Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಾಗತಿಕ ಹೂಡಿಕೆದಾರರ ಸಮಾವೇಶ : ಸಚಿವ...

ಜಾಗತಿಕ ಹೂಡಿಕೆದಾರರ ಸಮಾವೇಶ : ಸಚಿವ ಎಂ.ಬಿ.ಪಾಟೀಲ್ ಯೂರೋಪ್ ಪ್ರವಾಸ

ಸ್ಮಿತ್ ಗ್ರೂಪ್, ಆಲ್ಕೋಬೇವ್ ವಲಯದ ಕಂಪನಿಗಳೊಂದಿಗೆ ಮೊದಲ ದಿನದ ಮಾತುಕತೆ

ವಾರ್ತಾಭಾರತಿವಾರ್ತಾಭಾರತಿ28 Nov 2024 11:25 PM IST
share
ಜಾಗತಿಕ ಹೂಡಿಕೆದಾರರ ಸಮಾವೇಶ : ಸಚಿವ ಎಂ.ಬಿ.ಪಾಟೀಲ್ ಯೂರೋಪ್ ಪ್ರವಾಸ

ಲಂಡನ್ : ಮುಂಬರುವ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ 15 ದಿನಗಳ ಯೂರೋಪ್ ಪ್ರವಾಸ ಕೈಗೊಂಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮೊದಲ ದಿನವಾದ ಗುರುವಾರ ಸ್ಮಿತ್ ಗ್ರೂಪ್ ಜತೆ ಬಂಡವಾಳ ಹೂಡಿಕೆ ಕುರಿತು ಲಂಡನ್ ನಲ್ಲಿ ಮಾತುಕತೆ ನಡೆಸಿದ್ದಾರೆ. ಜತೆಗೆ ಆಲ್ಕೋಬೇವ್ (ಮದ್ಯ ತಯಾರಿಕೆ) ವಲಯದ ಕಂಪನಿಗಳ ಜತೆಯೂ ಅವರು ದುಂಡುಮೇಜಿನ ಸಭೆ ನಡೆಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಸ್ಮಿತ್ ಗ್ರೂಪ್ ಕರ್ನಾಟಕದಲ್ಲಿ ದೀರ್ಘಾವಧಿ ಹೂಡಿಕೆ ಮಾಡಲು ಮತ್ತು ತನ್ನ ಉತ್ಪಾದನಾ ಚಟುವಟಿಕೆಗಳನ್ನು ವಿಸ್ತರಿಸಲು ಒಲವು ವ್ಯಕ್ತಪಡಿಸಿದೆ ಎಂದು ತಿಳಿಸಿದ್ದಾರೆ.

ಏರೋಸ್ಪೇಸ್ ಮತ್ತು ರಕ್ಷಣಾ ವಲಯ ಸೇರಿದಂತೆ ಹಲವು ವಲಯಗಳಲ್ಲಿ ಸಕ್ರಿಯವಾಗಿರುವ ಸ್ಮಿತ್ ಗ್ರೂಪ್, ತನ್ನ ವೆಟ್ ಸೀಲ್ ಜೋಡಣೆ ಚಟುವಟಿಕೆಗಳನ್ನು ಥಾಯ್ಲೆಂಡಿನಿಂದ ಬೆಂಗಳೂರಿಗೆ ಸ್ಥಳಾಂತರಿಸಲು ತೀರ್ಮಾನಿಸಿದೆ. ಅದು ಬೆಂಗಳೂರಿನಲ್ಲಿ ಈಗಾಗಲೇ 600 ಉದ್ಯೋಗಿಗಳನ್ನು ಹೊಂದಿದೆ. ಜತೆಗೆ ಕಂಪನಿಯು ತನ್ನ ಹೂಡಿಕೆ ಯೋಜನೆಗೆ ಬೆಂಗಳೂರನ್ನು ಸೂಕ್ತ ತಾಣವೆಂದು ಪುನರುಚ್ಚರಿಸಿದ್ದು, ಹೆಚ್ಚುವರಿ ಬಂಡವಾಳ ತೊಡಗಿಸಲಿದೆ ಎಂದು ಅವರು ಹೇಳಿದ್ದಾರೆ.

