Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇಸ್ರೇಲ್ ವಿರುದ್ಧ ಪ್ರತಿಭಟನೆಗೆ ಅವಕಾಶ...

ಇಸ್ರೇಲ್ ವಿರುದ್ಧ ಪ್ರತಿಭಟನೆಗೆ ಅವಕಾಶ ನೀಡದ ಕರ್ನಾಟಕ ಸರಕಾರ ಪ್ರಜಾಪ್ರಭುತ್ವವನ್ನು ಅಪಾಯದಲ್ಲಿಟ್ಟಿದೆ: PUCL ಖಂಡನೆ

ವಾರ್ತಾಭಾರತಿವಾರ್ತಾಭಾರತಿ7 Nov 2023 9:43 PM IST
share
ಇಸ್ರೇಲ್ ವಿರುದ್ಧ ಪ್ರತಿಭಟನೆಗೆ ಅವಕಾಶ ನೀಡದ ಕರ್ನಾಟಕ ಸರಕಾರ ಪ್ರಜಾಪ್ರಭುತ್ವವನ್ನು ಅಪಾಯದಲ್ಲಿಟ್ಟಿದೆ: PUCL ಖಂಡನೆ

ಬೆಂಗಳೂರು, ನ.7: ''ಇಸ್ರೇಲ್ ಉದ್ದೇಶ ಪೂರ್ವಕವಾಗಿ ನಾಗರಿಕರನ್ನು, ಫೆಲೆಸ್ತೀನ್‍ನ ಜನಸಾಮಾನ್ಯರನ್ನು ಗುರಿಮಾಡಿ ಕೊಂದಿದೆ. ಇದು ಇಸ್ರೇಲ್ ನಡೆಸುತ್ತಿರುವ ಜನಾಂಗೀಯ ನರಮೇಧ'' ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್(ಪಿಯುಸಿಎಲ್) ರಾಜ್ಯಾಧ್ಯಕ್ಷ ಅರವಿಂದ್ ನಾರಾಯಣ್ ಆರೋಪಿಸಿದ್ದಾರೆ.

ಮಂಗಳವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂತರ್ ರಾಷ್ಟ್ರೀಯ ಕಾನೂನು ಜನಸಾಮಾನ್ಯರಿಗೂ ಹಾಗು ಯುದ್ಧ ಮಾಡುವವರಿಗೆ ಪ್ರತ್ಯೇಕವಾಗಿ ನೋಡುತ್ತದೆ. ಇಸ್ರೆಲ್ ಯುದ್ಧ ಸಂಬಂಧಪಟ್ಟಂತೆ ಇರುವ ಹಲವು ಅಂತರ್ ರಾಷ್ಟ್ರೀಯ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ಸ್ಪಷ್ಟಪಡಿಸಿದರು.

ಲೇಖಕ, ರಾಜಕೀಯ ವಿಶ್ಲೇಷಕ ಆಕರ್ ಪಟೇಲ್ ಮಾತನಾಡಿ, ''ನಾನು ಪ್ರಧಾನ ಮಂತ್ರಿಯವರನ್ನು ಒಂದೇ ಒಂದು ಪ್ರಶ್ನೆ ಕೇಳುತ್ತೇನೆ. ಗಾಝಾದಲ್ಲಿ ಇಸ್ರೇಲ್-ಹಮಾಸ್ ನಡುವೆ ತಕ್ಷಣವೇ ಮಾನವೀಯ ಕದನ ವಿರಾಮ ಜಾರಿಯಾಗಬೇಕೆಂಬ ವಿಶ್ವಸಂಸ್ಥೆಯ ಸಾಮಾನ್ಯಸಭೆಯ ನಿರ್ಣಯದ ಮೇಲಿನ ಮತದಾನಕ್ಕೆ ಭಾರತವು ಗೈರಾಗಿದ್ದು, ಮತ ಹಾಕದೆ ಏಕೆ ವಿಶ್ವಗುರು ಎಂದು ತಮಗೆ ತಾವೇ ಹೇಳಿಕೊಳ್ಳುತ್ತೀರಿ. ನಮ್ಮ ಅಕ್ಕ ಪಕ್ಕದ ದೇಶಗಳೆಲ್ಲ ಈ ವಿಷಯದ ಬಗ್ಗೆ ಮತ ಹಾಕಿದ್ದರು. ಇನ್ನು ಪ್ರತಿಭಟನೆ ಮಾಡುವುದು ನಮ್ಮ ಮೂಲಭೂತ ಹಕ್ಕಾಗಿದ್ದು, ಕರ್ನಾಟಕ ಸರಕಾರ ಪ್ರತಿಭಟನೆಗೆ ಅವಕಾಶ ನೀಡದೆ ಪ್ರಜಾಪ್ರಭುತ್ವವನ್ನು ಅಪಾಯದಲ್ಲಿಟ್ಟಿದೆ'' ಎಂದು ಹೇಳಿದರು.

