Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ...

ಸರಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ ನೀಡಲು ಬದ್ಧ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ6 Aug 2026 11:50 PM IST
share
ಸರಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ ನೀಡಲು ಬದ್ಧ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ ನೀಡಲು ನಮ್ಮ ಸರಕಾರ ಬದ್ಧವಾಗಿದೆ. ವಿಧಾನಸೌಧ ಸುತ್ತಮುತ್ತ ಜಾಗ ಹುಡುಕಬೇಕು, ಹೊರ ಭಾಗದಲ್ಲಾದರೆ ದೊಡ್ಡ ಜಾಗ ನೀಡಲು ಸಿದ್ಧ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಅಖಿಲ ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳಿಂದ ಅಭಿನಂದನೆ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.

ಮಹಿಳೆಯರ ಪ್ರೋತ್ಸಾಹದಿಂದ ನಮ್ಮ ಸರಕಾರ ಅಧಿಕಾರಕ್ಕೆ ಬಂದಿದ್ದು, ನಾವು ಚುನಾವಣೆಗೂ ಮುನ್ನ ಮಹಿಳೆಯರ ಹಿತ ಕಾಯಲು ಪ್ರಕಟಿಸಿದ್ದ ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ. ಈ ಯೋಜನೆಗಳಿಂದ ಕ್ರಾಂತಿಕಾರಿ ಬದಲಾವಣೆ ಬಂದಿದೆ ಎಂದು ಅವರು ಹೇಳಿದರು.

ನಮ್ಮ ಯೋಜನೆಗಳನ್ನು ರಾಷ್ಟ್ರದಲ್ಲಿ ಬೇರೆ ರಾಜ್ಯಗಳು ಪಾಲನೆ ಮಾಡಿವೆ. ನಮ್ಮ ಸರಕಾರ ಈ ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ.ಗಳನ್ನು ವಾರ್ಷಿಕವಾಗಿ ಖರ್ಚು ಮಾಡುತ್ತಿದೆ. ನಾಗರಿಕರ ಆಸ್ತಿ ದಾಖಲೆಗಳನ್ನು ಡಿಜಿಟಲ್ ಸ್ಕ್ಯಾನ್ ಮಾಡಿಸಿ ದಾಖಲೆಗಳನ್ನು ಸರಿಪಡಿಸಿಕೊಡಲು ನಮ್ಮ ಸರಕಾರ ಮುಂದಾಗಿದೆ. ನಮ್ಮ ಗ್ಯಾರಂಟಿ ದೇಶದ ಗ್ಯಾರಂಟಿಯಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ನೀವು ಆಗಾಗ್ಗೆ ಸೇರಿ ಸಂಘಟನೆ ಮಾಡಿಕೊಳ್ಳಿ. ಹೆಣ್ಣು ಮಕ್ಕಳು ಜಗಳ ಮಾತ್ರ ಮಾಡಿಕೊಳ್ಳಬೇಡಿ. ಸ್ಪರ್ಧೆ ಇದ್ದೇ ಇರುತ್ತದೆ. ಈ ದೇಶದಲ್ಲಿ ಬದಲಾವಣೆ ಆಗಬೇಕಾದರೆ ಮಹಿಳೆಯರು ಹಾಗೂ ಯುವಕರಿಂದ ಮಾತ್ರ ಸಾಧ್ಯ ಎಂಬುದು ನನ್ನ ನಂಬಿಕೆ. ನಮ್ಮ ಕಾಂಗ್ರೆಸ್ ಸರಕಾರ ಈ ಹಿಂದೆ ಮಹಿಳೆಯರಿಗಾಗಿ ಅಂಗನವಾಡಿ, ಆಶಾ ಕಾರ್ಯಕರ್ತೆ ಕಾರ್ಯಕ್ರಮ ತಂದಿದೆ ಎಂದು ಅವರು ಹೇಳಿದರು.

