Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೆಟ್ರೋ ಯೋಜನೆ; ಕೇಂದ್ರದಿಂದ ಬೆಂಗಳೂರಿಗೆ...

ಮೆಟ್ರೋ ಯೋಜನೆ; ಕೇಂದ್ರದಿಂದ ಬೆಂಗಳೂರಿಗೆ 10%, ಅಹಮದಾಬಾದ್‌ಗೆ 20% ಅನುದಾನ : ಡಿ.ಕೆ.ಸುರೇಶ್

ವಾರ್ತಾಭಾರತಿವಾರ್ತಾಭಾರತಿ9 Feb 2026 4:02 PM IST
share
ಮೆಟ್ರೋ ಯೋಜನೆ; ಕೇಂದ್ರದಿಂದ ಬೆಂಗಳೂರಿಗೆ 10%, ಅಹಮದಾಬಾದ್‌ಗೆ 20% ಅನುದಾನ : ಡಿ.ಕೆ.ಸುರೇಶ್
"ಬೆಂಗಳೂರು ಮೆಟ್ರೋಗೆ 20% ಅನುದಾನ ಕೊಡಿಸಿ ತೇಜಸ್ವಿ ಸೂರ್ಯ ಸಾರ್ವಜನಿಕರ ಮೇಲಿನ ಒತ್ತಡ ಕಡಿಮೆ ಮಾಡಲಿ"

ಬೆಂಗಳೂರು : "ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ತಿರುಗೇಟು ನೀಡಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಮೆಟ್ರೋ ದರ ಏರಿಕೆ ವಿಚಾರವಾಗಿ ತೇಜಸ್ವಿ ಸೂರ್ಯ ಅವರು ಮೆಟ್ರೋ ನಿಲ್ದಾಣ ಬಳಿ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಕೇಳಿದಾಗ, "ಮೆಟ್ರೋ ದರ ಏರಿಕೆ ಬಗ್ಗೆ ಅವರು ಮಾತನಾಡುವುದೇನೆ ಇದ್ದರೂ ಅದು ಪ್ರಧಾನಮಂತ್ರಿಗಳ ಮುಂದೆ ಮಾತನಾಡಲಿ. ಮೆಟ್ರೋ ನಮ್ಮ ಯೋಜನೆ ಎಂದು ಪ್ರಚಾರ ಪಡೆಯುತ್ತಿರುವವರು ಯಾರು? ತೇಜಸ್ವಿ ಸೂರ್ಯ ಅವರು ಮೆಟ್ರೋ ನಮ್ಮ ಕೊಡುಗೆ ರಾಜ್ಯ ಸರಕಾರದ್ದಲ್ಲ ಎಂದು ಪ್ರಚಾರ ಪಡೆಯುತ್ತಿದ್ದಾರೆ. ಮೆಟ್ರೋ ಕೇಂದ್ರ ಸರಕಾರದ ಸಮಿತಿ ಕೈಯಲ್ಲಿದೆ. ಆ ಸಮಿತಿ ತೀರ್ಮಾನದಂತೆ ಮೆಟ್ರೋ ದರ ಏರಿಕೆ ಮಾಡಲಾಗುತ್ತದೆ. ದರ ಏರಿಕೆ ಆಗಬಾರದು ಎಂಬುದೂ ನಮ್ಮ ಇಚ್ಛೆ. ತೇಜಸ್ವಿ ಸೂರ್ಯ ಅವರ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದು, ಅವರು ತೀರ್ಮಾನ ಮಾಡಿ ಜನರಿಗೆ ಅನುಕೂಲ ಮಾಡಿಕೊಡಲಿ" ಎಂದು ಸುರೇಶ್ ಅವರು ವಾಗ್ದಾಳಿ ನಡೆಸಿದರು.

"ಅವರು ಖಾಲಿ ಟ್ರಂಕ್ ಹಿಡಿದಿರುವುದು, ಕರ್ನಾಟಕದ 4.5- 5 ಲಕ್ಷ ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿಕೊಂಡು ಹೋಗುತ್ತಿರುವುದನ್ನು ತೋರಿಸಲು. ಕೇಂದ್ರ ಸರಕಾರ ಕಳೆದ 12 ವರ್ಷಗಳಿಂದ ಕರ್ನಾಟಕಕ್ಕೆ ಕೊಟ್ಟಿರುವ ಕೊಡುಗೆ ಪಟ್ಟಿ ಹೇಳಲಿ. ಬೆಂಗಳೂರಿಗೆ ಅವರ ಕೊಡುಗೆ ಖಾಲಿ ಡಬ್ಬ ಎಂದು ತೇಜಸ್ವಿ ಸೂರ್ಯ ತೋರಿಸುತ್ತಿರುವುದನ್ನು ಮಾಧ್ಯಮಗಳು ಚೆನ್ನಾಗಿ ತೋರಿಸಿ" ಎಂದು ಕಿಡಿಕಾರಿದರು.