ಎಐಸಿಸಿಟಿಯುನ ರಾಷ್ಟ್ರೀಯ ಕಾರ್ಯದರ್ಶಿ ಕ್ಲಿಫ್ಟನ್ ಡಿ. ರೊಜಾರಿಯೋ ಮಾತನಾಡಿ, ಇಸ್ರೆಲ್ ಯುದ್ದದಲ್ಲಿ ಒಂದೇ ತಿಂಗಳಿನಲ್ಲಿ 4 ಸಾವಿರ ಮಕ್ಕಳು ಸೇರಿ 10 ಸಾವಿರ ಜನರನ್ನು ಕೊಲ್ಲಲಾಗಿದೆ. ಬೆಂಗಳೂರಿಗಿಂತ ಚಿಕ್ಕದಾಗಿರುವ ಗಾಝಾ ಮೇಲೆ ಇಸ್ರೇಲ್ 30 ದಿವಸಗಳಿಂದ ಬಾಂಬ್ ದಾಳಿ ನಡೆಸುತ್ತಿದೆ. ಇನ್ನು ನಾವು ಕಣ್ಣು ಮುಚ್ಚಿ ಕೂರಲು ಸಾಧ್ಯವಿಲ್ಲ ಎಂದರು.

ಕರ್ನಾಟಕ ಜನಶಕ್ತಿಯ ಗೌರಿ ಮಾತನಾಡಿ, ಇಸ್ರೇಲ್ ಸತತವಾಗಿ ಫೆಲೆಸ್ತೀನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಖಂಡಿಸುತ್ತೇವೆ. ಇದು ಯುದ್ಧವಲ್ಲ. ಬದಲಿಗೆ ಒಂದು ಜನಾಂಗದ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯಾಗಿದೆ. ಇದರ ಬಗ್ಗೆ ಪ್ರತಿಭಟಿಸುತ್ತಿರುವವರ ಮೇಲೆ ಕರ್ನಾಟಕ ಸರಕಾರ ಎಫ್‍ಐಆರ್ ಗಳನ್ನೂ ದಾಖಲಿಸುತ್ತಿರುವುದು ಖಂಡನೀಯ. ನಾವು ಇಂದು ಫೆಲೆಸ್ತೀನ್ ಜನರ ಪರವಾಗಿ ನಿಂತುಕೊಳ್ಳುವದು ಅಗತ್ಯ ಎಂದರು.

ಹೋರಾಟಗಾರ್ತಿ ನಿಷ್ಕಲ ಮಾತನಾಡಿ, ಇಸ್ರೇಲ್ 36 ಪತ್ರಕರ್ತರನ್ನು ಕೊಂದಿದೆ. ಗಾಝಾದಲ್ಲಿ ಇದ್ದ ಏಕೈಕ ಕ್ಯಾನ್ಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದೆ. ಇಸ್ರೇಲ್ ನಡೆಸುತ್ತಿರುವ ಜನಾಂಗೀಯ ನರಮೇಧವನ್ನು ನಾವು ಖಂಡಿಸುತ್ತೇವೆ ಎಂದರು.

ಸಾಲಿಡಾರಿಟಿ ಮೂವ್‍ಮೆಂಟ್ ಅಧ್ಯಕ್ಷ ಲಬೀದ್ ಶಾಫಿ ಮಾತನಾಡಿ, ಇದು ಯುದ್ಧವಲ್ಲ, ಬದಲಿಗೆ ಒಂದು ದೇಶದ ಸರಕಾರ ಇಡೀ ಜನಾಂಗದ ಮೇಲೆ ಮಾಡುತ್ತಿರುವ ದಾಳಿಯಾಗಿದೆ. ಈ ಸಮಯದಲ್ಲಿ ನಾವು ಫೆಲೆಸ್ತೀನ್ ಪರ ನಿಲ್ಲಬೇಕಾಗಿದೆ. ಆದರೆ ಇಲ್ಲಿನ ರಾಜ್ಯ ಸರಕಾರ ನಮ್ಮ ಸಾಂವಿಧಾನಿಕ ಹಕ್ಕುಗಳ ಮೇಲೆ ದಾಳಿ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವಿಧಾರ್ಥಿಗಳು ಈ ವಿಷಯವಾಗಿ ಚಲನಚಿತ್ರ ಪ್ರದರ್ಶನಗಳನ್ನೂ ಮಾಡಲು ಬಿಡುತ್ತಿಲ್ಲ. ಕರಪತ್ರ ಹಂಚುವವರ ಮೇಲೆ ಎಫ್‍ಐಆರ್ ದಾಖಲಿಸುತ್ತಿದೆ. ತುಮಕೂರಿನಲ್ಲಿ ಪ್ರತಿಭಟನೆಗೆ ಅನುಮತಿ ನೀಡಿ ನಂತರ ಪ್ರತಿಭಟನಾಕಾರರ ಮೇಲೆ ಎಫ್‍ಐಆರ್ ದಾಖಲಿಸುತ್ತಿದೆ. ಒಂದು ಕಡೆ ಸೋನಿಯಾ ಗಾಂಧಿ ಈ ವಿಷಯವಾಗಿ ಸಂಪಾದಿಕೀಯ ಬರವಣಿಗೆ ಮಾಡುತ್ತಾರೆ. ಇನ್ನೊಂದು ಕಡೆ ಇಲ್ಲಿ ಅವರ ಸರಕಾರ ಪ್ರತಿಭಟನೆಯ ಹಕ್ಕನ್ನೇ ಕಸೆದುಕೊಳ್ಳುತ್ತಿದೆ ಎಂದು ಅವರು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X