Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಳೆಯಿಂದ ಅಪಾರ ಹಾನಿ; ರಾಜ್ಯ ಸರಕಾರ...

ಮಳೆಯಿಂದ ಅಪಾರ ಹಾನಿ; ರಾಜ್ಯ ಸರಕಾರ 5,000 ಕೋಟಿ ರೂ. ಬಿಡುಗಡೆ ಮಾಡಲಿ: ಆರ್. ಅಶೋಕ್

ವಾರ್ತಾಭಾರತಿವಾರ್ತಾಭಾರತಿ21 Oct 2024 10:57 PM IST
share
ಮಳೆಯಿಂದ ಅಪಾರ ಹಾನಿ; ರಾಜ್ಯ ಸರಕಾರ 5,000 ಕೋಟಿ ರೂ. ಬಿಡುಗಡೆ ಮಾಡಲಿ: ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ ಉಂಟಾಗಿದ್ದು, ರಾಜ್ಯ ಸರಕಾರ ಸಭೆ ಕರೆದು 5ಸಾವಿರ ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಲಿ. ಜೊತೆಗೆ ಬೆಂಗಳೂರಿನಲ್ಲಿ ಪರಿಹಾರ ಕಾರ್ಯಾಚರಣೆಗೆ 1ಸಾವಿರ ಕೋಟಿ ರೂ.ಬಿಡುಗಡೆ ಮಾಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಸೋಮವಾರ ಬೆಂಗಳೂರಿನ ಸಿಲ್ಕ್ ಬೋರ್ಡ್ ವೃತ್ತದ ಬಳಿ ಮಳೆ ಹಾನಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯ ಸರಕಾರದಲ್ಲಿ ಹಣದ ಕೊರತೆ ಇದೆ. ಮಲೆನಾಡಿನಲ್ಲಿ ಕಾಫಿ ಉದುರುತ್ತಿದೆ, ಭತ್ತದ ಬೆಳೆ ನೀರಿನಲ್ಲಿ ಮುಳುಗಿದೆ, ಈರುಳ್ಳಿ ಕೊಳೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಕುಂಭಕರ್ಣನಂತೆ ನಿದ್ದೆ ಮಾಡುವುದನ್ನು ಬಿಟ್ಟು ಎಲ್ಲ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಯಾವ ರೀತಿ ಅನಾಹುತವಾಗಿದೆ ಎಂದು ಪರಿಶೀಲಿಸಬೇಕು ಎಂದರು.

ಒಂದು ತಿಂಗಳಿಂದ ಪ್ರವಾಹ ಸಂಬಂಧದ ಸಭೆಯೇ ನಡೆದಿಲ್ಲ. ಸರಕಾರ ಕೂಡಲೇ ಸಭೆ ಕರೆದು ಕನಿಷ್ಠ 5ಸಾವಿರ ಕೋಟಿ ರೂ.ಬಿಡುಗಡೆ ಮಾಡಬೇಕು. ಬೆಂಗಳೂರಿಗೆ ವಿಶೇಷವಾಗಿ 1ಸಾವಿರ ಕೋಟಿ ರೂ. ಬಿಡುಗಡೆ ಮಾಡಲಿ. 16 ತಿಂಗಳ ಕಾಂಗ್ರೆಸ್ ಸರಕಾರದ ಪಾಪದ ಫಲವನ್ನು ಬೆಂಗಳೂರಿನ ಜನರು ಅನುಭವಿಸಬೇಕಾಗಿದೆ. ರಾಜಕಾಲುವೆಯ ಹೂಳು ತೆಗೆದು ಸ್ವಚ್ಛ ಮಾಡುವ ಕೆಲಸವನ್ನು ಮಾಡಿಲ್ಲ. ಇದರಿಂದಾಗಿ ತೇಲುತ್ತಿರುವ ಬೆಂಗಳೂರು ಎಂಬ ಅಪಖ್ಯಾತಿ ನಗರಕ್ಕೆ ಬಂದಿದೆ ಎಂದು ದೂರಿದರು.

ಬೆಂಗಳೂರಿನಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದೆ. ಖಜಾನೆ ಖಾಲಿಯಾಗಿದೆ ಎಂದು ನಮಗೂ ಗೊತ್ತಿದೆ. ಆದ್ದರಿಂದ ಕನಿಷ್ಠ 500 ಕೋಟಿ ರೂ.ಹಣವಾದರೂ ಬಿಡುಗಡೆ ಮಾಡಲಿ. ಇಲ್ಲವೆಂದರೆ ಗುತ್ತಿಗೆದಾರರು ಮುಂದೆ ಬರುವುದಿಲ್ಲ. ಇದರ ಜೊತೆಗೆ ಕಸದ ಸಮಸ್ಯೆಯೂ ಸೃಷ್ಟಿಯಾಗಿದೆ. ಮಾನ್ಯತಾ ಟೆಕ್‍ಪಾರ್ಕ್ ಈಗ ಮುಳುಗಡೆ ಪಾರ್ಕ್ ಆಗಿಬಿಟ್ಟಿದೆ. ಸಿಲ್ಕ್‍ಬೋರ್ಡ್‍ನಲ್ಲಿ ದಿನವೂ ಪ್ರವಾಹ ಉಂಟಾಗುತ್ತಿದೆ. ಪ್ರತಿ 15 ದಿನಕ್ಕೊಮ್ಮೆ ಪರಿಶೀಲನೆ ಮಾಡುತ್ತೇನೆ ಎಂದು ಸಿಎಂ ಹೇಳಿದ್ದರು. ಆದರೆ, 6 ತಿಂಗಳಾದರೂ ಏನೂ ಮಾಡಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾತ್ರಿ ಪರಿಶೀಲನೆ ಮಾಡಿದ್ದು, ಅವರಿಗೆ ಯಾವುದೇ ಸಮಸ್ಯೆ ಕಂಡಿಲ್ಲ ಎಂದು ದೂರಿದರು.

Tags

R. Ashok
share
ವಾರ್ತಾಭಾರತಿ
ವಾರ್ತಾಭಾರತಿ
Next Story
X