Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾಡಹಬ್ಬ ʼದಸರಾʼ ಜಾತ್ಯತೀತತೆಯ ಸಂಕೇತ :...

ನಾಡಹಬ್ಬ ʼದಸರಾʼ ಜಾತ್ಯತೀತತೆಯ ಸಂಕೇತ : ಡಾ.ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ26 Aug 2025 6:04 PM IST
share
ನಾಡಹಬ್ಬ ʼದಸರಾʼ ಜಾತ್ಯತೀತತೆಯ ಸಂಕೇತ : ಡಾ.ಪುರುಷೋತ್ತಮ ಬಿಳಿಮಲೆ
‘ಬಾನು ಮುಷ್ತಾಕ್‌ರ ವಿರೋಧದ ಹಿಂದೆ ಒಂದು ರಾಜಕೀಯ ವರ್ಗದ ಅನ್ನ, ಅಧಿಕಾರದ ಪ್ರಶ್ನೆ ಅಡಗಿದೆ’

ಬೆಂಗಳೂರು, ಆ.26 : ಕನ್ನಡದ ಜಾತ್ಯತೀತತೆಯ ಸಂಕೇತವಾಗಿರುವ ನಾಡಹಬ್ಬ ದಸರಾವನ್ನು ಸಂಪೂರ್ಣ ಧಾರ್ಮಿಕ ಹಬ್ಬವೆಂದು ಬಿಂಬಿಸಿ ರಾಜ್ಯದ ಶಾಂತಿಯನ್ನು ಕದಡಲೆತ್ನಿಸುತ್ತಿರುವ ಹಿತಾಸಕ್ತಿಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಘನತೆಯ ಕುಸಿತಕ್ಕೆ ಕಾರಣರಾಗಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮಂಗಳವಾರ ಮಾಧ್ಯಮ ಪ್ರಕಟನೆ ಹೊರಡಿಸಿರುವ ಅವರು, ಪ್ರಸಿದ್ಧ ಲೇಖಕಿ ಬಾನು ಮುಷ್ತಾಕ್‌ ಅವರನ್ನು ನಾಡ ಹಬ್ಬದ ಉದ್ಘಾಟಕರನ್ನಾಗಿ ಆಯ್ಕೆ ಮಾಡಿರುವ ಸರಕಾರದ ತೀರ್ಮಾನವು ಸಂವಿಧಾನದ ಆಶಯಗಳಿಗೆ ಅನುಗುಣವಾಗಿಯೇ ಇದ್ದು, ನಾಡಿನ ಜಾತ್ಯತೀತತೆಗೆ ಸಲ್ಲಿಸಿರುವ ಗೌರವವಾಗಿದೆ ಎಂದಿರುವ ಬಿಳಿಮಲೆ, ಹಿಂದೆ ಇಲ್ಲದ ವಿರೋಧ ಈಗ ಕಂಡು ಬರುತ್ತಿರುವುದರ ಹಿನ್ನೆಲೆಯಲ್ಲಿ ಇದರಲ್ಲಿ ಮಹಿಳಾ ವಿರೋಧಿ ನಿಲುವಷ್ಟೇ ಅಲ್ಲ, ಒಂದು ರಾಜಕೀಯ ವರ್ಗದ ಅನ್ನ ಮತ್ತು ಅಧಿಕಾರದ ಪ್ರಶ್ನೆ ಅಡಗಿದೆ ಎಂದಿದ್ದಾರೆ.

ನಾಡಹಬ್ಬ ದಸರಾ ಎಂದಿಗೂ ಕೇವಲ ಧಾರ್ಮಿಕ ಹಬ್ಬವಾಗಿ ಜನರ ಮನಸ್ಸನ್ನು ಆಕರ್ಷಿಸಿಲ್ಲ. ಯಾವುದೇ ಊರಿನ ಜಾತ್ರೆಗಳು ಪೂರ್ತಿಯಾಗಿ ಧಾರ್ಮಿಕವಾಗಲು ಸಾಧ್ಯವೇ ಇಲ್ಲ. ಇಂತಹ ಸಾರ್ವಜನಿಕ ಹಬ್ಬಗಳಲ್ಲಿ ದೇವರು ಪವಿತ್ರ ಜಾಗದಿಂದ ಹೊರ ಬಂದು ಜಾತ್ಯತೀತರಾಗುತ್ತಾರೆ ಮತ್ತು ಈ ಜಾತ್ಯತೀತತೆಯಲ್ಲಿಯೇ ನಮ್ಮ ನಾಡಿನ ಅಸ್ಮಿತೆ ಅಡಗಿದೆ ಎಂದು ಡಾ.ಬಿಳಿಮಲೆ ಹೇಳಿದ್ದಾರೆ.

