Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ...

ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರಪ್ರಥಮ ಬಾರಿಗೆ ಶೇ.15 ಎನ್‌ಆರ್‌ಐ ಕೋಟಾ : ಡಾ.ಶರಣ ಪ್ರಕಾಶ್ ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ6 Sept 2025 10:11 PM IST
share
ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರಪ್ರಥಮ ಬಾರಿಗೆ ಶೇ.15 ಎನ್‌ಆರ್‌ಐ ಕೋಟಾ :  ಡಾ.ಶರಣ ಪ್ರಕಾಶ್ ಪಾಟೀಲ್‌
"ರಾಜ್ಯಕ್ಕೆ 450 ವೈದ್ಯಕೀಯ ಸೀಟು ಹೆಚ್ಚಳ"

ಬೆಂಗಳೂರು, ಸೆ.6 : ರಾಜ್ಯಕ್ಕೆ ಹೆಚ್ಚುವರಿ ವೈದ್ಯಕೀಯ ಸೀಟುಗಳು ಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದಲೂ ಇತ್ತು. ಅದೀಗ ಸಾಕಾರಗೊಂಡಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಆದೇಶ ನೀಡಿದೆ. ಇದರ ಜೊತೆಗೆ ಇದೇ ಮೊದಲ ಬಾರಿಗೆ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಶೇ.15ರಷ್ಟು ಕೋಟಾವನ್ನು ನೀಡಲು ನಿರ್ಧರಿಸಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಆರ್‌.ಪಾಟೀಲ್ ತಿಳಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ 400 ಸೀಟುಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್‌ಆರ್‌ಐ ಕೋಟಾ ನಿಗದಿಪಡಿಸಲಾಗಿದ್ದ, ಇದಕ್ಕೆ 25 ಲಕ್ಷ ರೂ. ಶುಲ್ಕ ನಿಗದಿಪಡಿಸಲಾಗಿದೆ. ಇದರಿಂದ ಸರಕಾರಿ ವೈದ್ಯಕೀಯ ಕಾಲೇಜು ಸಂಸ್ಥೆಗಳು ಸರಕಾರದ ಅನುದಾನದ ಮೇಲೆ ಹೆಚ್ಚು ಅವಲಂಬಿತವಾಗದೇ ಸ್ವಾವಲಂಬಿಯಾಗಿರಲು ನೆರವಾಗಲಿದೆ ಎಂದರು.

ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ, ಚಿಕ್ಕಬಳ್ಳಾಪುರ, ಹಾಸನ, ರಾಯಚೂರು, ವಿಜಯನಗರ ಕಾಲೇಜುಗಳಿಗೆ ಹೆಚ್ಚುವರಿಯಾಗಿ ತಲಾ 50 ಸೀಟುಗಳು ಹಂಚಿಕೆಯಾಗಲಿದವೆ. ಹುಬ್ಬಳ್ಳಿಯ ಮೂರು ಸಾವಿರದ ಮಠದ ಮೆಡಿಕಲ್‌ ಕಾಲೇಜಿಗೂ ಹೆಚ್ಚುವರಿಯಾಗಿ 50 ಸೀಟು ಬಂದಿದೆ. ಇದು ನಿಜಕ್ಕೂ ಸಂತಸದ ವಿಷಯ ಎಂದು ಡಾ. ಪಾಟೀಲ್‌ ತಿಳಿಸಿದರು.

ನೀಟ್ ಫಲಿತಾಂಶದ ನಂತರ ಪ್ರಕಟಿಸಿದ್ದ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ 9,263 ಸೀಟುಗಳು ಲಭ್ಯವಿದ್ದವು. ಈಗ ಹೆಚ್ಚುವರಿಯಾಗಿ ಸೀಟುಗಳು ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಭ್ಯವಿರುವ ವೈದ್ಯಕೀಯ ಸೀಟುಗಳ ಸಂಖ್ಯೆ ಈಗ 9,663ಕ್ಕೆ ಏರಿಕೆಯಾಗಿದೆ ಎಂದು ಅವರು ಮಾಹಿತಿ ನೀಡಿದರು.

