Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾಮಾಜಿಕ ಭದ್ರತೆ ಯೋಜನೆಯಡಿ 51,720...

ಸಾಮಾಜಿಕ ಭದ್ರತೆ ಯೋಜನೆಯಡಿ 51,720 ಫಲಾನುಭವಿಗಳ ಪಿಂಚಣಿ ರದ್ದು: ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ17 Aug 2026 9:32 PM IST
share
ಸಾಮಾಜಿಕ ಭದ್ರತೆ ಯೋಜನೆಯಡಿ 51,720 ಫಲಾನುಭವಿಗಳ ಪಿಂಚಣಿ ರದ್ದು: ಡಾ.ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ಸಾಮಾಜಿಕ ಭದ್ರತೆ ಯೋಜನೆಯಡಿ ವಿವಿಧ ಪಿಂಚಣಿ ಪಡೆಯುವ ಫಲಾನುಭವಿಗಳ ಪೈಕಿ 51,720(ಪ್ರಸಕ್ತ ಸಾಲಿನ ಆ.13ರವರೆಗೆ) ಫಲಾನುಭವಿಗಳ ಪಿಂಚಣಿ ರದ್ದುಪಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ರೂಪಕಲಾ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಫಲಾನುಭವಿಗಳು ಹಾಗೂ ಎಪಿಎಲ್ ಫಲಾನುಭವಿಗಳ ಮಾಹಿತಿಯನ್ನು ಪಡೆದು, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷತಾ ಯೋಜನೆ, ವಿಧವಾ ವೇತನ, ಮನಸ್ವಿನಿ, ಮೈತ್ರಿ ಹಾಗೂ ಅಂಗವಿಕಲ ಪಿಂಚಣಿ ಯೋಜನೆಗಳಡಿ ಒಟ್ಟು 23,14,544 ಸಂದೇಹಾಸ್ಪದ ಫಲಾನುಭವಿಗಳೆಂದು ಗುರುತಿಸಲಾಗಿದೆ ಎಂದು ಹೇಳಿದರು.

ಈ ಪೈಕಿ ಫಲಾನುಭವಿಗಳ ಪರಿಶೀಲನೆಯ ನಂತರ ಅರ್ಹರೆಂದು ಕಂಡು ಬಂದ ಫಲಾನುಭವಿಗಳಿಗೆ ಪ್ರಸಕ್ತ ಸಾಲಿನ ಮಾರ್ಚ್ ತಿಂಗಳಿನಿಂದ ಪಿಂಚಣಿ ಪಾವತಿಸಲಾಗುತ್ತಿದೆ. ಸಾಮಾಜಿಕ ಭದ್ರತಾ ಯೋಜನೆಗಳಿಗೆ ಸಂಬಂಧಿಸಿದಂತೆ ಆದಾಯ ಮಿತಿಯನ್ನು ಗ್ರಾಮೀಣ ಪ್ರದೇಶಗಳಿಗೆ 12 ಸಾವಿರ ರೂ. ಹಾಗೂ ನಗರ ಪ್ರದೇಶಗಳಿಗೆ 17 ಸಾವಿರ ರೂ.ಗಳಂತೆ ನಿಗದಿಪಡಿಸಿದ್ದು, ಈ ಆದಾಯ ಮಿತಿಯನ್ನು 32 ಸಾವಿರ ರೂ.ಗಳಿಗೆ ಮಾರ್ಪಡಿಸಿ ಆದೇಶಿಸಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.

