Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೋಲಾರದಲ್ಲಿಯೂ ಎಂಡೋಸಲ್ಫಾನ್ ಭೀತಿ ಇದೆ,...

ಕೋಲಾರದಲ್ಲಿಯೂ ಎಂಡೋಸಲ್ಫಾನ್ ಭೀತಿ ಇದೆ, ಆಂಧ್ರಕ್ಕೆ ಹೋಗಲು ತೀರ್ಮಾನ ಮಾಡಿದ್ದೇವೆ ಎಂದ ಜೆಡಿಎಸ್ ಶಾಸಕ!

► ರಾಜ್ಯಕ್ಕೆ ಧಕ್ಕೆಯಾಗುವ ರೀತಿಯ ಹೇಳಿಕೆ ಬೇಡ ಎಂದ ಕಾಂಗ್ರೆಸ್ ಸದಸ್ಯರು

ವಾರ್ತಾಭಾರತಿವಾರ್ತಾಭಾರತಿ12 July 2023 8:27 PM IST
share
ಕೋಲಾರದಲ್ಲಿಯೂ ಎಂಡೋಸಲ್ಫಾನ್ ಭೀತಿ ಇದೆ, ಆಂಧ್ರಕ್ಕೆ ಹೋಗಲು ತೀರ್ಮಾನ ಮಾಡಿದ್ದೇವೆ ಎಂದ ಜೆಡಿಎಸ್ ಶಾಸಕ!

ಬೆಂಗಳೂರು, ಜು.12: ಕೆ.ಸಿ.ವ್ಯಾಲಿ ಮೂಲಕ ಕೋಲಾರಕ್ಕೆ ನೀಡುತ್ತಿರುವ ನೀರನ್ನು ಮೂರನೆ ಹಂತದಲ್ಲಿ ಶುದ್ಧೀಕರಿಸದಿದ್ದರೆ ಮುಂದಿನ ದಿನಗಳಲ್ಲಿ ಕೋಲಾರದಲ್ಲಿಯೂ ಕರಾವಳಿ ಭಾಗದಲ್ಲಿ ಎಂಡೋಸಲ್ಫಾನ್ ಸಿಂಪಡೆಣೆಯಿಂದ ಆದಂತಹ ಅನಾಹುತದ ಪರಿಸ್ಥಿತಿ ಬರಬಹುದು ಎಂದು ಜೆಡಿಎಸ್ ಸದಸ್ಯ ಸಮೃದ್ಧಿ ಮಂಜುನಾಥ್ ಆತಂಕ ವ್ಯಕ್ತಪಡಿಸಿದರು.

ಬುಧವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಬಿಜೆಪಿ ಸೇರಿದಂತೆ ಯಾರೆ ಬಂದರೂ ನಮ್ಮ ಜಿಲ್ಲೆಗೆ ಕುಡಿಯುವ ನೀರು ಕೊಡುವ ಪ್ರಯತ್ನ ಮಾಡುತ್ತಿಲ್ಲ. ಈ ಹಿಂದೆ ಸಿದ್ದರಾಮಯ್ಯ ಸರಕಾರದಲ್ಲಿ ಎತ್ತಿನಹೊಳೆ ಯೋಜನೆ ಜಾರಿಗೆ ಅಡಿಗಲ್ಲು ಹಾಕಲಾಗಿತ್ತು. ಆದರೆ, ನೀರು ಮಾತ್ರ ಬರಲಿಲ್ಲ ಎಂದರು.

ವೀರಪ್ಪ ಮೊಯ್ಲಿ ಹಾಗೂ ಕೆ.ಎಚ್.ಮುನಿಯಪ್ಪ ಎತ್ತಿನಹೊಳೆ ಯೋಜನೆ ಬಗ್ಗೆ ನಮ್ಮ ಜಿಲ್ಲೆಯವರಿಗೆ ಸುಳ್ಳು ಹೇಳಿಕೊಂಡೆ ಬಂದಿದ್ದಾರೆ. ನಾವು ಏನು ತಪ್ಪು ಮಾಡಿದ್ದೇವೆ. ನಮಗೆ ನಾಲೆ, ನದಿ, ಸಮುದ್ರ ಯಾವುದು ಇಲ್ಲ. ಕೊಳವೆ ಬಾವಿಯನ್ನೆ ನಂಬಿಕೊಂಡಿದ್ದೇವೆ ಎಂದು ಮಂಜುನಾಥ್ ಹೇಳಿದರು.

