Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆ.13ರಿಂದ ಡಿಕೆಶಿ ಸರಕಾರಕ್ಕೆ ಚೊಚ್ಚಲ...

ಆ.13ರಿಂದ ಡಿಕೆಶಿ ಸರಕಾರಕ್ಕೆ ಚೊಚ್ಚಲ ಅಧಿವೇಶನ; ಸಿಎಂಗೆ ಸವಾಲುಗಳ ಸರಮಾಲೆ

ವಾರ್ತಾಭಾರತಿವಾರ್ತಾಭಾರತಿ9 Aug 2026 12:33 AM IST
share
ಆ.13ರಿಂದ ಡಿಕೆಶಿ ಸರಕಾರಕ್ಕೆ ಚೊಚ್ಚಲ ಅಧಿವೇಶನ; ಸಿಎಂಗೆ ಸವಾಲುಗಳ ಸರಮಾಲೆ
► ಸರಕಾರವನ್ನು ಮಣಿಸಲು ವಿಪಕ್ಷಗಳಿಂದ ರಣತಂತ್ರ ► ತಿರುಗೇಟು ನೀಡಲು ಆಡಳಿತ ಪಕ್ಷದ ಸಿದ್ಧತೆ

ಬೆಂಗಳೂರು : ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಅವರ ಸಂಪುಟದ ಹೊಸ ಸಚಿವರಿಗೆ ಇದೇ ತಿಂಗಳ 13ರಿಂದ ಆರಂಭವಾಗಲಿರುವ ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನದ ಸವಾಲು ಎದುರಾಗಿದೆ. 10 ದಿನಗಳ ಕಾಲ ನಡೆಯಲಿರುವ ಕಲಾಪದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಒಗ್ಗಟ್ಟಿನ ಹೋರಾಟಕ್ಕೆ ರಣತಂತ್ರ ರೂಪಿಸಿವೆ.

ಸಂಪುಟ ವಿಸ್ತರಣೆ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ, ಸ್ಥಾನ ಕೈತಪ್ಪಿರುವ ಆಕಾಂಕ್ಷಿ ಶಾಸಕರ ಅಸಮಾಧಾನದ ಬೇಗುದಿ ಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಹೈಕಮಾಂಡ್ ನಾಯಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಈ ಮಧ್ಯೆ ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ಆವರಿಸಿರುವ ಬರ, ಕೆಲ ಜಿಲ್ಲೆಗಳಲ್ಲಿನ ಅತಿವೃಷ್ಟಿ ಸರಕಾರದ ನಿದ್ದೆಗೆಡಿಸಿದೆ. ಈ ಸಂದರ್ಭದಲ್ಲೇ ಅಧಿವೇಶನ ಕಲಾಪವು ಜರುಗಲಿದೆ.

ರೈತರ ವಿರೋಧದ ಮಧ್ಯೆ ಕೈಗೆತ್ತಿಕೊಳ್ಳಲು ಮುಂದಾಗಿರುವ ಬಿಡದಿ ಟೌನ್‌ಶಿಪ್ ಯೋಜನೆ, ಕೆಪಿಎಸ್‌ಸಿ ನೇಮಕಾತಿ ಅಕ್ರಮ, ಬರ ಘೋಷಣೆ-ಪರಿಹಾರ ವಿತರಣೆಯಲ್ಲಿನ ವಿಳಂಬ, ಗೃಹಲಕ್ಷ್ಮಿ ಸೇರಿದಂತೆ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ, ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರಗೆ ಸಚಿವ ಸ್ಥಾನ ನೀಡಿರುವುದು, ಅಭಿವೃದ್ಧಿ ವಿಚಾರಗಳ ನಿರ್ಲಕ್ಷ್ಯ ಸೇರಿದಂತೆ ಸರಕಾರದ ಆಡಳಿತ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷವನ್ನು ಅಡಕತ್ತರಿಯಲ್ಲಿ ಸಿಲುಕಿಸಲು ಪ್ರತಿಪಕ್ಷಗಳು ಸನ್ನದ್ಧವಾಗಿವೆ.

