Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾಗೇಂದ್ರರನ್ನು ಕೋರ್ಟ್ ಕೂಡಾ ದೋಷಿಯೆಂದು...

ನಾಗೇಂದ್ರರನ್ನು ಕೋರ್ಟ್ ಕೂಡಾ ದೋಷಿಯೆಂದು ತೀರ್ಪು ನೀಡಿಲ್ಲ: ಉಪಮುಖ್ಯಮಂತ್ರಿ ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ19 Aug 2026 7:29 PM IST
share
ನಾಗೇಂದ್ರರನ್ನು ಕೋರ್ಟ್ ಕೂಡಾ ದೋಷಿಯೆಂದು ತೀರ್ಪು ನೀಡಿಲ್ಲ: ಉಪಮುಖ್ಯಮಂತ್ರಿ ಪರಮೇಶ್ವರ್
"ವಿಪಕ್ಷಗಳು ಹಠಕ್ಕೆ ಬಿದ್ದು ಸದನದಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಸಂಸದೀಯ ವ್ಯವಸ್ಥೆಗೆ ಮಾಡುವ ಅಪಮಾನ"

ಬೆಂಗಳೂರು: ‘ಜಾರಿ ನಿರ್ದೇಶನಾಲಯ(ಈಡಿ) ಮತ್ತು ಕೇಂದ್ರ ತನಿಖಾ ಸಂಸ್ಥೆ(ಸಿಬಿಐ)ಗಳು ತಮ್ಮ ಛಾರ್ಜ್‍ಶೀಟ್‍ಗಳಲ್ಲಿ ಬಿ.ನಾಗೇಂದ್ರ ಹೆಸರನ್ನು ಸೇರಿಸಿದ್ದರೂ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳದಂತೆ ಕೋರ್ಟ್ ನಿರ್ದೇಶನ ನೀಡಿದೆ. ನಾಗೇಂದ್ರರನ್ನು ಯಾವ ಕೋರ್ಟ್ ದೋಷಿಯೆಂದು ತೀರ್ಪು ನೀಡಿರುವುದಿಲ್ಲ. ಹೀಗಾಗಿ ವಿಪಕ್ಷಗಳು ಹಠಕ್ಕೆ ಬಿದ್ದು ಸದನದಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಸಂಸದೀಯ ವ್ಯವಸ್ಥೆಗೆ ಮಾಡುವ ಅಪಮಾನ’ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.

ಬುಧವಾರ ಉಭಯ ಸದನಗಳಲ್ಲಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಸರಕಾರದ ಪರವಾಗಿ ಸ್ವಯಂ ಪ್ರೇರಿತ ಹೇಳಿಕೆ ನೀಡಿದ ಪರಮೇಶ್ವರ್, ಪ್ರತಿಪಕ್ಷಗಳು ತಮ್ಮ ಹೋರಾಟವನ್ನು ಕೈಬಿಟ್ಟು ರಾಜ್ಯದಲ್ಲಿ ಬರ ಪರಿಸ್ಥಿತಿ ಸೇರಿದಂತೆ ಇನ್ನಿತರ ಗಂಭೀರ ವಿಚಾರಗಳ ಚರ್ಚೆಗೆ ಅವಕಾಶ ನೀಡಬೇಕು. ವಾಲ್ಮೀನಿ ನಿಗಮದ ಅಕ್ರಮಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಕೂಟ ರಚಿಸಿಕೊಂಡು 84.63ಕೋಟಿ ರೂ.ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಹಣದಲ್ಲಿ ಈಗಾಗಲೆ 79.68 ಕೋಟಿ ರೂ.ಗಳಷ್ಟು ಹಣ ಹಾಗೂ ವಸ್ತುಗಳನ್ನು ವಸೂಲಿ ಮಾಡಲಾಗಿರುತ್ತದೆ. ಬಾಕಿ ಉಳಿದ ಹಣವನ್ನೂ ವಶ ಪಡಿಸಿಕೊಳ್ಳುವ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದರು.