ಸ್ಮಿತ್ ಗ್ರೂಪ್ ಕಂಪನಿಯು ಏರೋಸ್ಪೇಸ್ ಮತ್ತು ರಕ್ಷಣಾ ವಲಯದಲ್ಲಿ ಬೆಂಗಳೂರಿನಲ್ಲಿ ಗ್ರಾಹಕರನ್ನು ಹೊಂದಿದೆ. ತಾನು ಯೂರೋಪ್ ಮತ್ತು ಅಮೆರಿಕದಲ್ಲಿ ನಡೆಸುತ್ತಿರುವ ಟೈಟ್ ಫ್ಲೆಕ್ಸ್ ಕಾರ್ಯಾಚರಣೆಗಳ ಸ್ವಲ್ಪ ಭಾಗವನ್ನು ಬೆಂಗಳೂರಿಗೆ ವರ್ಗಾಯಿಸಲಿದ್ದು, ಇದಕ್ಕೆ ಅಗತ್ಯವಿರುವ ಬಂಡವಾಳವನ್ನು ಹೂಡಲಿದೆ. ಇದರಿಂದಾಗಿ ರಾಜ್ಯದಲ್ಲಿ ಈ ವಲಯದ ಉತ್ಪಾದನೆ ಹೆಚ್ಚಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಮಾತುಕತೆಯಲ್ಲಿ ಸ್ಮಿತ್ ಗ್ರೂಪ್ನ ಉನ್ನತಾಧಿಕಾರಿ ಶ್ರೀಮತಿ ಕಿಣಿ ಪದ್ಮನಾಥನ್ ಉಪಸ್ಥಿತರಿದ್ದರು.

ಆಲ್ಕೋಬೇವ್ ಕಂಪನಿಗಳೊಂದಿಗೆ ನಡೆಸಿದ ಮಾತುಕತೆಯಲ್ಲಿ ಡಯಾಜಿಯೋ, ಪೆರ್ನಾಡ್ ರಿಕಾರ್ಡ್ ಮತ್ತು ಬಕಾರ್ಡಿ ಕಂಪನಿಯ ಪ್ರತಿನಿಧಿಗಳು ಮತ್ತು ಯುಕೆಐಬಿಸಿ ಹಾಗೂ ಬ್ರಿಟಿಷ್ ಡೆಪ್ಯುಟಿ ಹೈಕಮಿಷನ್ ಕಚೇರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕಂಪನಿಗಳು ಭಾರತದ ತಮ್ಮ ಕಾರ್ಯ ಚಟುವಟಿಕೆಗಳಿಗೆ ಕರ್ನಾಟಕವು ಪ್ರಮುಖ ರಾಜ್ಯವಾಗಿದ್ದು, ಇಲ್ಲಿಯ ಗ್ರಾಹಕ ನೆಲೆ ಮತ್ತು ಉದ್ಯಮ ಕಾರ್ಯ ಪರಿಸರ ಅತ್ಯುತ್ತಮವಾಗಿದೆ ಎಂದು ಮೆಚ್ಚುಗೆ ಸೂಚಿಸಿದವು. ಜತೆಗೆ ರಾಜ್ಯವು ಇತ್ತೀಚೆಗೆ ಕೈಗೊಂಡಿರುವ ತೆರಿಗೆ ಸುಧಾರಣೆಯು ಆಲ್ಕೋಬೇವ್ ವಲಯಕ್ಕೆ ಉಪಯುಕ್ತವಾಗಿದ್ದು, ಸುಗಮ ವಹಿವಾಟು ಸಂಸ್ಕೃತಿಯನ್ನು ವಿಸ್ತರಿಸುವಂತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿವೆ ಎಂದು ಪಾಟೀಲ್ ತಿಳಿಸಿದ್ದಾರೆ.

ಆಲ್ಕೋಬೇವ್ ಕಂಪನಿಗಳು ರಾಜ್ಯದಲ್ಲಿ ದೀರ್ಘಾವಧಿ ಹೂಡಿಕೆಗೆ ಮತ್ತು ಉತ್ಪಾದನೆ ವಿಸ್ತರಣೆಗೆ ತಮ್ಮ ಬದ್ಧತೆ ವ್ಯಕ್ತಪಡಿಸಿವೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಈ ವಲಯವು ಮತ್ತಷ್ಟು ಬೆಳವಣಿಗೆ ಸಾಧಿಸುವುದು ನಿಚ್ಚಳವಾಗಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಯೂರೋಪಿಗೆ ತೆರಳಿರುವ ರಾಜ್ಯ ಸರಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಮುಂತಾದವರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X