Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರೈತರು ಹೊಸ ತಂತ್ರಜ್ಞಾನಗಳ ಬಳಕೆಗೆ...

ರೈತರು ಹೊಸ ತಂತ್ರಜ್ಞಾನಗಳ ಬಳಕೆಗೆ ಆದ್ಯತೆ ನೀಡಲಿ: ಸಚಿವ ಎಂ.ಸಿ ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ7 Jan 2024 9:05 PM IST
share
ರೈತರು ಹೊಸ ತಂತ್ರಜ್ಞಾನಗಳ ಬಳಕೆಗೆ ಆದ್ಯತೆ ನೀಡಲಿ: ಸಚಿವ ಎಂ.ಸಿ ಸುಧಾಕರ್

ಬೆಂಗಳೂರು: ಹೆಚ್ಚಿನ ಇಳುವರಿ, ಗುಣಮಟ್ಟದ ಉತ್ಪನ್ನಗಳನ್ನು ಬೆಳೆಯುವ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನಗಳ ಬಳಕೆಗೆ ರೈತರು ಆದ್ಯತೆ ನೀಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಕರೆ ನೀಡಿದ್ದಾರೆ.

ರವಿವಾರ ನಗರದಲ್ಲಿ ನಡೆದ ಶ್ರೀ ಸಿಂಧೂರಿ ಅಗ್ರೋ ಟೆಕ್ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಸಿಂಧೂರಿ ಅಗ್ರೋ ಟೆಕ್ ಸಂಸ್ಥೆಯ ಸಾವಯವ ಸೂಕ್ಷ್ಮ ಪೋಷಕಾಂಶಗಳನ್ನು ಬಳಸಿ ಹೆಚ್ಚಿನ ಇಳುವರಿ ಪಡೆದ ರೈತರನ್ನು ಸನ್ಮಾನಿಸಿ ಮಾತನಾಡಿದ ಅವರು, ಸಾಂಪ್ರದಾಯಿಕ ವ್ಯವಸಾಯ ಪದ್ದತಿಯಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರೈತರು ಆಧುನಿಕ ಆವಿಷ್ಕಾಕರಗಳನ್ನು ಅಳವಡಿಸಿಕೊಳ್ಳುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಜನರು ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಗುಣಮಟ್ಟದ ಉತ್ಪನ್ನಗಳನ್ನ ಉತ್ಪಾದಿಸುವ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನಗಳು ರೈತರಿಗೆ ಸಹಾಯ ಮಾಡುತ್ತವೆ. ಸಾವಯವ ಕೃಷಿ ಉತ್ಪನ್ನಗಳತ್ತಲೂ ಹೆಚ್ಚಿನ ಒಲವು ಇದ್ದು, ರೈತರು ಸಾವಯವ ಕೃಷಿಗೂ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು.

ಕೃಷಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿ, ಕೃಷಿ ಕ್ಷೇತ್ರವನ್ನು ಹೆಚ್ಚು ಶಕ್ತಿಯುತಗೊಳಿಸಿದಾಗ ದೇಶವನ್ನು ಸಧೃಢಗೊಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ಸಿಂಧೂರಿ ಅಗ್ರೋ ಟೆಕ್‌ ನಂತಹ ಸಂಸ್ಥೆಗಳು ಸರಕಾರಕ್ಕೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿವೆ. 25 ವರ್ಷಗಳಿಂದ ಉತ್ತಮ ಸಾವಯವ ಸೂಕ್ಷ್ಮ ಪೋಷಕಾಂಶಗಳ ಉತ್ಪನ್ನಗಳನ್ನು ನೀಡುವ ಮೂಲಕ ರೈತರ ಬದುಕನ್ನು ಹಸನು ಮಾಡುವ ಕಾರ್ಯದಲ್ಲಿ ತೊಡಗಿಕೊಂಡಿವೆ ಎಂದರು.

ರೈತರು ತಮ್ಮ ಜಮೀನಿನ ಮಣ್ಣಿನ ಸತ್ವವನ್ನು ಪರೀಕ್ಷಿಸಿಕೊಳ್ಳಬೇಕು. ಹಾಗೂ ಅದಕ್ಕೆ ಬೇಕಾದ ಉತ್ತಮ ಪೂರಕ ಪೋಷಕಾಂಶಗಳನ್ನು ರಾಸಾಯನಿಕ ಗೊಬ್ಬರಗಳ ಬಳಕೆ ಇಲ್ಲದೆ ಬೆಳೆಗಳನ್ನು ಬೆಳೆಯಬೇಕು. ಸಿರಿಧಾನ್ಯಗಳ ಬಗ್ಗೆ ಜನರು ಹೆಚ್ಚಿನ ಒಲವು ತೋರಿಸುತ್ತಿದ್ದು, ರಾಜ್ಯ ಸರಕಾರ ಅವುಗಳ ಪ್ರೋತ್ಸಾಹಕ್ಕೆ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸಿಂಧೂರಿ ಅಗ್ರೊ ಟೆಕ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕನಗಾಲ ಸತ್ಯನಾರಾಯಣ, ಆಂಧ್ರಪ್ರದೇಶದ ಮಾಜಿ ಕೃಷಿ ಸಚಿವ ಕನ್ನಾ ಲಕ್ಷ್ಮೀನಾರಾಯಣ, ಕನಿಗಿರಿ ಮಾಜಿ ಶಾಸಕ ಡಾ.ಎಂ.ಉಗ್ರ ನರಸಿಂಹ ರೆಡ್ಡಿ, ಅರ್ಬನ್ ಬ್ಯಾಂಕ್ ನ ಶ್ರೀನಿವಾಸ್ ಯಾದವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X