Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇಂದ್ರ ವಿತ್ತ ಸಚಿವೆ ನಿರ್ಮಲಾ...

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ನೀರಾವರಿ ಯೋಜನೆಗಳಿಗೆ ಹಣಕಾಸು ನೆರವು ಕೋರಿ ಮನವಿ

ವಾರ್ತಾಭಾರತಿವಾರ್ತಾಭಾರತಿ20 Dec 2023 2:56 PM IST
share
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಡಿಸಿಎಂ ಡಿ.ಕೆ ಶಿವಕುಮಾರ್

ಹೊಸದಿಲ್ಲಿ: ಬೆಂಗಳೂರು ನಗರದಲ್ಲಿ ‘ಟನಲ್ ರಸ್ತೆ’ ನಿರ್ಮಾಣ, ನಮ್ಮ ಮೆಟ್ರೋ ಸಂಪರ್ಕ ವಿಸ್ತರಣೆ, ಭದ್ರಾ ಮೇಲ್ದಂಡೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆ ಸೇರಿದಂತೆ ಪ್ರಮುಖ ಯೋಜನೆಗಳಿಗೆ ಅನುಮತಿ ಹಾಗೂ ಹಣಕಾಸಿನ ನೆರವು ನೀಡಬೇಕೆಂದು ಕೋರಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಬುಧವಾರ ದಿಲ್ಲಿಯ ಸಂಸತ್ ಭವನದಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಶಿವಕುಮಾರ್, ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಸಹಕಾರ ಕೋರಿದರು. ನಗರದ ಸಂಚಾರ ದಟ್ಟಣೆ ಸಮಸ್ಯೆ ಎದುರಿಸುತ್ತಿದ್ದು, ಈ ಸಮಸ್ಯೆ ಬಗೆಹರಿಸಲು 60ಕಿ.ಮೀ ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದೇವೆ. ನಗರದೊಳಗೆ ಉತ್ತರದಿಂದ ದಕ್ಷಿಣ, ಪೂರ್ವದಿಂದ ಪಶ್ಚಿಮ ಕಾರಿಡಾರ್ ಮೂಲಕ ನಗರದೊಳಗಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮುಂದಾಗಿದ್ದೇವೆ ಎಂದು ಗಮನ ಸಳೆದರು.

ಈ ಯೋಜನೆಯಲ್ಲಿ ಪ್ರತಿ ಕಿ.ಮೀ ಸುರಂಗ ರಸ್ತೆಗೆ 500ರೂ.ನಂತೆ ಒಟ್ಟು 30 ಸಾವಿರ ಕೋಟಿ ರೂ.ವೆಚ್ಚ ತಗಲುವ ಅಂದಾಜು ಇದೆ. ಈ ಯೋಜನೆಗಳು ರಾಷ್ಟ್ರೀಯ ಹೆದ್ದಾರಿ 7 ಮತ್ತು 4ರ ಸಂಪರ್ಕ ಸಾಧಿಸುವ ಹಿನ್ನೆಲೆಯಲ್ಲಿ ಈ ಯೋಜನೆ ಜಾರಿಗೆ ಕೇಂದ್ರ ಬಜೆಟ್‍ನಲ್ಲಿ ರಾಜ್ಯ ಸರಕಾರ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಅನುದಾನ ಮೀಸಲಿಡಬೇಕು ಎಂದು ಮನವಿ ಮಾಡಿದರು.

ಮೂಲಸೌಕರ್ಯ ಅಭಿವೃದ್ಧಿ: ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಮ್ಮ ಮೆಟ್ರೋ ಸಂಪರ್ಕ ಮಾರ್ಗವನ್ನು ವಿಸ್ತರಣೆಗೆ ಬಿಎಂಆರ್ ಸಿಎಲ್ ಯೋಜನೆ ರೂಪಿಸುತ್ತಿದ್ದು, ಇದಕ್ಕೆ ಕೇಂದ್ರ ಸರಕಾರದ ಅನುಮತಿ ಪಡೆಯಲು ನಿಮ್ಮ ಸಹಕಾರ ಬೇಕು. ಇನ್ನು ಅತಿಯಾದ ಮಳೆ ಸಮಯದಲ್ಲಿ ನಗರದ ಕೆಲ ಭಾಗಗಳು ಪ್ರವಾಹ ಸ್ಥಿತಿ ಎದುರಿಸುತ್ತಿದ್ದು, ಮೂಲಸೌಕರ್ಯ ಅಭಿವೃದ್ಧಿಗೆ ವಿಶ್ವಬ್ಯಾಂಕ್‍ನಿಂದ 3ಸಾವಿರ ಕೋಟಿ ರೂ.ಗಳಷ್ಟು ಆರ್ಥಿಕ ನೆರವನ್ನು ಕೋರಿದ್ದು, ಈ ಪ್ರಸ್ತಾವನೆ ಕೇಂದ್ರ ಹಣಕಾಸು ಸಚಿವಾಲಯ ತಲುಪಿದ್ದು ಈ ಪ್ರಸ್ತಾವನೆಗೆ ಅನುಮೋದನೆ ನೀಡಿ ವಿಶ್ವಬ್ಯಾಂಕ್‍ನಿಂದ ಹಣಕಾಸಿನ ನೆರವು ಬರುವಂತೆ ಮಾಡಬೇಕು ಎಂದು ಅವರು ತಿಳಿಸಿದರು.

