Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ...

ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಸ್ಥಾಪನೆ : ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ22 May 2025 8:46 PM IST
share
ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಸ್ಥಾಪನೆ : ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು, ನಾಳೆ(ಮೇ 23) ಮೈಸೂರಿನಲ್ಲಿ ಕೀಮೋಥೆರಪಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕ್ಯಾನ್ಸರ್ ರೋಗಿಗಳ ಅನುಕೂಲಕ್ಕಾಗಿ ಸಮೀಪದ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಲಭವಾಗಿ, ಗುಣಮಟ್ಟದ ಕೀಮೋಥೆರಪಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದರು.

ಕೇಂದ್ರ ಸರಕಾರ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲು ಪ್ರಸಕ್ತ ಬಜೆಟ್‍ನಲ್ಲಿ ಘೋಷಣೆ ಮಾಡಿದೆ. ಆದರೆ ನಮ್ಮ ಸರಕಾರ ಹಿಂದಿನ ಬಜೆಟ್‍ನಲ್ಲಿಯೇ ಕೇಂದ್ರಗಳನ್ನು ತೆರೆಯುವುದಾಗಿ ಹೇಳಿತ್ತು. ಹೀಗಾಗಿ 16 ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಹಾಗೆಯೇ ದಕ್ಷಿಣ ಕನ್ನಡ ಜಿಲ್ಲೆಯ ಎರಡು ತಾಲ್ಲೂಕುಗಳಲ್ಲಿ ಕೇಂದ್ರಗಳನ್ನು ಸ್ಥಾಪಿಸುವ ಬಗ್ಗೆ ಪ್ರಸ್ತಾವ ಇದೆ ಎಂದು ಅವರು ತಿಳಿಸಿದರು.

ಡೇ ಕೇರ್ ಕೀಮೋಥೆರಪಿ ಕೇಂದ್ರಗಳಲ್ಲಿ ಯಾವುದೇ ರೀತಿಯ ಕ್ಯಾನ್ಸರ್ ತಪಾಸಣೆಯನ್ನು ಮಾಡುವುದಿಲ್ಲ. ಆದರೆ ನೋಂದಾಯಿತ ತೃತೀಯ ಹಂತದ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಪ್ರಾರಂಭಿಕ ಚಿಕಿತ್ಸೆ ಪಡೆದ ನಂತರ ಮುಂದುವರೆದ ಕೀಮೋಥೆರಪಿ ಚಿಕಿತ್ಸೆಗಳನ್ನು ಈ ಕೇಂದ್ರಗಳಲ್ಲಿ ನೀಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ತೃತೀಯ ಹಂತದ ಆಸ್ಪತ್ರೆಗಳು ಮತ್ತು ಸರಕಾರದ ನಡುವಿನ ಒಪ್ಪಂದದ ಮೂಲಕ ಹಬ್-ಅಂಡ್-ಸ್ಪೋಕ್ ಮಾದರಿಯಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ತೃತೀಯ ಹಂತದ ಕ್ಯಾನ್ಸರ್ ಆಸ್ಪತ್ರೆಗಳು ಹಬ್ ಆಸ್ಪತ್ರೆಗಳಾಗಿ ಕಾರ್ಯ ನಿರ್ವಹಿಸಲಿವೆ. ಆಸ್ಪತ್ರೆಗಳಲ್ಲಿಯೇ ಸ್ಥಾಪಿಸಿದ ಡೇ ಕೇರ್ ಕೀಮೋಥೆರಪಿ ಕೇಂದ್ರಗಳು ಸ್ಪೋಕ್ ಕೇಂದ್ರಗಳಾಗಿ ಕಾರ್ಯನಿರ್ವಹಿಸಲಿವೆ. ಒಂದು ವರ್ಷದ ಅವಧಿಯ ಒಪ್ಪಂದ, ಮುಂದಿನ ವರ್ಷಗಳಿಗೆ ವಿಸ್ತರಣೆ ಆಗಲಿವೆ ಎಂದು ಅವರು ತಿಳಿಸಿದರು.

ತೃತೀಯ ಹಂತದ ಕ್ಯಾನ್ಸರ್ ಆಸ್ಪತ್ರೆಗಳು ಕ್ಯಾನ್ಸರ್ ತಪಾಸಣೆ ಮತ್ತು ಮೇಲ್ವಿಚಾರಣೆ ಮಾಡಲಿವೆ. ಹಾಗೆಯೇ ಔಷಧಿಗಳನ್ನು ತಯಾರಿಸಿ, ಸ್ಪೋಕ್ ಕೇಂದ್ರಗಳಿಗೆ ರವಾನಿಸಲಿವೆ. ಡೇ ಕೇರ್ ಕೀಮೋಥೆರಪಿ ಕೇಂದ್ರಗಳಲ್ಲಿ ಹಬ್‍ನೊಂದಿಗೆ ಸಮನ್ವಯ ಸಾಧಿಸಿ, ರೋಗಿಯ ಆರೈಕೆ ಮಾಡಲಾಗುತ್ತದೆ ಎಂದು ಸಚಿವರು ಹೇಳಿದರು.

