Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಫೆ.27- ಮಾ.3: ವಿಧಾನ ಸೌಧದಲ್ಲಿ ಪ್ರಥಮ...

ಫೆ.27- ಮಾ.3: ವಿಧಾನ ಸೌಧದಲ್ಲಿ ಪ್ರಥಮ ಪುಸ್ತಕ, ಸಾಹಿತ್ಯ ಉತ್ಸವ

ಸಾರ್ವಜನಿಕರಿಗೆ ಮುಕ್ತ ಪ್ರವೇಶ: ಶೇ. 80ರಷ್ಟು ಕನ್ನಡ ಪುಸ್ತಕ ಮಳಿಗೆಗಳು

ವಾರ್ತಾಭಾರತಿವಾರ್ತಾಭಾರತಿ3 Feb 2025 2:41 PM IST
share
ಫೆ.27- ಮಾ.3: ವಿಧಾನ ಸೌಧದಲ್ಲಿ ಪ್ರಥಮ ಪುಸ್ತಕ, ಸಾಹಿತ್ಯ ಉತ್ಸವ

ಮಂಗಳೂರು, ಫೆ.3: ಸಾಹಿತಿಗಳು, ಬರಹಗಾರರು ಹಾಗೂ ವಿದ್ವಾಂಸರನ್ನು ವಿಧಾನ ಸೌಧದ ಹತ್ತಿರವಾಗಿಸುವ ಉದ್ದೇಶದಿಂದ ಫೆ. 27ರಿಂದ ಮಾ. 3ರವರೆಗೆ ಇದೇ ಮೊದಲ ಬಾರಿಗೆ ವಿಧಾನ ಸೌಧದ ಆವರಣದಲ್ಲಿ ಪುಸ್ತಕ ಮತ್ತು ಸಾಹಿತ್ಯ ಉತ್ಸವ ಆಯೋಜಿಸಲಾಗಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.

ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಉತ್ಸವದ ಜತೆ ಆಹಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದೆ ಎಂದರು.

ಪುಸ್ತಕ ಉತ್ಸವದಲ್ಲಿ ಶೇ. 80ರಷ್ಟು ಕನ್ನಡ ಹಾಗೂ ಶೇ. 20ರಷ್ಟು ಇತರ ಭಾಷೆಗಳ ಪುಸ್ತಕಗಳ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುವುದು. ಸುಮಾರು 150ರಷ್ಟು ಮಳಿಗೆಗಳ ವ್ಯವಸ್ಥೆ ಮಾಡಲಾಗುತ್ತಿದ್ದು, ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗುತ್ತದೆ ಎಂದವರು ಹೇಳಿದರು.

ಉತ್ಸವದಲ್ಲಿ ಸಾಹಿತಿಗಳು ಬರೆದ ಪುಸ್ತಕ ಬಿಡುಗಡೆಗೆ ವೇದಿಕೆ ಕಲ್ಪಿಸುವ ಜತೆಗೆ ಅತ್ಯುತ್ತಮ ಸಾಹಿತಿಯೊಬ್ಬರಿಗೆ ಪ್ರಶಸ್ತಿ ನೀಡುವ ಬಗ್ಗೆಯೂ ನಿರ್ಧರಿಸಲಾಗಿದೆ. ಉತ್ಸವದಲ್ಲಿ ಸಾಹಿತ್ಯಕ್ಕೆ ಸಂಬಂಧಿಸಿ ಚರ್ಚೆಗೆ ಅವಕಾಶ ಕಲ್ಪಿಸಲಾಗುತ್ತಿದ್ದು, ಶಾಸಕರು ತಮ್ಮ ಕ್ಷೇತ್ರದ ಸರಕಾರಿ ಶಾಲಾ, ಕಾಲೇಜುಗಳಿಗೆ ಪೂರಕವಾಗಿ ತಲಾ 2ರಿಂದ 3 ಲಕ್ಷ ರೂ.ವರೆಗೆ ತಮ್ಮ ನಿಧಿಯಿಂದ ಪುಸ್ತಕ ಖರೀದಿಸಿ ಒದಗಿಸುವ ಕುರಿತಂತೆಯೂ ಕ್ರಮ ವಹಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯ ಶಾಲಾ ಕಾಲೇಜುಗಳಿಂದ ಬೇಡಿಕೆ ಪಟ್ಟಿ ಪಡೆದುಕೊಳ್ಳಲು ತಿಳಿಸಲಾಗುತ್ತಿದೆ. ಐಎಎಸ್, ಕೆಎಎಸ್ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಾದ ಪುಸ್ತಕಗಳನ್ನು ಖರೀದಿಸಿ ಶಾಸಕರು ತಮ್ಮ ಕ್ಷೇತ್ರದ ಸರಕಾರಿ ಶಾಲಾ ಕಾಲೇಜುಗಳಿಗೆ ಒದಗಿಸಬಹುದು. ಈ ಬಗ್ಗೆ ಶಾಸಕರಿಗೆ ಪತ್ರ ಬರೆಯಲಾಗಿದೆ. ಪುಸ್ತಕ ಉತ್ಸವದಲ್ಲಿ ಇತರ ಕಡೆಗಿಂತ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಪುಸ್ತಕ ಒದಗಿಸಲು ಪುಸ್ತಕ ಮಾರಾಟಗಾರರಿಗೆ ಸೂಚನೆ ನೀಡಲಾಗುತ್ತದೆ ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.

