Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ...

ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ26 July 2023 12:47 PM IST
share
ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜುಲೈ 26: ರಾಜ್ಯ ಸರ್ಕಾರ ಸಂವಿಧಾನದ ಆಶಯಗಳಿಗೆ ತಕ್ಕಂತೆ ಆದಿವಾಸಿ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಈ ಕುರಿತು ಯಾವುದೇ ಆತಂಕ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ನ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ನಿಯೋಗದ ಮುಖಂಡರು ಏಕರೂಪ ನಾಗರಿಕ ಸಂಹಿತೆ ಜಾರಿಯಿಂದ ಮುಸ್ಲಿಮರು, ಆದಿವಾಸಿ, ಬುಡಕಟ್ಟು ಹಾಗೂ ಇನ್ನಿತರೆ ಅಲ್ಪಸಂಖ್ಯಾತ ಹಕ್ಕುಗಳಿಗೆ, ಕಾನೂನಿಗೆ ಧಕ್ಕೆಯಾಗುವ ಕುರಿತು ಆತಂಕ ವ್ಯಕ್ತಪಡಿಸಿದರು.

ಹಿಂದಿನ ಕಾನೂನು ಆಯೋಗವು ವೈವಿಧ್ಯತೆ ಇರುವ ಈ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಅನುಷ್ಠಾನ ಕಾರ್ಯಸಾಧುವಲ್ಲ ಎಂದು ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಇದೀಗ ಮತ್ತೆ ಈ ಕುರಿತು ಪರಿಶೀಲಿಸುವಂತೆ ಪ್ರಸಕ್ತ ಕಾನೂನು ಆಯೋಗಕ್ಕೆ ಕೇಂದ್ರ ಸರ್ಕಾರ ತಿಳಿಸಿದೆ. ಅದರಂತೆ ಕಾನೂನು ಆಯೋಗವು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ತಮ್ಮ ಬೋರ್ಡ್‌ನ ವತಿಯಿಂದ ಏಕರೂಪ ನಾಗರಿಕ ಸಂಹಿತೆ ಜಾರಿ ವಿರೋಧಿಸಿ ಒಂದು ಕೋಟಿಗೂ ಹೆಚ್ಚು ಸಹಿ ಸಂಗ್ರಹ ಮಾಡಿ ಕಾನೂನು ಆಯೋಗಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಏಕರೂಪ ನಾಗರಿಕ ಸಂಹಿತೆಯ ಕರಡು ಪ್ರಕಟವಾದ ನಂತರ ಪರಿಶೀಲಿಸಿ ಪ್ರತಿಕ್ರಿಯಿಸಲಾಗುವುದು. ಅಲ್ಪಸಂಖ್ಯಾತರ ಹಕ್ಕುಗಳ ದಮನಕ್ಕೆ ತಮ್ಮ ಸರ್ಕಾರ ಎಂದಿಗೂ ಅವಕಾಶ ನೀಡದು. ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅನಗತ್ಯ ವಿವಾದ ಸೃಷ್ಟಿಸುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಿಯೋಗದ ಸದಸ್ಯರು ವಕ್ಫ್‌ ಆಸ್ತಿಗಳ ರಕ್ಷಣೆ ಮಾಡುವಂತೆಯೂ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಭೆಯಲ್ಲಿ ಮಾಜಿ ಉಪಾಧ್ಯಕ್ಷ ಕೆ. ರೆಹಮಾನ್‌ ಖಾನ್‌, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್. ಜಮೀರ್‌ ಅಹ್ಮದ್‌ ಖಾನ್‌, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್‌, ಶಾಸಕ ರಿಜ್ವಾನ್‌ ಅರ್ಷದ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಝೀರ್‌ ಅಹ್ಮದ್‌, ಮೌಲಾನಾ ಸೈಯದ್‌ ಮುಸ್ತಫಾ ರಫಾಯಿ ನದ್ವಿ, ಮೌಲಾನಾ ಸೈಯದ್‌ ಮುಹಮ್ಮದ್‌ ತನ್ವೀರ್‌ ಹಶ್ಮಿ, ಮೌಲಾನಾ ಶಬೀರ್‌ ಅಹ್ಮದ್‌ ಹುಸೈನಿ ನದ್ವಿ, ಮುಫ್ತಿ ಇಫ್ತಿಕಾರ್‌ ಅಹ್ಮದ್‌ ಕಾಸ್ಮಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X