ಡೇ ಕೇರ್ ಕೀಮೋಥೆರಪಿ ಕೇಂದ್ರಗಳಲ್ಲಿ ಒಬ್ಬ ವೈದ್ಯಕೀಯ ಆಂಕೋಲಾಜಿಸ್ಟ್, ಕೀಮೋಥೆರಪಿ ಚಿಕಿತ್ಸೆಯಲ್ಲಿ ತರಬೇತಿ ಪಡೆದ ಇಬ್ಬರು ದಾದಿಯರು ಸೇರಿದಂತೆ ಮತ್ತಿತರರು ಇರುತ್ತಾರೆ. ಪ್ರತಿ ಆಸ್ಪತ್ರೆಯಲ್ಲಿ 10 ಬೆಡ್ ಮೀಸಲಿಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕೋವಿಡ್ ಪ್ರಕರಣಗಳ ಬಗ್ಗೆ ಯಾರೂ ಗಾಬರಿ ಪಡುವ ಅಗತ್ಯವಿಲ್ಲ. 16 ಕೋವಿಡ್ ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಹೀಗಾಗಿ ಮಾನಿಟರ್ ಮಾಡಿ ಎಂದು ಸೂಚನೆ ನೀಡಲಾಗಿದೆ. ಆದರೆ ಕೇಂದ್ರದಿಂದ ಯಾವುದೇ ಮಾರ್ಗಸೂಚಿ ಬಂದಿಲ್ಲ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಪ್ರತಿ ವರ್ಷ 70 ಸಾವಿರ ಕ್ಯಾನ್ಸರ್ ಖಾಯಿಲೆ ಕಾಣಿಸಿಕೊಳ್ಳುತ್ತಿದೆ. ಬಡವರು ಕಿದ್ವಾಯಿಯಂತಹ ಸಂಸ್ಥೆಗಳಿಗೆ ಬರಬೇಕು. ಕೀಮೋಥೆರಪಿಗಾಗಿ ಶೇ.60 ರೋಗಿಗಳು 100 ಕಿ.ಮೀ. ಪ್ರಯಾಣ ಮಾಡಬೇಕು. ಹಾಗಾಗಿ ಜಿಲ್ಲೆಗಳಲ್ಲಿನ ಜನರಿಗೆ ಅನುಕೂಲ ಆಗಲಿ ಎಂದು ಜಿಲ್ಲಾ ಆಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರಗಳನ್ನು ಆರಂಭಿಸಲಾಗಿದೆ.

-ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ

ಜಿಲ್ಲೆ- ಕೀಮೋಥೆರಪಿ ಕೇಂದ್ರ

1.ವಿಜಯಪುರ - ಇನ್-ಹೌಸ್

2.ಉಡುಪಿ - ಇನ್-ಹೌಸ್

3.ಬಳ್ಳಾರಿ - ಹುಬ್ಬಳ್ಳಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

4.ಧಾರವಾಡ - ಹೆಚ್‍ಸಿಜಿ ಹಾಸ್ಪಿಟಲ್

5.ಚಿತ್ರದುರ್ಗ - ಹುಬ್ಬಳ್ಳಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

6.ವಿಜಯನಗರ - ಹುಬ್ಬಳ್ಳಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

7.ಹಾವೇರಿ - ಹುಬ್ಬಳ್ಳಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

8.ದಾವಣಗೆರೆ - ಹುಬ್ಬಳ್ಳಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

9.ಬೆಂಗಳೂರು ಗ್ರಾಮಾಂತರ - ಸಂಜೀವಿನಿ ಆಸ್ಪತ್ರೆ,

10.ರಾಮನಗರ - ಸಂಜೀವಿನಿ ಆಸ್ಪತ್ರೆ,

11. ಬೆಂಗಳೂರು ನಗರ - ಸಂಜೀವಿನಿ ಆಸ್ಪತ್ರೆ, ಸಿ.ವಿ. ರಾಮನ್ ಆಸ್ಪತ್ರೆ

12.ದಕ್ಷಿಣ ಕನ್ನಡ – ಮಂಗಳೂರಿನ ಕೆಎಂಸಿ

13.ಮೈಸೂರು - ಕಿದ್ವಾಯಿ ಆಸ್ಪತ್ರೆ,

14.ತುಮಕೂರು - ಸಿದ್ಧಾರ್ಥ ಮೆಡಿಕಲ್ ಕಾಲೇಜು

15.ಕೋಲಾರ - ಆರ್.ಎಲ್.ಜಾಲಪ್ಪ ಮೆಡಿಕಲ್ ಕಾಲೇಜು ಆಸ್ಪತ್ರೆ

16.ಬಾಗಲಕೋಟೆ - ನಿಜಲಿಂಗಪ್ಪ ಮೆಡಿಕಲ್ ಕಾಲೇಜು ಆಸ್ಪತ್ರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X