ಉತ್ಸವದ ಲೋಗೋ, ಹೆಸರು ಸೂಚನೆಗೆ ಆಹ್ವಾನ

ಈ ಉತ್ಸವಕ್ಕಾಗಿ ಈಗಾಗಲೇ ಸಂಬಂಧ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲು ತಿಳಿಸಲಾಗಿದ್ದು, ು ಸಾಹಿತಿಗಳನ್ನು ಒಳಗೊಂಡ ಸಮಿತಿಯು ಅಗತ್ಯ ಸಿದ್ಧತೆಗಳು, ಪ್ರಶಸ್ತಿಗೆ ಸಾಹಿತಿ ಆಯ್ಕೆ ಸೇರಿದಂತೆ ಉತ್ಸವದ ರೂಪುರೇಷೆಗಳನ್ನು ಸಿದ್ಧಪಡಿಸಲಿದೆ. ಇದೇ ವೇಳೆ ಸಾರ್ವಜನಿಕರಿಂದ ಉತ್ಸವಕ್ಕೆ ಲೋಗೋ ಹಾಗೂ ಹೆಸರು ಸೂಚಿಸಲು ಆಹ್ವಾನ ನೀಡಲಾಗಿದ್ದು, ಆಸಕ್ತರು secy-kla-kar@nic.in ಗೆ ಅಥವಾ 9448108789 ವಾಟ್ಸಾಪ್ ಸಂಖ್ಯೆಯ ಮೂಲಕ ಹೆಸರು, ಲೋಗೋ ಸೂಚಿಸಬಹುದು ಎಂದು ಯು.ಟಿ.ಖಾದರ್ ತಿಳಿಸಿದರು.

ವಿಧಾನ ಸೌಧದಲ್ಲಿ ಶಾಶ್ವತ ಬೆಳಕಿನ ವ್ಯವಸ್ಥೆ

ವಿಧಾನ ಸೌಧದಲ್ಲಿ ಪ್ರಮುಖ ಸರಕಾರಿ ಹಾಗೂ ಹಬ್ಬಗಳ ಸಂದರ್ಭ ತಾತ್ಕಾಲಿಕ ಲೈಟಿಂಗ್ ವ್ಯವಸ್ಥೆ ಮಾಡಲಾಗುತ್ತದೆ. ಇದಕ್ಕಾಗಿ ಲಕ್ಷಾಂತರ ರೂ. ಪ್ರತಿಬಾರಿ ಖರ್ಚು ಮಾಡಲಾಗುತ್ತದೆ. ಇದಕ್ಕೆ ಬದಲಾಗಿ ವಿಧಾನ ಸೌಧದಲ್ಲಿ ಶಾಶ್ವತ ಲೈಟಿಂಗ್ ವ್ಯವಸ್ಥೆ ಕಲ್ಪಿಸಿ, ಪ್ರತಿ ಶನಿವಾರ ಮತ್ತು ರವಿವಾರ ಹಾಗೂ ಇತರ ಪ್ರಮುಖ ದಿನಗ ಸಂದರ್ಭ ಬೆಳಕಿನ ವ್ಯವಸ್ಥೆಯ ನಿರ್ವಹಣೆ ವ್ಯವಸ್ಥೆಗೆ ಚರ್ಚಿಸಲಾಗಿದ್ದು, ಸರಕಾರ ಒಪ್ಪಿಗೆ ಸೂಚಿಸಿದೆ. ಟೆಂಡರ್ ಕರೆಯಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.

‘ವಿಧಾನ ಸೌಧದ ಆವರಣದ ಸುತ್ತ ಸಾಕಷ್ಟು ನಾಯಿಗಳು ಅಡ್ಡಾಡುತ್ತಿರುತ್ತವೆ. ಇದರಿಂದ ಕೆಲವರು ಆಕ್ಷೇಪಿಸುತ್ತಿದ್ದರೆ, ಮತ್ತೆ ಕೆಲವರು ಅವುಗಳ ಬಗ್ಗೆ ಪ್ರೀತಿ ತೋರಿಸುತ್ತಾರೆ. ಆದರೆ ಕಾರ್ಯಕ್ರಮಗಳ ಸಂದರ್ಭ, ವಾಕಿಂಗ್ ಬರುವವರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಅಂತಹ ನಾಯಿಗಳಿಗೆ ಆಹಾರ ಸೇರಿದಂತೆ ಸಮರ್ಪಕ ನಿರ್ವಹಣೆಗಾಗಿ ಸೂಕ್ತ ಜಾಗವನ್ನು ಒದಗಿಸಲು ಚಿಂತಿಸಲಾಗಿದೆ. ಇದಕ್ಕಾಗಿ ಪ್ರಾಣಿ ದಯಾ ಸಂಘದ ಮುಖ್ಯಸ್ಥರನ್ನು ಒಳಗೊಂಡ ಉನ್ನತ ಮಟ್ಟದ ಸಭೆ ಶೀಘ್ರವೇ ನಡೆಸಿ ಕ್ರಮ ವಹಿಸಲು ನಿರ್ಧರಿಸಲಾಗಿದೆ. ’

ಯು.ಟಿ.ಖಾದರ್, ಸ್ಪೀಕರ್, ವಿಧಾನಸಭೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X