ಜಯಚಾಮರಾಜೇಂದ್ರ ಒಡೆಯರ್ ಅವರು ಮೈಸೂರಿನ ಅರಸರಾಗಿದ್ದ ಸಂದರ್ಭದಲ್ಲಿ ಆನೆಯು ಹೊತ್ತು ತರುತ್ತಿದ್ದ ಪಲ್ಲಕಿಯ ಮೇಲೆ ತಾವೇ ಆಸೀನರಾಗಿರುತ್ತಿದ್ದರು. ಈಗ ನಾಡದೇವತೆ ಚಾಮುಂಡೇಶ್ವರಿಯ ವಿಗ್ರಹವನ್ನು ಕನ್ನಡದ ಪ್ರಾತಿನಿಧಿಕ ಸಂಕೇತವನ್ನಾಗಿ ಪಲ್ಲಕಿಯಲ್ಲಿ ಕೂರಿಸುವುದು ಹೇಗೆ ಧಾರ್ಮಿಕತೆಯ ಕುರುಹಾಗುತ್ತದೆ ಎಂದು ಡಾ.ಬಿಳಿಮಲೆ ಪ್ರಶ್ನಿಸಿದ್ದಾರೆ.

ವಿಜಯನಗರದ ಪತನದ ನಂತರ ಮೈಸೂರಿನಲ್ಲಿ ದಸರಾ ಆಚರಣೆ ಆರಂಭವಾಗಿದ್ದು, ಆ ಸಂದರ್ಭದಲ್ಲಿ ಹಂಪಿಯಲ್ಲಿ ನಡೆಯುತ್ತಿದ್ದ ದಸರಾ ದಿಬ್ಬಣದಲ್ಲಿ ಮುಸ್ಲಿಮ್ ಅರಬ್ಬರು, ತುರ್ಕರು ಅಥವಾ ಪರ್ಷಿಯನ್ನರು ಪಾಲ್ಗೊಳುತ್ತಿದ್ದ ಕುರಿತಂತೆ ಅನೇಕ ಸಂಶೋಧನೆಗಳು ದಾಖಲಿಸಿವೆ. ಇಂದಿನ ಅನಗತ್ಯ ವಿರೋಧವು ನಮ್ಮ ಸಮಾಜವನ್ನು ನೂರಾರು ವರ್ಷಗಳ ಹಿಂದಕ್ಕೆ ಕೊಂಡೊಯ್ಯುವ ರೀತಿಯಲ್ಲಿ ಕಂಡಿದೆ ಎಂದು ಡಾ.ಬಿಳಿಮಲೆ ಖಂಡಿಸಿದ್ದಾರೆ.

ಕುವೆಂಪು ಅವರು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವೆಂದರು. ಅವರ ಆಶಯಕ್ಕೆ ಭಂಗ ತರದ ರೀತಿಯಲ್ಲಿ ನಾವು ಬಾಳಬೇಕಿದೆ ಎಂದು ಡಾ.ಬಿಳಿಮಲೆ ಹೇಳಿದ್ದಾರೆ.

ಕರ್ನಾಟಕ ಸಂಸ್ಕೃತಿಯ ಬಹುಮುಖಿ ಪರಂಪರೆ ಒಟ್ಟಿಗೆ ಬಾಳಿದ ರೀತಿಯನ್ನು ನಾಡಿನ ಯುವ ಪೀಳಿಗೆ ಅರಿಯುವುದು ಬಹಳ ಮುಖ್ಯ. ಇಂತಹ ವಿರೋಧಗಳು ನಮ್ಮ ಮುಂದಿನ ಜನಾಂಗವನ್ನು ದಾರಿ ತಪ್ಪಿಸುವ ಸಾಮಥ್ರ್ಯವನ್ನು ಹೊಂದಿವೆ. ಇದಕ್ಕೆ ಅವಕಾಶ ನೀಡದಂತೆ ನಾಡಿನ ಜನ ಒಗ್ಗಟ್ಟನ್ನು ತೋರಬೇಕು ಎಂದು ಡಾ.ಬಿಳಿಮಲೆ ತಿಳಿಸಿದ್ದಾರೆ.

ಶೀಘ್ರದಲ್ಲೇ 40 ಕೃತಿಗಳ ಲೋಕಾರ್ಪಣೆ

ಕರ್ನಾಟಕದ ಬಹುಭಾಷಾ ಪರಿಸರ, ವಿವಿಧ ಮತಧರ್ಮಗಳ ಅಸ್ತಿತ್ವದ ನಡುವೆಯೂ ನಾಡು ನಿರ್ಮಾಣವಾದ ರೀತಿಯನ್ನು ಯುವ ಜನತೆಗೆ ಪರಿಚಯ ಮಾಡಿಸುವ ಸದುದ್ದೇಶದಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕನ್ನಡ ಸಾಮರಸ್ಯದ ನೆಲೆಗಳು ಶೀರ್ಷಿಕೆಯಡಿಯಲ್ಲಿ ಅತಿ ಶೀಘ್ರದಲ್ಲೇ 40 ಕೃತಿಗಳನ್ನು ಲೋಕಾರ್ಪಣೆಗೊಳಿಸಲಿದೆ ಎಂದಿರುವ ಬಿಳಿಮಲೆ, ಈ ಕೃತಿಗಳು ಸೌಹಾರ್ದ ಪರಂಪರೆಯನ್ನು ಕಾಪಾಡಿಕೊಂಡು ಬಂದಿರುವ ಕರ್ನಾಟಕವು ಇಂದಿಗೂ ತನ್ನ ಸಾಮರಸ್ಯದ ಅಸ್ಮಿತೆಯನ್ನು ಹೇಗೆ ಉಳಿಸಿಕೊಂಡಿದೆ ಎನ್ನುವ ಪರಿಚಯವನ್ನು ಮಾಡಿಸಲಿವೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X