನಾಂಬ ದೇವರ ದರ್ಶನ ಕಾರ್ಯಕ್ರಮದ ಉಸ್ತುವಾರಿಯಲ್ಲಿ ನಿರತರಾಗಿದ್ದಾರೆ. ಬೈರತಿ ಸುರೇಶ್ ಅವರಿಗೆ ಶಸ್ತ್ರಚಿಕಿತ್ಸೆಯಾಗಿದೆ. ಇನ್ನು ಕೆಲವರು ಅನಿವಾರ್ಯ ಕಾರಣಗಳಿಂದ ಬಂದಿಲ್ಲ. ಉಳಿದಂತೆ ವಿರೋಧ ಪಕ್ಷದವರು ಎಲ್ಲರೂ ಗೈರಾಗಿದ್ದಾರೆ” ಎಂದು ತಿಳಿಸಿದರು.

ಓಸಿ ಮತ್ತು ಸಿಸಿ ವಿನಾಯಿತಿ ವಿಚಾರವಾಗಿ ಕೇಳಿದಾಗ, “ಸಧ್ಯಕ್ಕೆ 30x40 ವರೆಗಿನ ವಿಸ್ತೀರ್ಣದ ಕಟ್ಟಡಗಳಿಗೆ ವಿನಾಯಿತಿ ನೀಡಿದ್ದೇವೆ. ಉಳಿದಂತೆ ಕಾನೂನು ತಂಡಕ್ಕೆ ಸಿಎಂ ಸೂಚನೆ ನೀಡಿದ್ದು, ಅವರ ಸಲಹೆ ಮೇರೆಗೆ ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

ಜಿಬಿಎ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ. ಜಾರ್ಜ್, ಝಮೀರ್ ಅಹ್ಮದ್ ಖಾನ್, ಬಿಡಿಎ ಅಧ್ಯಕ್ಷರಾದ ಎನ್.ಎ. ಹ್ಯಾರೀಸ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೆ.ಗೋವಿಂದರಾಜು, ಶಾಸಕರಾದ ಎಂ. ಕೃಷ್ಣಪ್ಪ, ಎ.ಸಿ. ಶ್ರೀನಿವಾಸ್, ರಿಜ್ವಾನ್ ಅರ್ಷದ್, ಬಿ.ಶಿವಣ್ಣ, ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ, ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ತುಷಾರ್ ಗಿರಿನಾಥ್, ನೂತನ ಐದು ಪಾಲಿಕೆಗಳ ಆಯುಕ್ತರಾದ ರಾಜೇಂದ್ರ ಚೋಳನ್ (ಕೇಂದ್ರ), ರಮೇಶ್ ಜಿ.ಎಸ್ (ಪೂರ್ವ), ರಮೇಶ್ ಕೆ.ಎನ್ (ದಕ್ಷಿಣ), ಪೊಮ್ಮಳ ಸುನೀಲ್ ಕುಮಾರ್ (ಉತ್ತರ), ಡಾ.ಕೆ.ವಿ ರಾಜೇಂದ್ರ (ಪಶ್ಚಿಮ) ಅವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X