Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅರಣ್ಯ ಒತ್ತುವರಿ | ಉಪಗ್ರಹ ಆಧಾರಿತ...

ಅರಣ್ಯ ಒತ್ತುವರಿ | ಉಪಗ್ರಹ ಆಧಾರಿತ ಎಚ್ಚರಿಕೆ ವ್ಯವಸ್ಥೆ ರೂಪಿಸಲು ಈಶ್ವರ್ ಖಂಡ್ರೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ27 Jun 2024 4:56 PM IST
share
ಅರಣ್ಯ ಒತ್ತುವರಿ | ಉಪಗ್ರಹ ಆಧಾರಿತ ಎಚ್ಚರಿಕೆ ವ್ಯವಸ್ಥೆ ರೂಪಿಸಲು ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು : ರಾಜ್ಯದ ಅರಣ್ಯ ಸಂಪತ್ತಿನ ಸಂರಕ್ಷಣೆ ಮತ್ತು ಅರಣ್ಯ ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಅಗತ್ಯವಿದ್ದು, ಉಪಗ್ರಹ ಆಧಾರಿತ ಎಚ್ಚರಿಕೆ ರವಾನೆ ವ್ಯವಸ್ಥೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಅರಣ್ಯ ಭವನದಲ್ಲಿಂದು ಉನ್ನತಾಧಿಕಾರಿಗಳೊಂದಿಗೆ ನಡೆದ ಅರಣ್ಯ ಭೂಮಿ ಒತ್ತುವರಿ ತಡೆ ಮತ್ತು ವೃಕ್ಷ ಸಂರಕ್ಷಣೆ ಕುರಿತ ಮುಂದುವರಿದ ಸಭೆಯಲ್ಲಿ ಸಚಿವರು ಈ ಸೂಚನೆ ನೀಡಿದರು.

ಈಗಾಗಲೇ ಅಕ್ಷಾಂಶ ಮತ್ತು ರೇಖಾಂಶದ ಆಧಾರದ ಮೇಲೆ ಜಿಯೋ ರೆಫರೆನ್ಸ್ ಮೂಲಕ ರಾಜ್ಯದ ಅರಣ್ಯ ಪ್ರದೇಶದ ಗಡಿಗಳನ್ನು ಗುರುತಿಸಲಾಗಿದ್ದು, ಈ ದತ್ತಾಂಶವನ್ನು ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರ (KSRSAC)ಗೆ ನೀಡಿ, ಮರಗಳ ಕಡಿತಲೆ ಮತ್ತು ಭೂ ಒತ್ತುವರಿಯ ಕುರಿತಂತೆ ಸಕಾಲಿಕ (ಕಾಲಕಾಲಕ್ಕೆ) ಎಚ್ಚರಿಕೆ ನೀಡುವ ವ್ಯವಸ್ಥೆಯೊಂದನ್ನು ಆದಷ್ಟು ಶೀಘ್ರ ರೂಪಿಸಲು ಪ್ರಸ್ತಾವನೆ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡರೆ ಇಸ್ರೋದ ರಾಷ್ಟ್ರೀಯ ದೂರ ಸಂವೇದಿ ಕೇಂದ್ರ (ಎನ್.ಆರ್.ಎಸ್.ಸಿ.)ಗೆ ಮಾಹಿತಿ ಬರುತ್ತದೆ. ಅಲ್ಲಿಂದ ಭಾರತೀಯ ಅರಣ್ಯ ಸರ್ವೇಕ್ಷಣಾ ಇಲಾಖೆ (ಎನ್.ಆರ್.ಎಸ್.ಸಿ.)ಗೆ ಮಾಹಿತಿ ರವಾನೆ ಆಗಿ ತದನಂತರ ಸಂಬಂಧಿತ ಅರಣ್ಯ ವಲಯದ ಸಿಬ್ಬಂದಿಗೆ ಎಚ್ಚರಿಕೆ ಹೋಗಲು ಇರುವ ವ್ಯವಸ್ಥೆಯ ಮಾದರಿಯಲ್ಲಿಯೇ ಮರಗಳ ಅಕ್ರಮ ಕಡಿತಲೆ ಮತ್ತು ಅರಣ್ಯ ಭೂಮಿ ಒತ್ತುವರಿಗೂ ಒಂದು ಎಚ್ಚರಿಕೆ ರವಾನೆ ವ್ಯವಸ್ಥೆ ಕಲ್ಪಿಸಿ ಎಂದು ತಿಳಿಸಿದರು.

ವಲಯ ಮಟ್ಟದಲ್ಲಿ ದತ್ತಾಂಶ ಸಂಗ್ರಹಣೆಗೆ ಸೂಚನೆ:

ವಲಯ ಅರಣ್ಯಾಧಿಕಾರಿಗಳ ಮಟ್ಟದಲ್ಲಿ ಅರಣ್ಯ ಒತ್ತುವರಿಯ ಮತ್ತು ಅರಣ್ಯ ಹಕ್ಕು ಕಾಯಿದೆಯ ಅರ್ಜಿಗಳ ಕುರಿತಂತೆ ಸಂಪೂರ್ಣ ಮಾಹಿತಿಯ ದತ್ತಾಂಶವನ್ನು ಸಿದ್ಧಪಡಿಸಿ, ನ್ಯಾಯಾಲಯದಲ್ಲಿರುವ ಪ್ರಕರಣಗಳಿಗೆ ಸಕಾಲದಲ್ಲಿ ಆಕ್ಷೇಪಣೆ ಸಲ್ಲಿಸಿ ಇವುಗಳ ಇತ್ಯರ್ಥಕ್ಕೆ ಕ್ರಮವಹಿಸುವಂತೆ ಸೂಚಿಸಿದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಟ್ಟದಲ್ಲಿ ಬಾಕಿ ಇರುವ ಎಲ್ಲ 64ಎ ಪ್ರಕರಣಗಳನ್ನು ಮತ್ತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಮುಂದಿರುವ ಮೇಲ್ಮನವಿಗಳನ್ನು ಕಾಲಮಿತಿಯಲ್ಲಿ ಅಂದರೆ ಒಂದು ವರ್ಷದೊಳಗೆ ಇತ್ಯರ್ಥಪಡಿಸುವಂತೆ ಸೂಚನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X