Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ...

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲ; ಪುನರ್ ಪರಿಶೀಲನೆ ಮಾಡಬೇಕು ಎಂದ ಡಿ.ಕೆ ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ31 Jan 2024 3:06 PM IST
share
ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲ; ಪುನರ್ ಪರಿಶೀಲನೆ ಮಾಡಬೇಕು ಎಂದ ಡಿ.ಕೆ ಶಿವಕುಮಾರ್

ಬೆಂಗಳೂರು: ಸೂಚನಾ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ವಾಪಾಸ್‌ ಕಳುಹಿಸಿದ್ದು, ಇದರ ಬಗ್ಗೆ ಅವರು ಪುನರ್ ಪರಿಶೀಲನೆ ಮಾಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಬುಧವಾರ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕನ್ನಡ ಭಾಷೆಯು ಭಾವಾನಾತ್ಮಕ ವಿಚಾರ. ಕರ್ನಾಟಕದಲ್ಲಿ ಇದ್ದೀರಿ, ನಮ್ಮ ರಾಜ್ಯಪಾಲರಾಗಿದ್ದೀರಿ. ಸರ್ಕಾರದ ಇಂತಹ ನೀತಿಯಲ್ಲಿ ತಪ್ಪು ಕಂಡು ಹಿಡಿಯಬಾರದು. ಆದ ಕಾರಣ ಮತ್ತೊಮ್ಮೆ ಆದೇಶ ಪರಿಶೀಲಿಸುವಂತೆ ಸರ್ಕಾರದ ಪರವಾಗಿ ರಾಜ್ಯಪಾಲರಲ್ಲಿ ಮನವಿ ಮಾಡುತ್ತೇನೆ ಎಂದರು.

ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಇರಬೇಕು ಎಂದು ಹೊರಡಿಸಿದ್ದ ಸುಗ್ರಿವಾಜ್ಞೆಯನ್ನು ರಾಜ್ಯಪಾಲರು ಸಹಿ ಹಾಕದೆ ಏಕೆ ವಾಪಸ್ಸು ಕಳುಹಿಸಿದ್ದಾರೆ ಎಂಬುದು ತಿಳಿದಿಲ್ಲ. ರಾಜ್ಯಪಾಲರು ವಿಧಾನಸಭೆ ಅಧಿವೇಶನ ನಡೆಯುವ ತನಕ ಕಾಯಬಾರದಿತ್ತು. ಈಗಲೇ ಸಹಿ ಮಾಡಬಹುದಿತ್ತು. ದೇಶದ ರಕ್ಷಣೆಯ ವಿಚಾರದಲ್ಲಿ ನಮ್ಮ ಸರ್ಕಾರಗಳು ಬದ್ದವಾಗಿರುವಂತೆ, ರಾಜ್ಯದ ಗೌರವದ ವಿಚಾರದಲ್ಲೂ ನಾವು ಬದ್ದವಾಗಿದ್ದೇವೆ. ನಾಮ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಇರಬೇಕು ಎಂದು ಸುಗ್ರಿವಾಜ್ಞೆ ಹೊರಡಿಸಲಾಗಿತ್ತು. ಕನ್ನಡ ಭಾಷೆ, ಅಸ್ಮಿತೆ ಮತ್ತು ಸಂಸ್ಕೃತಿ ರಕ್ಷಣೆ ಎಂದು ಇದನ್ನು ಕರೆಯುತ್ತೇವೆ. ಕನ್ನಡದ ವಿಚಾರವಾಗಿ ಪ್ರತಿಭಟನೆ, ಹೋರಾಟಗಳು ನಡೆಯುತ್ತಿದ್ದವು. ಇದನ್ನು ಗಮನದಲ್ಲಿ ಇಟ್ಟುಕೊಂಡು ನಾವು ಕನ್ನಡಪರ ತೀರ್ಮಾನ ತೆಗೆದುಕೊಂಡಿದ್ದೆವು ಎಂದರು.

“ನಾಮಫಲಗಳಲ್ಲಿ ಶೇ. 60 ಕನ್ನಡ ಇರಬೇಕು ಎನ್ನುವ ವಿಧೇಯಕವನ್ನು ವಿಧಾನಸಭೆ ಅಧಿವೇಶನಲ್ಲಿ ಮಂಡಿಸಿ ಜಾರಿಗೆ ತರುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಇನ್ನು 10-15 ದಿನಗಳಲ್ಲಿ ಅಧಿವೇಶನ ಆರಂಭವಾಗಲಿದ್ದು, ಈ ವಿಧೇಯಕ ಮಂಡನೆಯಾಗಲಿದೆ” ಎಂದು ಹೇಳಿದರು.

ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನಗಳು ಕಾಂಗ್ರೆಸ್ ಗೆಲ್ಲದಿದ್ದರೆ ಗ್ಯಾರಂಟಿಗಳನ್ನು ನಿಲ್ಲಿಸಲಾಗುವುದು ಎಂಬ ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, “ಬಾಲಕೃಷ್ಣ ಅವರು ಈ ರೀತಿ ಹೇಳಿಕೆ ಕೊಟ್ಟಿಲ್ಲ. ಲೋಕಸಭೆ ನಂತರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದನ್ನು ಮಾತ್ರ ಹೇಳಿದ್ದಾರೆ. ಬಿಜೆಪಿಯವರಿಗೆ ಉತ್ತರ ನೀಡಲು ನಾನು ತಯಾರಿಲ್ಲ” ಎಂದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X