ಮೆಟ್ರೋ ಯೋಜನೆಗಳಿಗೆ ರಾಜ್ಯ ಸರಕಾರ ಹಣ ನೀಡದಿರುವುದಕ್ಕೆ ದರ ಏರಿಕೆ ಎಂಬ ಆರೋಪದ ಬಗ್ಗೆ ಕೇಳಿದಾಗ, "ಕೇಂದ್ರ ಸರ್ಕಾರ ನಮ್ಮ ರಾಜ್ಯದ ಮೆಟ್ರೋ ಯೋಜನೆಗಳಿಗೆ 10% ಹಣ ನೀಡುತ್ತದೆ. ರಾಜ್ಯ ಸರ್ಕಾರ 10% ಹಣದ ಜೊತೆಗೆ ಯೋಜನೆ ಜಾರಿಗೆ ಅಗತ್ಯವಿರುವ ಭೂಸ್ವಾಧೀನ ಪರಿಹಾರ ಮೊತ್ತವನ್ನು ಭರಿಸಬೇಕು. ಇದರಿಂದ ರಾಜ್ಯ ಸರ್ಕಾರದ ಪಾಲು ಸುಮಾರು 17%ರಷ್ಟು ಇರುತ್ತದೆ. ಉಳಿದ ಹಣವನ್ನು ಸಾಲದ ರೂಪದಲ್ಲಿ ಪಡೆಯಲಾಗುವುದು. ಅದರ ಹೊರೆ ಪ್ರಯಾಣಿಕರ ಮೇಲೆ ಬೀಳುತ್ತದೆ. ಸಮಯ ಸಿಕ್ಕಾಗ ಮೆಟ್ರೋ ನಮ್ಮದು ಎಂದು ಶೋ ಕೊಟ್ಟು, ಈಗ ಖಾಲಿ ಡಬ್ಬ ತೋರುತ್ತಿದ್ದಾರೆ" ಎಂದು ಹರಿಹಾಯ್ದರು.

"ಬೆಂಗಳೂರಿನಲ್ಲಿ ವಾಹನ ದಟ್ಟಣೆಗೆ ಕಾರಣವಾಗಿರುವುದು ಕೇಂದ್ರ ಸರ್ಕಾರ. ನಮ್ಮ ಐಟಿ ಬಿಟಿ ತೆರಿಗೆ ಹಾಗೂ ಬೆಂಗಳೂರಿನ ಜಿಎಸ್ ಟಿ ಸೇರಿ ವಾರ್ಷಿಕವಾಗಿ 5 ಲಕ್ಷ ಕೋಟಿ ಹಣವನ್ನು ಕೇಂದ್ರ ಸರ್ಕಾರ ಪಡೆಯುತ್ತಿದೆ. ಅದರಲ್ಲಿ ನಮಗೆ ವಾಪಸ್ ನೀಡುತ್ತಿರುವುದು ಕೇವಲ 10% ಅಂದರೆ 50 ಸಾವಿರ ಕೋಟಿ ಮಾತ್ರ. ಉಳಿದ ಹಣ ಗುಜರಾತ್, ಅಹಮದಾಬಾದ್, ಉತ್ತರ ಪ್ರದೇಶ, ಬಿಹಾರಕ್ಕೆ ಹೋಗುತ್ತಿದೆ. ತೇಜಸ್ವಿ ಸೂರ್ಯ ಅವರು ಪ್ರಧಾನಿ ಮುಂದೆ ಭಾಷಣ ಮಾಡಿ ತಮ್ಮ ಎದೆಗಾರಿಕೆ ತೋರಿ ರಾಜ್ಯಕ್ಕೆ ಹಣ ತರಲಿ. ಕೇಂದ್ರ ಸರ್ಕಾರ ಅಹಮದಾಬಾದ್ ಮೆಟ್ರೋಗೆ 20% ಅನುದಾನ ನೀಡುತ್ತಿದೆ. ಅವರಿಗೊಂದು ನ್ಯಾಯ, ನಮಗೊಂದು ನ್ಯಾಯ. ಕರ್ನಾಟಕಕ್ಕೂ 20% ಅನುದಾನ ಕೊಟ್ಟರೆ ಸಾರ್ವಜನಿಕರ ಮೇಲೆ ಹೊರೆ ಕಡಿಮೆ ಆಗುತ್ತದೆ ಅಲ್ಲವೇ? ಈ ಬಗ್ಗೆ ಮಾಧ್ಯಮಗಳು ಸಾರ್ವಜನಿಕರನ್ನು ಜಾಗೃತಿಗೊಳಿಸಬೇಕು" ಎಂದು ಸವಾಲೆಸೆದರು.

Tags

D.K. Suresh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X