Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಕ್ಫ್ ಇಲಾಖೆಯ ದರ್ಗಾ, ಮಸೀದಿಗಳಲ್ಲಿ...

ವಕ್ಫ್ ಇಲಾಖೆಯ ದರ್ಗಾ, ಮಸೀದಿಗಳಲ್ಲಿ ‘ಇ-ಹುಂಡಿ’ ಆ್ಯಪ್: ಸಚಿವ ಝಮೀರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ27 Jun 2023 10:09 PM IST
share
ವಕ್ಫ್ ಇಲಾಖೆಯ ದರ್ಗಾ, ಮಸೀದಿಗಳಲ್ಲಿ ‘ಇ-ಹುಂಡಿ’ ಆ್ಯಪ್: ಸಚಿವ ಝಮೀರ್ ಅಹ್ಮದ್

ಬೆಂಗಳೂರು, ಜೂ.27: ಮುಜರಾಯಿ ಇಲಾಖೆಯ ದೇವಾಲಯಗಳ ಮಾದರಿಯಲ್ಲಿ ವಕ್ಫ್ ಇಲಾಖೆಯ ವ್ಯಾಪ್ತಿಯಲ್ಲಿರುವ ದರ್ಗಾ ಹಾಗೂ ಮಸೀದಿಗಳಿಗೆ ಕಾಣಿಕೆ ಮತ್ತು ದೇಣಿಗೆ ನೀಡಲು ‘ಇ-ಹುಂಡಿ’ ಆ್ಯಪ್ ವ್ಯವಸ್ಥೆ ಸಿದ್ದಪಡಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ಮಂಗಳವಾರ ನಗರದ ಶೇಷಾದ್ರಿಪುರದಲ್ಲಿರುವ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ವಕ್ಫ್ ಮಂಡಳಿಯ ಸಭೆಯಲ್ಲಿ ನೂತನ ಆ್ಯಪ್ ಗೆ ಚಾಲನೆ ನೀಡಿ ಅವರು ಮಾತನಾಡಿದರು.

ದರ್ಗಾ ಹಾಗೂ ಮಸೀದಿಗಳಿಗೆ ಸಮುದಾಯ ನೀಡುವ ಕಾಣಿಕೆ ಹಾಗೂ ದೇಣಿಗೆ ದುರುಪಯೋಗ ಆಗದಂತೆ ಜತೆಗೆ ನಿಗದಿತ ಉದ್ದೇಶಕ್ಕೆ ಬಳಕೆ ಆಗುವಂತೆ ನೋಡಿಕೊಳ್ಳಲು ಈ ಆ್ಯಪ್ ಸಿದ್ದಪಡಿಸಲಾಗಿದೆ. ಬೆಂಗಳೂರಿನ ಹಝ್ರತ್ ತವಕ್ಕಲ್ ಮಸ್ತಾನ್ ಶಾ ದರ್ಗಾ ದಲ್ಲಿ ಇ-ಹುಂಡಿ ವ್ಯವಸ್ಥೆ ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದರು.

ಮುಂದಿನ ದಿನಗಳಲ್ಲಿ ವಕ್ಫ್ ವ್ಯಾಪ್ತಿಗೆ ಬರುವ 3131 ದರ್ಗಾ, 10,398 ಮಸೀದಿಗಳಲ್ಲೂ ಜಾರಿಗೊಳಿಸಲಾಗುವುದು. ಸಮುದಾಯ ಎಲ್ಲಿಂದ ಯಾವುದೆ ಸಮಯದಲ್ಲೂ ಫೆÇೀನ್ ಪೇ, ಗೂಗಲ್ ಪೇ ಮೂಲಕ ದೇಣಿಗೆ, ಕಾಣಿಕೆ ನೀಡಬಹುದಾಗಿದೆ ಎಂದು ಝಮೀರ್ ಅಹ್ಮದ್ ತಿಳಿಸಿದರು.

