Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರಿನ ಒತ್ತಡ ಕಡಿಮೆಗೊಳಿಸಲು ಬಿಡದಿ...

ಬೆಂಗಳೂರಿನ ಒತ್ತಡ ಕಡಿಮೆಗೊಳಿಸಲು ಬಿಡದಿ ಅಭಿವೃದ್ಧಿಗೆ ಸರಕಾರದ ಒತ್ತು : ಜಿ.ಪರಮೇಶ್ವರ್‌

ವಾರ್ತಾಭಾರತಿವಾರ್ತಾಭಾರತಿ26 Jun 2026 3:05 PM IST
share
ಬೆಂಗಳೂರಿನ ಒತ್ತಡ ಕಡಿಮೆಗೊಳಿಸಲು ಬಿಡದಿ ಅಭಿವೃದ್ಧಿಗೆ ಸರಕಾರದ ಒತ್ತು : ಜಿ.ಪರಮೇಶ್ವರ್‌

ಬೆಂಗಳೂರು : ಬೆಂಗಳೂರಿನ ಮೇಲೆ ಸಂಚಾರದಟ್ಟಣೆ ಸೇರಿದಂತೆ ಅನೇಕ ಒತ್ತಡವಿದೆ. ನೈಸ್‌ ಪ್ರಾಜೆಕ್ಟ್‌ ಮಾಡಿದ ಸಂದರ್ಭದಲ್ಲಿ 7 ಟೌನ್‌ಶಿಪ್‌ ಮಾಡಬೇಕು ಎಂದು ಪ್ರಸ್ತಾವನೆ ಬಂದಿದ್ದವು. ಇದರ ಉದ್ದೇಶ ಬೆಂಗಳೂರಿನ ಮೇಲಿರುವ ಒತ್ತಡವನ್ನು ಕಡಿಮೆಮಾಡಬೇಕು ಎನ್ನುವುದಾಗಿತ್ತು. ಪಕ್ಕದಲ್ಲಿರುವ ಕೋಲಾರ, ತುಮಕೂರು ರಾಮನಗರ ಪಟ್ಟಣವನ್ನು ಅಭಿವೃದ್ಧಿ ಮಾಡಿದರೆ ಬೆಂಗಳೂರಿನ ಮೇಲಿರುವ ಒತ್ತಡ ಕಡಿಮೆಯಾಗಲಿದೆ. ಈ ಕಾರಣಗಳಿಂದ ಬಿಡದಿ ಟೌನ್‌ಶಿಪ್‌ ಆದರೆ ಸ್ವಲ್ಪ ಸುಧಾರಿಸಬಹುದು ಎಂದು ಡಿಸಿಎಂ ಜಿ.ಪರಮೇಶ್ವರ್‌ ಹೇಳಿದರು.

ನಾವು ರೈತರನ್ನು ಒಕ್ಕಲೆಬ್ಬಿಸುವುದಿಲ್ಲ:

ಬಿಡದಿ ಟೌನ್‌ಶಿಪ್‌ ವಿಚಾರದಲ್ಲಿ ರೈತರಿಗೆ ಅನುಕೂಲವಾಗಿ ಸಿಎಂ ಅವರ ನಿರ್ಧಾರ ಬದಲಾಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಮೊದಲೇ ಹೇಳಿದಂತೆ ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ನಾವು ಮಾಡುವುದಿಲ್ಲ. ಒತ್ತಾಯಪೂರ್ವಕವಾಗಿ ರೈತರನ್ನು ತೆಗೆದು ಆಚೆ ಹಾಕಿ ನಾವು ಟೌನ್‌ಶಿಪ್‌ ಕಟ್ಟುವುದರಲ್ಲಿ ಯಾವುದೇ ಅರ್ಥವಿಲ್ಲ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ಒಪ್ಪಿಗೆಯ ಮೂಲಕ ಅವರ ಜಮೀನನ್ನು ಪಡೆದು ಟೌನ್‌ಶಿಪ್‌ ಮಾಡಲು ಈಗಾಗಲೇ ಮುಖ್ಯಮಂತ್ರಿಗಳು ಸೂಚನೆಯನ್ನು ನೀಡಿದ್ದಾರೆ. ಅವರಿಗೆ ಒಂದು ವೇಳೆ ತಮಗೆ ಕೊಡುವಂತಹ ಪರಿಹಾರ ಸಾಕಾಗುತ್ತಿಲ್ಲ ಎಂದು ಅನಿಸಿದರೆ ಅದನ್ನು ಕೂಡ ಇನ್ನು ಮುಂದೆ ಹೆಚ್ಚು ಮಾಡುವಂತಹ ಸಾಧ್ಯತೆಗಳು ಇದೆ. ಒಟ್ಟಾರೆ ಯಾವುದೇ ಗೊಂದಲ ಇಲ್ಲದೆ ಬಿಡದಿ ಟೌನ್‌ಶಿಪ್‌ ಮಾಡಬೇಕು ಎನ್ನುವುದು ನಮ್ಮ ಉದ್ದೇಶ ಎಂದರು.

