Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತಂತ್ರಜ್ಞಾನದ ರಾಜಧಾನಿ ಕರೆಯಲ್ಪಡುವ...

ತಂತ್ರಜ್ಞಾನದ ರಾಜಧಾನಿ ಕರೆಯಲ್ಪಡುವ ‘ನಮ್ಮ ಬೆಂಗಳೂರು’ಗೆ ಅಡಿಪಾಯ ಹಾಕಿದ್ದೇ ಕೆಂಪೇಗೌಡರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ವಾರ್ತಾಭಾರತಿವಾರ್ತಾಭಾರತಿ25 Aug 2025 9:08 PM IST
share
ತಂತ್ರಜ್ಞಾನದ ರಾಜಧಾನಿ ಕರೆಯಲ್ಪಡುವ ‘ನಮ್ಮ ಬೆಂಗಳೂರು’ಗೆ ಅಡಿಪಾಯ ಹಾಕಿದ್ದೇ ಕೆಂಪೇಗೌಡರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಹಲವು ಸಾಧಕರಿಗೆ ‘ನಮ್ಮ ಬೆಂಗಳೂರು ಪ್ರಶಸ್ತಿ’ ಪ್ರದಾನ

ಬೆಂಗಳೂರು, ಆ.25: ಇಂದು ದೇಶ ಮತ್ತು ಪ್ರಪಂಚದಲ್ಲಿ ನಾವೀನ್ಯತೆ, ಉದ್ಯಮಶೀಲತೆ ಮತ್ತು ತಂತ್ರಜ್ಞಾನದ ರಾಜಧಾನಿ ಎಂದು ಕರೆಯಲ್ಪಡುವ ನಗರಕ್ಕೆ ನಾಡಪ್ರಭು ಕೆಂಪೇಗೌಡರು ಅಡಿಪಾಯ ಹಾಕಿದರು. ನಾವು ಇದನ್ನು ಪ್ರೀತಿಯಿಂದ ‘ನಮ್ಮ ಬೆಂಗಳೂರು’ ಎಂದು ಕರೆಯುತ್ತೇವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ನಮ್ಮ ಬೆಂಗಳೂರು ಫೌಂಡೇಶನ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಹಲವು ಸಾಧಕರಿಗೆ ‘ನಮ್ಮ ಬೆಂಗಳೂರು ಪ್ರಶಸ್ತಿ’ ಪ್ರದಾನ ಮಾಡಿದ ಬಳಿಕ ಮಾತನಾಡಿದ ಅವರು, ಬೆಂಗಳೂರು ಒಂದು ಮಹಾನಗರವಾಗಿದ್ದು, ಇಲ್ಲಿ ದೇಶ ಮತ್ತು ಪ್ರಪಂಚದ ಲಕ್ಷಾಂತರ ಜನರು ತಮ್ಮ ಕನಸುಗಳನ್ನು ನನಸಾಗಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಆಡಳಿತದ ಪ್ರಯತ್ನಗಳ ಜೊತೆಗೆ, ಪ್ರತಿಯೊಬ್ಬ ನಾಗರಿಕನು ಬೆಂಗಳೂರನ್ನು ಸ್ವಚ್ಛ, ಹಸಿರು, ಸುರಕ್ಷಿತ ಮತ್ತು ಎಲ್ಲರನ್ನೂ ಒಳಗೊಳ್ಳುವ ಜವಾಬ್ದಾರಿಯನ್ನು ಪೂರೈಸಬೇಕು. ‘ನಮ್ಮ ಬೆಂಗಳೂರು ಪ್ರಶಸ್ತಿ’ ಸಾಮೂಹಿಕ ಸಂಕಲ್ಪದ ಸಂಕೇತವಾಗಿದೆ. ಇದು ಒಂದು ನಗರದ ಇತಿಹಾಸ, ಸಂಸ್ಕೃತಿ, ಸಂಪ್ರದಾಯ, ಕೈಗಾರಿಕಾ, ತಾಂತ್ರಿಕ ಮತ್ತು ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ, ಅದರ ನಾಗರಿಕರ ಆತ್ಮ ಮತ್ತು ಆದರ್ಶಗಳು, ಸೇವೆ, ಸಮರ್ಪಣೆ ಮತ್ತು ತ್ಯಾಗದಿಂದ ಕೂಡ ರೂಪುಗೊಂಡಿದೆ ಎಂಬುದನ್ನು ನಮಗೆ ಅರಿವು ಮೂಡಿಸುತ್ತದೆ ಎಂದು ಅವರು ಹೇಳಿದರು.