ಒತ್ತುವರಿ ತೆರವಿಗೆ ಕ್ರಮ: ವಕ್ಫ್ ವ್ಯಾಪ್ತಿಯಲ್ಲಿರುವ ಆಸ್ತಿಗಳ ಒತ್ತುವರಿ ತೆರವು ಬಗ್ಗೆ ವಿಶೇಷ ಗಮನ ನೀಡಲಾಗುವುದು. ಒಟ್ಟು 46 ಸಾವಿರ ಎಕರೆಯಷ್ಟು ವಕ್ಫ್ ಆಸ್ತಿಯಿದ್ದು ಹಲವು ಪ್ರಕರಣ ನ್ಯಾಯಾಲಯದಲ್ಲಿದ್ದು ಇತ್ಯರ್ಥಕ್ಕೆ ಅಡ್ವೋಕೆಟ್ ಜನರಲ್ ಜತೆ ಚರ್ಚಿಸಲಾಗುವುದು. ಬಜೆಟ್ ನಂತರ ವಕ್ಫ್ ಆಸ್ತಿ ಅದಾಲತ್ ನಡೆಸಲಾಗುವುದು ಎಂದು ಅವರು ಘೋಷಿಸಿದರು.

ವಕ್ಫ್ ಆಸ್ತಿಗಳನ್ನು ಕೆಲವು ಸರಕಾರಿ ಇಲಾಖೆಗಳೂ ಒತ್ತುವರಿ ಮಾಡಿದ್ದು, ಆ ಬಗ್ಗೆ ಗಮನಹರಿಸಿ ತೆರವು ಮಾಡಲಾಗುವುದು. ಖಾಸಗಿಯವರ ಒತ್ತುವರಿ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಒಟ್ಟು ಎಷ್ಟು ಆಸ್ತಿ ಒತ್ತುವರಿ ಆಗಿದೆ ಸರಕಾರಿ ಮತ್ತು ಖಾಸಗಿ ಸೇರಿ ಎಂಬುದರ ಬಗ್ಗೆ ಹಾಗೂ ನ್ಯಾಯಾಲಯದಲ್ಲಿರುವ ಪ್ರಕರಣಗಳ ಬಗ್ಗೆ ಪಟ್ಟಿ ಮಾಡಿ ಕೊಡುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ವಿಂಡ್ಸರ್ ಮ್ಯಾನರ್ ಹೋಟೆಲ್ ಜಾಗಕ್ಕೆ ಕಡಿಮೆ ಬಾಡಿಗೆ ನಿಗದಿ ಆಗಿದ್ದು ಮಾರುಕಟ್ಟೆ ದರದ ಪ್ರಕಾರ 2 ಕೋಟಿ ರೂ.ವರೆಗೂ ಬರಬೇಕಿದೆ. ಈ ಬಗ್ಗೆ ನ್ಯಾಯಾಲಯದಲ್ಲಿ ಹೋರಾಟ ನಡೆಸಬೇಕಿದೆ ಎಂದು ವಕ್ಫ್ ಮಂಡಳಿ ಸದಸ್ಯರು ಪ್ರಸ್ತಾಪ ಮಾಡಿದರು. ಈ ಕುರಿತು ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಝಮೀರ್ ಅಹ್ಮದ್ ತಿಳಿಸಿದರು.

ಸಭೆಯಲ್ಲಿ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ, ಸದಸ್ಯರಾದ ಆರ್.ಅಬ್ದುಲ್ ರಿಯಾಝ್ ಖಾನ್, ಆಸೀಫ್ ಅಲಿ ಶೇಕ್, ಯಾಕೂಬ್ ಯೂಸುಫ್, ಅನ್ವರ್ ಬಾಷ, ಮೌಲಾನ ಅಝರ್ ಆಬಿದಿ, ಹಝ್ರತ್ ಹಮೀದ್ ಶಾ ದರ್ಗಾ ಸಮಿತಿಯ ಆಡಳಿತಾಧಿಕಾರಿ ಜಿ.ಎ.ಬಾವ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

'ಶಿಕ್ಷಣ ಸಂಸ್ಥೆ ಅಭಿವೃದ್ಧಿಗೆ ಬಳಕೆ'

ವಕ್ಫ್ ಮಂಡಳಿಯಲ್ಲಿ 45 ಕೋಟಿ ರೂ.ಅನುದಾನ ಲಭ್ಯವಿದ್ದು ಅದನ್ನು ಶಾಲಾ, ಕಾಲೇಜು ಕಟ್ಟಡ ನಿರ್ಮಾಣ, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಬಳಕೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X