ನಾಗೇಂದ್ರ ವಿರುದ್ಧ ವಿಪಕ್ಷಗಳು ಸಲ್ಲದ ಆರೋಪ ಮಾಡುತ್ತಾ ಸುಗಮವಾಗಿ ಕಲಾಪ ನಡೆಯಲು ಅಡ್ಡಿ ಪಡಿಸುತ್ತಿದ್ದಾರೆ. ಜನರ ತೆರಿಗೆ ಹಣದಲ್ಲಿ ನಾವು ಕಲಾಪ ನಡೆಸುತ್ತಿದ್ದೇವೆ. ಇಲ್ಲಿ ಜನರ ಆಶೋತ್ತರಗಳನ್ನು ಪ್ರತಿಬಿಂಬಿಸಬೇಕು. ರಾಜಕೀಯ ಕಾರಣಗಳಿಗಾಗಿ ಕಲಾಪಕ್ಕೆ ಅಡ್ಡಿ ಮಾಡುವುದು ಜನರಿಗೆ ಹಾಗೂ ಸಂವಿಧಾನಕ್ಕೆ ಅಪಚಾರ. ಹೀಗಾಗಿ ವಿಪಕ್ಷ ಸದಸ್ಯರು ಸದನದ ಕಲಾಪಕ್ಕೆ ಅಡ್ಡಿಪಡಿಸದೆ ಸಾಂವಿಧಾನಿಕ ಪ್ರಜಾತಂತ್ರ ವಿಧಾನಗಳನ್ನು ಅನುಸರಿಸಿ ಚರ್ಚೆ ಮಾಡುವುದರ ಮೂಲಕ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕೆಂದು ಅವರು ಕೋರಿದರು.

ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿರುವ ಅಫಿಡವಿಟ್‍ನಲ್ಲಿ ತಿಳಿಸಿರುವಂತೆ ದೇಶದ 4,192 ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳ ಮೇಲೆ ಕ್ರಿಮಿನಲ್ ಪ್ರಕರಣಗಳು ಬಾಕಿಯಿರುತ್ತವೆ. ಆ ಪೈಕಿ 251 ಹಾಲಿ ಸಂಸದರು(170 ಜನರ ಮೇಲೆ ಅತ್ಯಂತ ಗಂಭೀರ ಸ್ವರೂಪದ ಕ್ರಿಮಿನಲ್ ಪ್ರಕರಣಗಳಿವೆ) ಹಾಗೂ 75 ರಾಜ್ಯಸಭಾ ಸದಸ್ಯರ ಮೇಲೆ ಕ್ರಿಮಿನಲ್ ಪ್ರಕರಣಗಳು ಚಾಲ್ತಿಯಲ್ಲಿವೆ. ದೇಶದ 14 ಮಂದಿ ಸಿಎಂಗಳ ಮೇಲೆಯೂ ಕ್ರಿಮಿನಲ್ ಪ್ರಕರಣಗಳು ಚಾಲ್ತಿಯಲ್ಲಿವೆ ಎಂದು ಅವರು ಉಲ್ಲೇಖಿಸಿದರು.

ನಾಗೇಂದ್ರರನ್ನು ಸಿಬಿಐ ವಿಶೆಷ ತನಿಖಾ ತಂಡವೂ ಆರೋಪಿಯನ್ನಾಗಿ ಎಲ್ಲೂ ಹೆಸರಿಸಿಲ್ಲ. 2024ರ ಸೆಪ್ಟಂಬರ್ 9ರಂದು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಈ.ಡಿ ಸಲ್ಲಿಸಿದ 25 ಆರೋಪಿಗಳಲ್ಲಿ ಬಿ.ನಾಗೇಂದ್ರರನ್ನು ಎ-1 ಎಂದು ಹೆಸರಿಸಿದೆ. ಆದರೆ, 2024ರ ಅಕ್ಟೋಬರ್ 14ರಂದು ಈ.ಡಿ ಪ್ರಕರಣದಲ್ಲಿ ಕೋರ್ಟ್ ಬಿ.ನಾಗೇಂದ್ರರಿಗೆ ಜಾಮೀನು ಮಂಜೂರು ಮಾಡಿದೆ ಎಂದು ಅವರು ಮಾಹಿತಿ ನೀಡಿದರು.

Tags

G. ParameshwaraB.Nagendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X