Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 12 ಎಕರೆಯಲ್ಲಿ ಟೊಮೆಟೊ ಬೆಳೆದು 40 ಲಕ್ಷ...

12 ಎಕರೆಯಲ್ಲಿ ಟೊಮೆಟೊ ಬೆಳೆದು 40 ಲಕ್ಷ ಆದಾಯ ಗಳಿಸಿದ ಚಾಮರಾಜನಗರದ ರೈತ ಸಹೋದರರು

ವಾರ್ತಾಭಾರತಿವಾರ್ತಾಭಾರತಿ7 Aug 2023 11:56 PM IST
share
12 ಎಕರೆಯಲ್ಲಿ ಟೊಮೆಟೊ ಬೆಳೆದು 40 ಲಕ್ಷ ಆದಾಯ ಗಳಿಸಿದ ಚಾಮರಾಜನಗರದ ರೈತ ಸಹೋದರರು

ಚಾಮರಾಜನಗರ : ದೇಶಾದ್ಯಂತ ಟೊಮೆಟೊ ಬೆಲೆ ಗಗನಕ್ಕೇರಿದೆ. ಗ್ರಾಹಕರು ಟೊಮೆಟೊ ಖರೀದಿಸಲು ಹಿಂದೇಟು ಹಾಕುವಂತಾಗಿದೆ. ಇನ್ನೊಂದೆಡೆ ಬೆಲೆ ಏರಿಕೆಯಿಂದಾಗಿ ಟೊಮೆಟೊ ಬೆಳೆದ ರೈತರು ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಚಾಮರಾಜನಗರದ ಯುವ ರೈತರಿಬ್ಬರು ಒಟ್ಟು 12 ಎಕರೆಯಲ್ಲಿ ಟೊಮೆಟೊ ಬೆಳೆದು 40 ಲಕ್ಷ ರೂಪಾಯಿ ಸಂಪಾದಿಸಿದ್ದಾರೆ. ಚಾಮರಾಜನಗರ ತಾಲೂಕಿನ ಲಕ್ಷ್ಮಿಪುರದ ಸಹೋದರರಾದ ರಾಜೇಶ್​ ಮತ್ತು ನಾಗೇಶ್​ ತಮ್ಮ ಜಮೀನಿನಲ್ಲಿ ಉತ್ತಮ ಬೆಳೆ ತೆಗೆದಿದ್ದಾರೆ. ಸಹೋದರರು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ಟೊಮೊಟೊ ಬೆಳೆ ಸಹೋದರರ ಕೈ ಹಿಡಿದಿದೆ.ಲಕ್ಷ್ಮಿಪುರ ಗ್ರಾಮದ ಕೃಷ್ಣಶೆಟ್ಟಿ ಎಂಬವರ ಮಕ್ಕಳಾದ ರಾಜೇಶ್ ಹಾಗೂ ನಾಗೇಶ್, ಸ್ವಂತ ಎರಡು ಎಕರೆ ಜಮೀನಿನ ಜೊತೆಗೆ 10 ಎಕರೆ ಜಮೀನು ಗುತ್ತಿಗೆ ಪಡೆದು ಟೊಮೆಟೊ ಬೆಳೆದಿದ್ದರು. ಕಳೆದ ಮೂರ್ನಾಲ್ಕು ವರ್ಷಗಳಿಂದ ಟೊಮೆಟೊ ಬೆಳೆಯುತ್ತಿರುವ ಇವರಿಗೆ ಈ ಬಾರಿ ಉತ್ತಮ ಫಸಲು, ಬೆಲೆ ಸಿಕ್ಕಿದೆ. ಈಗಾಗಲೇ ಇವರು ಸುಮಾರು 50-60 ಟನ್​​ನಷ್ಟು ಟೊಮೊಟೊ ಮಾರಾಟ ಮಾಡಿದ್ದಾರೆ.

ರಾಜೇಶ್ ಮಾತನಾಡಿ, "ಕಳೆದ ನಾಲ್ಕು ವರ್ಷಗಳಿಂದ ನಾವು ಒಟ್ಟು 12 ಎಕರೆಯಲ್ಲಿ ಟೊಮೆಟೊ ಬೆಳೆಯುತ್ತಿದ್ದೇವೆ. ಈ ಬಾರಿ ಉತ್ತಮ ಬೆಲೆ ಲಭಿಸಿದೆ. ಇಲ್ಲಿವರೆಗೆ 2,000 ಬಾಕ್ಸ್ ಟೊಮೊಟೊ ಮಾರಿದ್ದೇವೆ. ಇದರಿಂದ ಒಟ್ಟು 40 ಲಕ್ಷ ರೂಪಾಯಿ ಆದಾಯ ದೊರೆತಿದೆ. ಕಳೆದ 4 ವರ್ಷಗಳಲ್ಲೇ ಈ ಬಾರಿ ಅತಿ ಹೆಚ್ಚು ಲಾಭ ಕಂಡಿದ್ದೇವೆ. ನಾನು, ನನ್ನ ಸಹೋದರ ನಾಗೇಶ್ ಹಾಗೂ ತಂದೆ, ತಾಯಿ ಹೊಲದಲ್ಲಿ ಒಟ್ಟಾಗಿ ದುಡಿದಿದ್ದೇವೆ. ರಾತ್ರಿ ವೇಳೆ ಜಮೀನು ಕಾಯುತ್ತೇವೆ. ಈ ಸಲ ಹೆಚ್ಚು ಆದಾಯ ಲಭಿಸಿರುವುದರಿಂದ ನಮ್ಮ ಸಾಲಗಳನ್ನು ತೀರಿಸಿದ್ದೇವೆ" ಎಂದು ಸಂತಸ ವ್ಯಕ್ತಪಡಿಸಿದರು.

ಸದ್ಯ ದೇಶಾದ್ಯಂತ ಟೊಮೆಟೊಗೆ ಬಂಪರ್ ಬೆಲೆ ಇದೆ. ಇನ್ನೂ ಒಂದು ತಿಂಗಳು ದರ ಇಳಿಕೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ರೈತರ ಹೊಲಕ್ಕೆ ದಲ್ಲಾಳಿಗಳು ಬಂದು ಟೊಮೆಟೊ ಖರೀದಿಸಿ ತೆಗೆದುಕೊಂಡು ಹೋಗುತ್ತಿದ್ದಾರೆ. ಈಗಾಗಲೇ ಅರ್ಧ ಕೊಯ್ಲು ಮುಗಿದಿದೆ. ಇನ್ನರ್ಧ ಕೊಯ್ಲು ಬಾಕಿ ಉಳಿದಿದ್ದು ಉತ್ತಮ ಆದಾಯದ ನಿರೀಕ್ಷೆ ರೈತರದ್ದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X