Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುನಿರತ್ನ ನೇತೃತ್ವದಲ್ಲಿ ಸೋಂಕು ಹರಡುವ...

ಮುನಿರತ್ನ ನೇತೃತ್ವದಲ್ಲಿ ಸೋಂಕು ಹರಡುವ ಜಾಲ : ಸಮಗ್ರ ತನಿಖೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ20 Sept 2024 9:38 PM IST
share
ಮುನಿರತ್ನ ನೇತೃತ್ವದಲ್ಲಿ ಸೋಂಕು ಹರಡುವ ಜಾಲ : ಸಮಗ್ರ ತನಿಖೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಒತ್ತಾಯ

ಬೆಂಗಳೂರು : ಶಾಸಕ ಮುನಿರತ್ನ ನೇತೃತ್ವದಲ್ಲಿ ಏಡ್ಸ್ ಸೋಂಕನ್ನು ಅವರ ವಿರೋಧಿಗಳಿಗೆ ಹರಡಿಸುವ ಯತ್ನ ನಡೆದಿದೆ. ಅವರ ನೇತೃತ್ವದಲ್ಲಿ ಸೋಂಕನ್ನು ಹರಡಿಸುವ ಜಾಲವೇ ಸಕ್ರಿಯವಾಗಿದೆ. ಇದರ ವಿರುದ್ಧ ಸರಕಾರ ವಿಶೇಷ ತನಿಖೆ ನಡೆಸಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದರು.

ಶುಕ್ರವಾರ ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು ‘ಯಾರನ್ನೆಲಲ್ಲಾ ಬಳಸಿಕೊಂಡು ಸೋಂಕನ್ನು ಹರಡಿಸಲಾಗಿದೆ. ಈ ಜಾಲದಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವುದು ತನಿಖೆ ಮೂಲಕ ಬಹಿರಂಗಗೊಳಿಸಬೇಕಿದೆ’ ಎಂದರು.

ರಾಜಕೀಯ ಬಣ್ಣ: ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಕುಮ್ಮಕ್ಕಿನಿಂದ ಒಕ್ಕಲಿಗ, ದಲಿತ ಹಾಗೂ ಮಹಿಳಾ ಸಮುದಾಯದ ವಿರುದ್ದ ಶಾಸಕ ಮುನಿರತ್ನ ಅವಹೇಳನ ಮಾಡಿದ್ದಾರೆ. ಶಾಸಕರ ಅವಹೇಳನಕಾರಿ ಮಾತುಗಳು ಜಗಜ್ಜಾಹೀರಾಗಿದೆ. ಇದಕ್ಕೆ ಬಿಜೆಪಿಯವರು ರಾಜಕೀಯ ಬಣ್ಣ ಬಳಿಯುತ್ತಿದ್ದಾರೆ. ರಾಜಕೀಯಕ್ಕೂ ಹಾಗೂ ಮುನಿರತ್ನ ಮಾತಿಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ತಿಳಿಸಿದರು.

ದೂರುದಾರರ ವಿರುದ್ಧ, ಸಮುದಾಯದ ಹೆಸರಿನಲ್ಲಿ ಕೆಟ್ಟ ಪದಗಳನ್ನು ಬಳಕೆ ಮಾಡಿದ್ದಾರೆ. ದಲಿತ, ಒಕ್ಕಲಿಗ ಮತ್ತು ಮಹಿಳೆಯರನ್ನು ಬಹಳ ಕೀಳಾಗಿ ನೋಡಿದ್ದಾರೆ. ಇದು ರಾಜಕೀಯ ಪ್ರೇರಿತ ಪ್ರಕರಣವಲ್ಲ. ಅವರ ಮನಸ್ಸಿನ ಮಾತುಗಳು. ಈ ರೀತಿ ಮಾತನಾಡಿ ಎಂದು ನಾವು ಹೇಳಿಲ್ಲ. ಹೊಸದಾಗಿ ಮುನಿರತ್ನ ಮೇಲೆ ಅತ್ಯಾಚಾರ ಪ್ರಕರಣವೂ ದಾಖಲಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷಗಳು ಸ್ಪಷ್ಟಪಡಿಸಲಿ. ಆ ನಂತರ ಇದಕ್ಕೆ ಸೂಕ್ತ ಉತ್ತರ ಕೊಡುತ್ತೇವೆ ಎಂದು ಹೇಳಿದರು.

‘ಈ ರೀತಿಯ ಕೃತ್ಯಗಳನ್ನು ನನ್ನ ರಾಜಕೀಯ ಜೀವನದಲ್ಲಿ ಕೇಳಿರಲೇ ಇಲ್ಲ. ವಿದೇಶದಲ್ಲಿ ಈ ರೀತಿಯ ಕೃತ್ಯಗಳು ನಡೆಯುವುದನ್ನು ಕೇಳಿದ್ದೆ. ಇದರ ಬಗ್ಗೆ ಸೂಕ್ತ ತನಿಖೆ ಆಗಬೇಕು. ಇದರ ಮೂಲಕ ಬಿಜೆಪಿಯವರ ಬಣ್ಣವೂ ಬಯಲಾಗಬೇಕು. ಮುನಿರತ್ನ ಹಿಂದೆ ನಿಂತಿರುವ ಸಿ.ಟಿ.ರವಿ, ಆರ್.ಅಶೋಕ್ ಹಾಗೂ ಕುಮಾರಸ್ವಾಮಿ ಇದಕ್ಕೆ ಉತ್ತರ ನೀಡಬೇಕು. ಕಾಂಗ್ರೆಸ್ ನವರ ಮೇಲೆ ಈ ರೀತಿಯ ಅಸ್ತ್ರ ಪ್ರಯೋಗಿಸಿ ಎಂದು ಇವರುಗಳೇ ಕುಮ್ಮಕ್ಕು ನೀಡಿರಬಹುದು. ಈ ಬಗ್ಗೆಯೂ ಸೂಕ್ತ ತನಿಖೆಯಾಗಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X