ಪಿಂಚಣಿ ಪಡೆಯುವ ಎಲ್ಲ ಫಲಾನುಭವಿಗಳಿಗೆ ಪಿಂಚಣಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಕುರಿತು ದಾಖಲಾತಿಗಳನ್ನು ಸಂಬಂಧಿತ ತಾಲೂಕು ಕಚೇರಿಗೆ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಿ ತಿಳುವಳಿಕೆ ಪತ್ರ ಜಾರಿ ಮಾಡಲಾಗಿದೆ ಮತ್ತು ಅವರ ಮೊಬೈಲ್ ಸಂಖ್ಯೆಗೆ ದಾಖಲಾತಿ ಸಲ್ಲಿಸಲು ಎಸ್‍ಎಂಎಸ್ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಇಂದಿರಾಗಾಂಧಿ ರಾಷ್ಟ್ರೀಯ ವಿಧವಾ ವೇತನ, ಇಂದಿರಾಗಾಂಧಿ ಅಂಗವಿಕಲ ವೇತನ, ಸಂಧ್ಯಾಸುರಕ್ಷ ಯೋಜನೆ, ಮನಸ್ವಿನಿ, ಮೈತ್ರಿ ಯೋಜನೆಗಳ ಫಲಾನುಭವಿಗಳನ್ನು ಪರಿಶೀಲನೆಗೆ ಒಳಪಡಿಸಿದ್ದು, ಈ ಯೋಜನೆಗಳಡಿ ಆದಾಯ ಪ್ರಮಾಣ ಪತ್ರ, ಯುಡಿಐಡಿ ಕಾರ್ಡ್, ವಯಸ್ಸಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸಂಬಂಧಪಟ್ಟ ತಾಲೂಕು ಕಚೇರಿಗೆ ಸಲ್ಲಿಸಿದಲ್ಲಿ ದಾಖಲಾತಿ ಪರಿಶೀಲಿಸಿ ಅರ್ಹತಾ ಮಾನದಂಡ ಪೂರೈಸಿದಲ್ಲಿ, ಪಿಂಚಣಿ ಮರು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಸಂಯೋಜನೆ ಆ್ಯಪ್ ಮೂಲಕ ಸಂದೇಹಾಸ್ಪದ ಫಲಾನುಭವಿಗಳೆಂದು ಗುರುತಿಸಿರುವ ಪಿಂಚಣಿದಾರರ ಮನೆಗೆ ಗ್ರಾಮ ಆಡಳಿತಾಧಿಕಾರಿಗಳು ಭೇಟಿ ನೀಡಿ ಅಗತ್ಯವಿರುವ ದಾಖಲೆಗಳನ್ನು ಸ್ಥಳದಲ್ಲಿಯೆ ಪಡೆದು ಪರಿಶೀಲಿಸಿ, ಅರ್ಹರಿಗೆ ಪಿಂಚಣಿ ಮರು ಚಾಲನೆಗೊಳಿಸಲು ನಿಯಮಾನುಸಾರ ಕ್ರಮ ವಹಿಸಲಾಗುತ್ತಿದೆ ಎಂದು ಪರಮೇಶ್ವರ್ ಹೇಳಿದರು.

ರಾಜ್ಯ ಸರಕಾರವು ಬಿಪಿಎಲ್ ಕಾರ್ಡುದಾರರಿಗೆ ವಾರ್ಷಿಕ 1.20 ಲಕ್ಷ ರೂ.ಗಳ ಆದಾಯ ಮಿತಿ ನಿಗದಿ ಮಾಡಿದೆ. ಆದರೆ, ಪಿಂಚಣಿದಾರರಿಗೆ 32 ಸಾವಿರ ರೂ.ಗಳನ್ನು ನಿಗದಿಪಡಿಸಿರುವುದು ಸರಿಯಲ್ಲ. ಇದರಿಂದಾಗಿ, ವೃದ್ಧರು ಹಾಗೂ ಪಿಂಚಣಿಯ ಮೇಲೆ ಅವಲಂಬಿತರಾಗಿರುವ ಬಡವರು ಸಂಕಷ್ಟಕ್ಕೆ ಸಿಲುಕುತ್ತಾರೆ. ಆದುದರಿಂದ, ಈ ಸಂಬಂಧ ಸರಕಾರ ಗಮನ ಹರಿಸಬೇಕು ಎಂದು ರೂಪಕಲಾ ಆಗ್ರಹಿಸಿದರು.

Tags

Dr. G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X