Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಭ್ರೂಣ ಹತ್ಯೆ ಪ್ರಕರಣಗಳು ಅಪಮಾನಕರ,...

ಭ್ರೂಣ ಹತ್ಯೆ ಪ್ರಕರಣಗಳು ಅಪಮಾನಕರ, ಇದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ : ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ29 Nov 2023 10:30 PM IST
share
ಭ್ರೂಣ ಹತ್ಯೆ ಪ್ರಕರಣಗಳು ಅಪಮಾನಕರ, ಇದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಗಳು ನಡೆದಿರುವುದು ಅಪಮಾನಕರ. ಇದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬುಧವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಪ್ರಕರಣ ಬಯಲಿಗೆ ಬಂದ ಬೆನ್ನಲ್ಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸ್ಕ್ಯಾನಿಂಗ್ ಸೆಂಟರ್‍ ಗಳನ್ನು ಪರಿಶೀಲನೆ ಮಾಡಲು, ಆಸ್ಪತ್ರೆಗಳಲ್ಲಿ ಅಬಾರ್ಷನ್‍ಗಳು ಆಗುತ್ತಿದ್ದರೆ ಯಾವ ಕಾರಣಕ್ಕೆ ಆಗುತ್ತಿವೆ ಎಂಬ ಮಾಹಿತಿ ಸಂಗ್ರಹಿಸಲು ಸೂಚನೆ ನೀಡಲಾಗಿದೆ ಎಂದರು.

ಆಸ್ಪತ್ರೆಗಳಲ್ಲಿ ಎಷ್ಟು ಮಕ್ಕಳು ಹುಟ್ಟಿದ್ದಾರೆ. ಎಷ್ಟು ಮಂದಿ ಗರ್ಭಿಣಿ ಮಹಿಳೆಯರು ನೋಂದಣಿ ಆದ ನಂತರ ನಿರಂತರ ತಪಾಸಣೆಗೆ ಗೈರು ಹಾಜರಾಗಿದ್ದಾರೆ ಎಂದು ನಿರಂತರವಾಗಿ ಪರಿಶೀಲನೆ ಮಾಡಬೇಕು. ಅಲ್ಲದೆ, ಜಿಲ್ಲಾಮಟ್ಟದ ಅಧಿಕಾರಿಗಳು ಪ್ರತಿ ತಿಂಗಳು ಎಷ್ಟು ಸ್ಕ್ಯಾನಿಂಗ್ ಸೆಂಟರ್‍ ಗಳಿಗೆ, ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ ಎಂಬುದರ ಬಗ್ಗೆ ಪರಿಶೀಲನಾ ಸಭೆ ನಡೆಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಆರೋಗ್ಯ ಇಲಾಖೆ ಆಯುಕ್ತರು ಪ್ರತಿ ಮೂರು ತಿಂಗಳಿಗೊಮ್ಮೆ ಇಡೀ ರಾಜ್ಯದಲ್ಲಿ ನಡೆದಿರುವ ಪ್ರಗತಿ ಬಗ್ಗೆ ಹಾಗೂ ಸಚಿವರ ಅಧ್ಯಕ್ಷತೆಯ ಸಮಿತಿಯು ಪ್ರತಿ ಆರು ತಿಂಗಳಿಗೊಮ್ಮೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಎರಡು ದಿನಗಳಲ್ಲಿ ಈ ಸಂಬಂಧ ಎಸ್.ಒ.ಪಿ.ಯನ್ನು ಹೊರಡಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಮಂಡ್ಯದಲ್ಲಿ ಬೆಳಕಿಗೆ ಬಂದಿರುವ ಭ್ರೂಣ ಹತ್ಯೆಗಳ ಪ್ರಕರಣ ಕುರಿತು ಪೊಲೀಸ್ ಇಲಾಖೆ ತನಿಖೆ ಮಾಡುತ್ತಿದೆ. ಅವರೊಂದಿಗೆ ನಮ್ಮ ಇಲಾಖೆಯೂ ಕೈ ಜೋಡಿಸಿ ಕೆಲಸ ಮಾಡಿದರೆ ಇಂತಹ ಪ್ರಕರಣಗಳು ನಡೆಯದಂತೆ ತಡೆಯಲು ಸಾಧ್ಯವಾಗುತ್ತದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಮಂಡ್ಯದಲ್ಲಿ ಆಗಿರುವ ಘಟನೆಗೆ ಸಂಬಂಧಿಸಿದಂತೆ ನಮ್ಮ ಇಲಾಖೆಯ ಅಧಿಕಾರಿಗಳು ಈ ಹಿಂದೆ ಪರಿಶೀಲನೆಗೆ ಹೋಗಿದ್ದರು. ಆದರೆ, ಆ ವ್ಯಕ್ತಿ ಸಿಕ್ಕಿರಲಿಲ್ಲ. ಮಂಡ್ಯ ಜಿಲ್ಲಾ ವೈದ್ಯಾಧಿಕಾರಿಯಿಂದ ಈ ಬಗ್ಗೆ ಏನಾದರೂ ಕರ್ತವ್ಯಲೋಪ ಆಗಿದೆಯೇ ಎಂಬುದರ ಕುರಿತು ಹಿರಿಯ ಅಧಿಕಾರಿಗಳಿಂದ ವರದಿ ತರಿಸಿಕೊಳ್ಳುತ್ತೇನೆ. ಆನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಚೀನಾದಲ್ಲಿ ಮಕ್ಕಳಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ ಹಾಗೂ ಇನ್‍ಫ್ಲೊಯೆಂಜಾ ವಿಚಾರದಲ್ಲಿ ಆತಂಕ ಪಡುವ ಅಗತ್ಯವಿಲ್ಲ. ಸರಕಾರ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದೆ. ನಮ್ಮ ರಾಜ್ಯದಲ್ಲಿ ಅಂತಹ ಯಾವುದೇ ಪ್ರಕರಣ ಕಂಡು ಬಂದಿಲ್ಲ. ಈಗಾಗಲೆ, ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕೇಂದ್ರ ಸರಕಾರ ಮಾರ್ಗಸೂಚಿಗಳನ್ನು ನೀಡಿದೆ.

ಆಸ್ಪತ್ರೆಗಳಲ್ಲಿ ಆಕ್ಸಿಜನ್, ಬೆಡ್, ಮಾಸ್ಕ್, ಪಿಪಿಇ ಕಿಟ್‍ಗಳ ಲಭ್ಯತೆಯನ್ನು ಖಾತ್ರಿ ಪಡಿಸಿಕೊಳ್ಳಲಾಗುತ್ತಿದೆ. ನವೆಂಬರ್, ಡಿಸೆಂಬರ್ ಹಾಗೂ ಜನವರಿ ತಿಂಗಳಲ್ಲಿ ಶೀತಸಂಬಂಧಿತ ಪ್ರಕರಣಗಳು ಹೆಚ್ಚಾಗಿ ಕಂಡು ಬರುವುದು ಸಾಮಾನ್ಯ. ಕೆಮ್ಮು, ನೆಗಡಿ ಹೆಚ್ಚಿದ್ದರೆ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ.

-ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ

Tags

minister Dinesh Gundurao
share
ವಾರ್ತಾಭಾರತಿ
ವಾರ್ತಾಭಾರತಿ
Next Story
X