ಕೇಂದ್ರದ ಅನುದಾನ ಹಂಚಿಕೆಯಲ್ಲಿನ ತಾರತಮ್ಯ, ಮೇಕೆದಾಟು ಯೋಜನೆಗೆ ಅನುಮೋದನೆ, ಬರಕ್ಕೆ ನೆರವು ನೀಡುವಲ್ಲಿ ವಿಳಂಬ, ಆರೆಸ್ಸೆಸ್ ನೋಂದಣಿ, ನೀಟ್ ಪರೀಕ್ಷೆಯಲ್ಲಿನ ಅಕ್ರಮ, ದಿಲ್ಲಿ ವಿದ್ಯಾರ್ಥಿಗಳ ಮೇಲಿನ ಲಾಠಿ ಪ್ರಹಾರ, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಸಹಿತ ವಿಚಾರಗಳನ್ನು ಪ್ರಸ್ತಾಪಿಸಿ ಪ್ರತಿಪಕ್ಷಗಳಿಗೆ ತಿರುಗೇಟು ನೀಡಲು ಕಾಂಗ್ರೆಸ್ ಪಕ್ಷದ ಶಾಸಕರು ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಜ್ಜಾಗಿದ್ದಾರೆ.

ಒತ್ತಡ ಹೇರಿ ರಾಜೀನಾಮೆ?: ರಾಜ್ಯದ ಜನತೆ ಎದುರಿಸುತ್ತಿರುವ ಬರ-ನೆರೆ ಸಂಕಷ್ಟ, ಆಡಳಿತ ವೈಫಲ್ಯ, ಭ್ರಷ್ಟಾಚಾರ ಸೇರಿದಂತೆ ಜ್ವಲಂತ ಸಮಸ್ಯೆಗಳನ್ನು ಸದನದಲ್ಲಿ ಪ್ರತಿಪಕ್ಷಗಳು ಪ್ರಸ್ತಾಪಿಸಲಿವೆ. ಇದೇ ವೇಳೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮೇಲೆ ಒತ್ತಡ ಹೇರಿ ಅವರನ್ನು ಸ್ಥಾನದಿಂದ ಕೆಳಗಿಳಿಸಲಾಗಿದೆ ಎಂಬ ಆರೋಪವು ಕೇಳಿ ಬಂದಿದ್ದು, ಈ ವಿಚಾರವು ಸದನದಲ್ಲಿ ಗಂಭೀರ ಸ್ವರೂಪದ ಚರ್ಚೆಗೆ ಬರುವ ಸಾಧ್ಯತೆಗಳಿವೆ?

ಆ.13ರಂದು ಬೆಳಗ್ಗೆ 11ಗಂಟೆಗೆ ವಿಧಾನ ಮಂಡಲ ಕಲಾಪ ಆರಂಭವಾಗಲಿದ್ದು, ಮೊದಲ ದಿನ ಇತ್ತೀಚೆಗೆ ನಿಧನರಾದ ಸಚಿವ ಡಿ.ಸುಧಾಕರ್ ಸೇರಿದಂತೆ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದು, ಮೃತರ ಗೌರವಾರ್ಥ ಅರ್ಧದಿನದ ಕಲಾಪವನ್ನು ಮುಂದೂಡುವ ಸಾಧ್ಯತೆಗಳಿವೆ.

ಆ.14ರಂದು ಸಭಾಧ್ಯಕ್ಷ, ಉಪಸಭಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಆ.15ರಂದು ಸ್ವಾತಂತ್ರ್ಯ ದಿನಾಚರಣೆ ಮತ್ತು ಆ.16ರಂದು ಕಲಾಪಕ್ಕೆ ರಜೆ ಇರಲಿದೆ. ಆ.17ರಿಂದ ಅಧಿವೇಶನ ಕಲಾಪ ಕಾವೇರಲಿದ್ದು, ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

Tags

DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X