ನೀರಾವರಿ ಯೋಜನೆಗಳಿಗೆ ನೆರವು: ರಾಜ್ಯ ಮೇಕೆದಾಟು ಯೋಜನೆಗೆ ಮುಂದಾಗಿದ್ದು, ಈ ಯೋಜನೆಯಿಂದ 67ಟಿಎಂಸಿ ನೀರನ್ನು ಹಿಡಿದಿಟ್ಟು ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ, ತಮಿಳುನಾಡಿನ ಪಾಲಿನ ನೀರು ಬಿಡುಗಡೆ ಹಾಗೂ ವಿದ್ಯುತ್ ಉತ್ಪಾದನೆ ಉದ್ದೇಶ ಹೊಂದಲಾಗಿದೆ. ಈ ಯೋಜನೆಯ ಪೂರ್ವ ಕಾರ್ಯಸಾಧ್ಯತಾ ವರದಿಗೆ ಕೇಂದ್ರ ಜಲ ಆಯೋಗದಿಂದ ಅನುಮತಿ ಪಡೆಯಲಾಗಿದೆ. ಇನ್ನು ಈ ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು 2019ರಲ್ಲಿ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ.

ಈ ಯೋಜನೆಯನ್ನು ಸುಪ್ರೀಂ ಕೋರ್ಟಿನ ತೀರ್ಪಿನ ಅನುಸಾರವಾಗಿ ತಮಿಳುನಾಡಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಜಾರಿ ಮಾಡಲಾಗುವುದು. ಹೀಗಾಗಿ ಕೇಂದ್ರ ಜಲಶಕ್ತಿ ಸಚಿವಾಲಯದ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಅಗತ್ಯವಿರುವ ಅನುಮತಿಯನ್ನು ನೀಡುವಂತೆ ನಿರ್ದೇಶನ ನೀಡಿ ಎಂದು ಅವರು ಮನವಿ ಸಲ್ಲಿಸಿದರು.

ಭದ್ರಾ ಮೇಲ್ದಂಡೆ: ರಾಷ್ಟ್ರೀಯ ಜಲ ನೀತಿ ಅನುಸಾರ ನೀರನ್ನು ಪರಿಣಾಮಕಾರಿ ಬಳಕೆಗೆ ರಾಜ್ಯ ಸರಕಾರವು ಭದ್ರಾ ಮೇಲ್ದಂಡೆ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಈ ಯೋಜನೆಯಿಂದ ಮಧ್ಯ ಕರ್ನಾಟಕ ಭಾಗದ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಯ 2,25,525 ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸಲಿದೆ ಎಂದು ಮಾಹಿತಿ ನೀಡಿದರು.

29.90 ಟಿಎಂಸಿಯಷ್ಟು ಅಂತರ್ಜಲ ಭರ್ತಿಗೆ ನೆರವಾಗಲಿದೆ. 2024ರ ಕೇಂದ್ರ ಬಜೆಟ್‍ನಲ್ಲಿ ಈ ಯೋಜನೆಗೆ ಕೇಂದ್ರ 5,300 ಕೋಟಿ ರೂ.ಆರ್ಥಿಕ ನೆರವು ಘೋಷಣೆ ಮಾಡಿದ್ದು, ಇದುವರೆಗೂ ಹಣ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಯೋಜನೆಯ ಪ್ರಗತಿ ಕುಂಠಿತವಾಗಿದೆ. ಹೀಗಾಗಿ ಈ ಯೋಜನೆಯನ್ನು ‘ರಾಷ್ಟ್ರೀಯ ಯೋಜನೆ' ಎಂದು ಪರಿಗಣಿಸಿ ಹಣಕಾಸಿನ ನೆರವು ನೀಡಬೇಕು. ಬಜೆಟ್‍ನಲ್ಲಿ ಘೋಷಿಸಿರುವ 5,300 ಕೋಟಿ ರೂ.ಹಣವನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಕೋರಿದರು.

ರಾಜ್ಯದ ಪೂರ್ವಭಾಗದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರಿನ ಕೆಲವು ಭಾಗಗಳು ಬರ ಪೀಡಿತವಾಗಿದೆ. ಈ ಭಾಗದ ಜನರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಎತ್ತಿನಹೊಳೆ ಯೋಜನೆಗೆ ಮುಂದಾಗಿದ್ದೇವೆ. ಈ ಯೋಜನೆಗೆ ಒಟ್ಟು 23,251 ಕೋಟಿ ರೂ.ವೆಚ್ಚದ ಅಂದಾಜು ಮಾಡಲಾಗಿದ್ದು, ಈವರೆಗೂ 14,698 ಕೋಟಿ ರೂ.ವೆಚ್ಚವಾಗಿದೆ. ಕುಡಿಯುವ ನೀರಿಗೆ ಪ್ರಮುಖ ಆದ್ಯತೆಯಾಗಿದ್ದು, ಕೇಂದ್ರ ಸರಕಾರ ಈ ಯೋಜನೆಗೆ 9177.32 ಕೋಟಿ ರೂ.(ಉಳಿಕೆ ಹಣ) ಅನುದಾನವನ್ನು ನೀಡಬೇಕು ಎಂದು ಶಿವಕುಮಾರ್ ತಮ್ಮ ಮನವಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X