ಎಐ ಹಬ್‌ಗಳಿಗೆ ಹೆಚ್ಚಿನ ನೀರಿನ ಅಗತ್ಯವಿರುವ ಹಿನ್ನೆಲೆ, ಬಿಡದಿ ಪ್ರದೇಶದ ನೀರಿನ ಲಭ್ಯತೆಯನ್ನು ಮುಂದಿನ 40 ವರ್ಷಗಳ ದೃಷ್ಟಿಯಿಂದ ಸರಕಾರ ಬಳಸಿಕೊಳ್ಳುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಎಐ ಸೆಂಟರ್‌ ಮಾಡುವುದಕ್ಕೆ ಯಾವುದೆಲ್ಲ ಮಾನದಂಡಗಳು ಇವೆ ಎಂಬುದರ ಸ್ಪಷ್ಟ ಮಾಹಿತಿ ಯಾರಿಗೂ ಗೊತ್ತಿಲ್ಲ. ಈಗ ಅದನ್ನು ನಾವು ಬೇರೆ ಬೇರೆ ಕಡೆ ಪತ್ತೆ ಮಾಡುತ್ತಿದ್ದೇವೆ. ಇದು ಎಐ ಹಬ್‌ಗಾಗಿ ಮಾಡುತ್ತಿರುವಂತದಲ್ಲ. ಬೆಂಗಳೂರಿನ ಮೇಲೆ ಸಂಚಾರದಟ್ಟಣೆ ಸೇರಿದಂತೆ ಅನೇಕ ಒತ್ತಡವಿದೆ. ನೈಸ್‌ ಪ್ರಾಜೆಕ್ಟ್‌ ಮಾಡಿದ ಸಂದರ್ಭದಲ್ಲಿ 7 ಟೌನ್‌ಶಿಪ್‌ ಮಾಡಬೇಕು ಎಂದು ಪ್ರಸ್ತಾವನೆ ಬಂದಿದ್ದವು. ಇದರ ಉದ್ದೇಶ ಬೆಂಗಳೂರಿನ ಮೇಲಿರುವ ಒತ್ತಡವನ್ನು ಕಡಿಮೆಮಾಡಬೇಕು ಎನ್ನುವುದಾಗಿತ್ತು. ಪಕ್ಕದಲ್ಲಿರುವ ಕೋಲಾರ, ತುಮಕೂರು ರಾಮನಗರ ಪಟ್ಟಣವನ್ನು ಅಭಿವೃದ್ಧಿ ಮಾಡಿದರೆ ಬೆಂಗಳೂರಿನ ಮೇಲಿರುವ ಒತ್ತಡ ಕಡಿಮೆಯಾಗಲಿದೆ ಎನ್ನುವ ಉದ್ದೇಶ. ಈ ಕಾರಣಗಳಿಂದ ಬಿಡದಿ ಟೌನ್‌ಶಿಪ್‌ ಆದರೆ ಸ್ವಲ್ಪ ಸುಧಾರಿಸಬಹುದು ಎನ್ನುವ ಆಶಾಭಾವನೆಯನ್ನು ವ್ಯಕ್ತಪಡಿಸಿದರು.

72,000 ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್‌ ಅವರು, 2.5 ಲಕ್ಷ ಹುದ್ದೆಗಳು ಖಾಲಿ ಇದೆ, ಹಂತ ಹಂತವಾಗಿ ನಾವು ಅದನ್ನು ತುಂಬುತ್ತೇವೆ ಎಂದು ಹೇಳಿದ್ದೆವು. ಅನೇಕ ಕಾರಣಗಳಿಂದ ಅದು ವಿಳಂಬವಾಯಿತು. ಒಳಮೀಸಲಾತಿ ವಿಚಾರ ಬಗೆಹರಿಯದೆ ಇದ್ದದ್ದು ಸಮಸ್ಯೆಯಾಗಿ ಪರಿಣಮಿಸಿತ್ತು. ಹೀಗಾಗಿ ಒಳಮೀಸಲಾತಿ ಕುರಿತು ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ಅವರ ಸಮಿತಿಯ ವರದಿ ಆಧಾರದ ಮೇಲೆ ಕೂಲಂಕಷವಾಗಿ ಪರಿಶೀಲನೆ ಮಾಡಿ ಒಳಮೀಸಲಾತಿ ಸಮಸ್ಯೆಯನ್ನು ಬಗೆಹರಿಸಲಾಯಿತು. ಬಳಿಕ ಬಜೆಟ್‌ನಲ್ಲಿಯೇ 56,942 ಹುದ್ದೆಗಳನ್ನು ನೇಮಕಾತಿ ಮಾಡುತ್ತೇವೆ ಎಂದು ತಿಳಿಸಿದ್ದೆವು ಎಂದರು.

ಬಳಿಕ ಅದರ ಪ್ರಕ್ರಿಯೆಗಳು ಪ್ರಾರಂಭಗೊಂಡಿದ್ದವು. 24,000 ಹುದ್ದೆಗಳಿಗೆ ಎಫ್‌ಡಿಯವರು ಕೂಡ ಅನುಮತಿಯನ್ನು ನೀಡಿದ್ದರು, ಎಲ್ಲಾ ಇಲಾಖೆಗಳಿಗೆ ನೋಟಿಫೀಕೇಷನ್‌ ಮಾಡಿ ಎಂದು ನಾವು ತಿಳಿಸಿದ್ದೆವು. ಈ ಮಧ್ಯೆ ಸರ್ಕಾರದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯಾದ ನಂತರ ಅದನ್ನು ಪುನರ್‌ ಪರಿಶೀಲನೆ ಮಾಡಿ ಈಗ 72,000 ಹುದ್ದೆಗಳನ್ನು ತುಂಬಬೇಕು ಎಂದು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ನೋಟಿಫಿಕೇಷನ್ಸ್‌ ಮಾಡಲು ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದರು.

Tags

G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X