ನಿಮ್ಮ ಸಂಘದಲ್ಲಿ 5,500 ಸದಸ್ಯೆಯರಿದ್ದಾರೆ. ನೀವು ಎಷ್ಟು ಜನ ಇದ್ದೀರೋ ಅರಮನೆ ಮೈದಾನದಲ್ಲಿ ದೊಡ್ಡ ಸಮಾವೇಶ ಮಾಡಿ. ಸರಕಾರದ ವತಿಯಿಂದ ನಿಮಗೆ ಅಗತ್ಯ ಸಹಾಯ ಮಾಡಲಾಗುವುದು. ನಮ್ಮ ಮುಖ್ಯ ಕಾರ್ಯದರ್ಶಿ ಕಾನೂನು ಚೌಕಟ್ಟಿನಲ್ಲಿ ಬೇರೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ನಮಗೆ ನೀಡುವ ಶಿಫಾರಸ್ಸು ಮೇಲೆ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.

ನೀವು ಇಲ್ಲಿ ನನ್ನ ಜೊತೆ ಮಾತನಾಡುವುದು ಮುಖ್ಯವಲ್ಲ. ನಮ್ಮ ಸಂದೇಶವನ್ನು ನೀವು ಎಷ್ಟು ಜನ ಮಹಿಳಾ ಸಿಬ್ಬಂದಿಗೆ ಕಳುಹಿಸುತ್ತೀರಿ ಎಂಬುದು ಮುಖ್ಯ. ಶಿವಕುಮಾರ್ ನಿಂದ ನಿಮಗೆ ರಾಜ್ಯದಲ್ಲಿ ನ್ಯಾಯ ಸಿಗುತ್ತಿದೆ ಎಂಬ ವಿಶ್ವಾಸ ಇದೆ ಅಲ್ಲವೇ? ನೀವು ಮತ್ತೆ ಈ ಸರಕಾರವನ್ನು ಅಧಿಕಾರಕ್ಕೆ ತರಬೇಕು. ಆಗ ಇದಕ್ಕೆ ಬೆಲೆ ಇರುತ್ತದೆ. ಇಲ್ಲವಾದರೆ ಇದಕ್ಕೆ ಬೆಲೆ ಇರುವುದಿಲ್ಲ. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ ಎಂದು ಅವರು ಶುಭಕೋರಿದರು.

ನಾನು ಈ ಹಿಂದೆ ‘ನಾ ನಾಯಕಿ’ ಕಾರ್ಯಕ್ರಮ ಮಾಡಿದ್ದೆ. ಅಂದರೆ ಪ್ರತಿ ಮಹಿಳೆ ತನ್ನ ಮನೆಯಲ್ಲಿ ನಾಯಕಿಯಾಗಿರುತ್ತಾಳೆ. ಅದು ನಮ್ಮಲ್ಲಿ ಹೆಚ್ಚು ಚಾಲ್ತಿಗೆ ಬರಲಿಲ್ಲ. ಮತ್ತೆ ಇದಕ್ಕೆ ಹೊಸ ರೂಪ ನೀಡಲು ಪ್ರಯತ್ನಿಸುತ್ತೇನೆ. ಮಹಿಳೆಯರಲ್ಲಿ ನಾಯಕತ್ವ ಗುಣ ಬೆಳೆಸಲು ನಾವು ಜಾಗೃತಿ ಮೂಡಿಸಬೇಕು. ಮುಂದೆ ರಾಜಕೀಯದಲ್ಲಿ ಮಹಿಳಾ ಮೀಸಲಾತಿ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಆಗ ಯಾರು ಏನಾಗುತ್ತಾರೆ ಹೇಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ನುಡಿದರು.

ಮೋಟಮ್ಮ ಅವರು ಸಿಬ್ಬಂದಿಯಾಗಿದ್ದರು. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದರು. ನಾಯಕತ್ವ ಗುಣ ಬೆಳೆಸಿಕೊಳ್ಳಿ, ಸಾಕಷ್ಟು ಅವಕಾಶಗಳಿವೆ. ನಮ್ಮ ಸರಕಾರ ನಿಮ್ಮ ಜತೆ ಇದೆ. ನೀವು ನಮ್ಮ ಸರಕಾರದ ಜತೆ ಇರಬೇಕು ಎಂದು ಮುಖ್ಯಮಂತ್ರಿ ಕೋರಿದರು.

Tags

D.K. ShivakumarEmployees' Association
share
ವಾರ್ತಾಭಾರತಿ
ವಾರ್ತಾಭಾರತಿ
Next Story
X