‘ಆಂಧ್ರಕ್ಕೆ ಹೋಗಲು ತೀರ್ಮಾನ’ ಕಾಂಗ್ರೆಸ್ ಸದಸ್ಯರಿಂದ ಆಕ್ರೋಶ: ನಾವು ಕರ್ನಾಟಕ ಬಿಟ್ಟು ಆಂಧ್ರಕ್ಕೆ ಬಿಟ್ಟು ಹೋಗಲು ತೀರ್ಮಾನ ಮಾಡಿದ್ದೇವೆ ಎಂದು ಮಂಜುನಾಥ್ ನೀಡಿದ ಹೇಳಿಕೆಯನ್ನು ಟೀಕಿಸಿದ ಕಾಂಗ್ರೆಸ್ ಸದಸ್ಯ ಪಿ.ಎಂ.ನರೇಂದ್ರ ಸ್ವಾಮಿ, ರಾಜ್ಯದ ವಿಧಾನಸಭೆಯಲ್ಲಿ ನಿಂತು ರಾಜ್ಯಕ್ಕೆ ಧಕ್ಕೆಯಾಗುವ ರೀತಿಯ ಹೇಳಿಕೆ ನೀಡಬೇಡಿ ಎಂದರು.

ಇದಕ್ಕೆ ದನಿಗೂಡಿಸಿದ ಸಚಿವ ಪ್ರಿಯಾಂಕ್ ಖರ್ಗೆ, ನಾವು ಜನ ಪ್ರತಿನಿಧಿಯಾಗಿ ಸದನದಲ್ಲಿ ಈ ರೀತಿ ಮಾತನಾಡಿದರೆ, ಜನರಿಗೆ ಏನು ಸಂದೇಶ ಹೋಗುತ್ತದೆ. ಹಲವಾರು ಕಷ್ಟಗಳು, ನೋವು ಇರಬಹುದು. ಆದರೆ, ರಾಜ್ಯ ಬಿಟ್ಟು ಹೋಗುತ್ತೇವೆ ಎಂದು ಹೇಳುವುದು ಸರಿಯಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಮಂಜುನಾಥ್, ಕೃಷ್ಣಾ ನದಿ ನೀರನ್ನು ಮಹಾರಾಷ್ಟ್ರದಿಂದ ಆಂಧ್ರಕ್ಕೆ ಕೊಡುವ ಪಾಲನ್ನು ಪಡೆದಿದ್ದಾರೆ. ಆದರೆ, ನಾವು ಯಾಕೆ ನಮ್ಮ ಪಾಲು ಪಡೆಯಲು ಸಾಧ್ಯವಾಗಿಲ್ಲ. ಕೆ.ಸಿ.ವ್ಯಾಲಿ ಯೋಜನೆ ಮೂಲಕ ನೀಡುತ್ತಿರುವ ನೀರನ್ನು ಮೂರನೆ ಹಂತದ ಶುದ್ಧೀಕರಣ ಮಾಡದಿದ್ದರೆ ನಾವು ವಿಷಯುಕ್ತ ನೀರು ಸೇವನೆ ಮಾಡಬೇಕಾಗುತ್ತದೆ ಎಂದರು.

ನಮ್ಮ ಭಾಗದಲ್ಲಿ ಬೆಳೆಯುವ ಮಾವು, ಟೊಮೊಟೊ, ರೇಶ್ಮೆ ಮತ್ತು ಹಾಲನ್ನು ರಫ್ತು ಮಾಡುತ್ತೇವೆ. ಬೆಲೆ ಕುಸಿತದಿಂದಾಗಿ ಮಾವು ಬೆಳೆಯನ್ನು ರಸ್ತೆಗೆ ಹಾಕುತ್ತಿದ್ದೇವೆ. ಮೊದಲ ಬಾರಿ ನಾನು ಸದನದಲ್ಲಿ ಮಾತನಾಡುತ್ತಿದ್ದೇನೆ. ತಪ್ಪು ಮಾತನಾಡಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಮಂಜುನಾಥ್ ಹೇಳಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X