‘ನಮ್ಮ ಬೆಂಗಳೂರು ಪ್ರಶಸ್ತಿ’ ಸ್ವೀಕರಿಸಿದ ಸಾಧಕರ ಜೀವನ ಮತ್ತು ಕೊಡುಗೆ ನಮಗೆಲ್ಲರಿಗೂ ಸ್ಫೂರ್ತಿಯಾಗಿದೆ. ಬೆಂಗಳೂರನ್ನು ಐಟಿ ಕೇಂದ್ರವಾಗಿಸುವುದರ ಜೊತೆಗೆ, ಮಾನವೀಯತೆ, ಸಂಸ್ಕೃತಿ ಮತ್ತು ಸಂವೇದನೆಯ ಕೇಂದ್ರವನ್ನಾಗಿ ಮಾಡಲು ನಾವೆಲ್ಲರೂ ಒಟ್ಟಾಗಿ ಸಕಾರಾತ್ಮಕ ಪ್ರಯತ್ನ ಮಾಡಬೇಕು ಎಂದು ಅವರ ಕೊಡುಗೆ ನಮಗೆ ಕಲಿಸುತ್ತದೆ. ಸಮಾಜಕ್ಕಾಗಿ ಅವರ ಸೇವೆ ನಿರಂತರವಾಗಿರಲಿ ಎಂದು ರಾಜ್ಯಪಾಲರು ಆಶಿಸಿದರು.

ಕಾರ್ಯಕ್ರಮದಲ್ಲಿ ಜೀವಮಾನ ಸಾಧನೆ ವಿಭಾಗದಲ್ಲಿ ಡಾ.ಎಸ್.ಜಿ.ಸುಶೀಲಮ್ಮ, ವರ್ಷದ ಸರಕಾರಿ ಅಧಿಕಾರಿ ವಿಭಾಗದಲ್ಲಿ ನೋಂದಣಿ ಸಹಾಯಕ ಇನ್‍ಸ್ಪೆಕ್ಟರ್ ಜನರಲ್(ಕಂಪ್ಯೂಟರ್) ಎಚ್.ಎಲ್.ಪ್ರಭಾಕರ, ವರ್ಷದ ಉದಯೋನ್ಮುಖ ಸ್ಟಾರ್ ವಿಭಾಗದಲ್ಲಿ ಮಾಳವಿಕಾ ಆರ್.ನಾಯರ್, ವರ್ಷದ ಸಾಮಾಜಿಕ ಉದ್ಯಮಿ ವಿಭಾಗದಲ್ಲಿ ವಿಕಾಸ್ ಬ್ರಹ್ಮಾವರ್ ಮತ್ತು ಗೌತಮ್ ದೇಸಿಂಗ್, ನಮ್ಮ ವರ್ಷದ ಬೆಂಗಳೂರಿನವರು ವಿಭಾಗದಲ್ಲಿ ಡಾ.ಪಿ.ಶ್ರೀರಾಮ್ ಮತ್ತು ಡಾ.ಅಲೆಕ್ಸಾಂಡರ್ ಥಾಮಸ್ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಮೈಕ್ರೋಲ್ಯಾಂಡ್ ಲಿಮಿಟೆಡ್‍ನ ಅಧ್ಯಕ್ಷ ಪ್ರದೀಪ್, ಎವಿಎಎಸ್‍ನ ಸ್ಥಾಪಕ ಟ್ರಸ್ಟಿ ಅನಿತಾ ರೆಡ್ಡಿ, ಅಪೋಲೋ ಆಸ್ಪತ್ರೆಯ ಡಾ.ರವೀಂದ್ರ ಮೆಹ್ತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X