ದೇಶಾದ್ಯಂತ ಪ್ರಸಕ್ತ ವರ್ಷ 8000 ವೈದ್ಯಕೀಯ ಸೀಟುಗಳನ್ನು ಹೆಚ್ಚಿಸಲಾಗುವುದು ಎಂದು ಎನ್‍ಎಂಸಿಯ ಅಧ್ಯಕ್ಷ ಅಭಿಜಿತ್ ಚಂದ್ರಕಾಂತ್ ಸೇಠ್ ಹೇಳಿದ್ದರು. ಈ ಘೋಷಣೆ ಮಾಡಿದ ಬೆನ್ನಲ್ಲೇ ದಿಲ್ಲಿಗೆ ತೆರಳಿ ರಾಜ್ಯದ ಸರಕಾರಿ ವೈದ್ಯಕೀಯ ಕಾಲೇಜುಗಳಿಗೆ ಹೆಚ್ಚುವರಿ ವೈದ್ಯಕೀಯ ಸೀಟುಗಳನ್ನು ಮಂಜೂರು ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದರು.

ಕರ್ನಾಟಕದಲ್ಲಿ ಪ್ರತಿವರ್ಷ ವೈದ್ಯಕೀಯ ಶಿಕ್ಷಣಕ್ಕೆ ದಾಖಲಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೆಲವು ಪ್ರತಿಭಾವಂತ ವಿದ್ಯಾರ್ಥಿಗಳು ಖಾಸಗಿ ಕಾಲೇಜುಗಳಿಗೆ ಅಧಿಕ ಶುಲ್ಕ ಕಟ್ಟಿ ಪ್ರವೇಶ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕರ್ನಾಟಕಕ್ಕೆ ನಿಗದಿಪಡಿಸಿರುವ ವೈದ್ಯಕೀಯ ಸೀಟುಗಳು ಜೊತೆಗೆ ಹೆಚ್ಚುವರಿಯಾಗಿ ವೈದ್ಯಕೀಯ ಸೀಟುಗಳನ್ನು ಮಂಜೂರು ಮಾಡುವಂತೆ ಮನವಿ ಮಾಡಿದ್ದೆವು ಎಂದು ಡಾ.‌ ಪಾಟೀಲ್‌ ತಿಳಿಸಿದರು.

ಹೆಚ್ಚುವರಿ ಸೀಟು ಪಡೆದ ಕಾಲೇಜುಗಳು;

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ, ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು ಮತ್ತು ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಸೀಟುಗಳ ಸಂಖ್ಯೆ ಹೆಚ್ಚಳವಾಗಿದೆ ಎಂದರು.

ಬೆಂಗಳೂರು ಟೆಕ್‌ ಸಮ್ಮಿಟ್‌ ಮಾದರಿಯಲ್ಲಿ ಸ್ಕಿಲ್‌ ಸಮ್ಮಿಟ್‌ ಬೆಂಗಳೂರು ಟೆಕ್‌ ಸಮ್ಮಿಟ್‌ ಮಾದರಿಯಲ್ಲಿ ಇದೇ ನವೆಂಬರ್‌ನಲ್ಲಿ ಸ್ಕಿಲ್‌ ಸಮ್ಮಿಟ್‌ ಆಯೋಜಿಸಲಾಗುತ್ತದೆ. ನವೆಂಬರ್‌ 4,5,6ರಂದು ಈ ಶೃಂಗಸಭೆ ಆಯೋಜಿಸಲಾಗಿದೆ ಎಂದು ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.

ಮೈಸೂರಿನಲ್ಲಿ ಉದ್ಯೋಗ ಮೇಳ: ದಸರಾ ಬಳಿಕ ಮೈಸೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುತ್ತದೆ. ಇದರ ನೋಂದಣಿ ಕಾರ್ಯ ಶೀಘ್ರದಲ್ಲೇ ಆರಂಭವಾಗುತ್ತದೆ. ಈ ಉದ್ಯೋಗ ಮೇಳದ ಪೋಸ್ಟರ್‌ ಅನ್ನೂ ಬಿಡುಗಡೆ ಮಾಡಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

ಮುಂದಿನ ಅಕ್ಟೋಬರ್‌ ತಿಂಗಳಿನಲ್ಲಿ ನರ್ಸಿಂಗ್‌ ಶೃಂಗಸಭೆಯನ್ನೂ ಆಯೋಜಿಸುತ್ತಿದ್ದೇವೆ. ನಂತರ ವಿದೇಶದಲ್ಲಿ ರೋಡ್‌ ಶೋ ಮಾಡುವ ಮೂಲಕ ಉದ್ಯೋಗ ಮೇಳಕ್ಕೆ ಆದ್ಯತೆ ನೀಡಲಾಗಿದೆ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X