Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಧಾನಸೌಧದಲ್ಲಿ ವಿದ್ಯುತ್-ನೀರಿನ ಪೋಲು...

ವಿಧಾನಸೌಧದಲ್ಲಿ ವಿದ್ಯುತ್-ನೀರಿನ ಪೋಲು ತಡೆಗೆ ಕ್ರಮ: ಸ್ಪಷ್ಟೀಕರಣ

ವಾರ್ತಾಭಾರತಿವಾರ್ತಾಭಾರತಿ4 July 2026 11:30 PM IST
share
ವಿಧಾನಸೌಧದಲ್ಲಿ ವಿದ್ಯುತ್-ನೀರಿನ ಪೋಲು ತಡೆಗೆ ಕ್ರಮ: ಸ್ಪಷ್ಟೀಕರಣ

ಬೆಂಗಳೂರು: ವಿಧಾನಸೌಧ ಹಾಗೂ ಇತರೆ ಸರಕಾರಿ ಕಚೇರಿಗಳಲ್ಲಿ ವಿದ್ಯುತ್ ಮತ್ತು ನೀರಿನ ಸಂರಕ್ಷಣೆ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಯನ್ನು ಸರಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಸ್ಪಷ್ಟೀಕರಣ ನೀಡಿದೆ.

ರಾಜ್ಯ ಸರಕಾರವು ವಿದ್ಯುತ್ ಹಾಗೂ ನೀರಿನ ಸಂರಕ್ಷಣೆಗೆ ಅತ್ಯುನ್ನತ ಆದ್ಯತೆ ನೀಡಿದ್ದು, ಸರಕಾರಿ ಕಚೇರಿಗಳಲ್ಲಿ ಇಂಧನ ಮತ್ತು ಜಲ ಸಂಪನ್ಮೂಲಗಳ ಮಿತವ್ಯಯದ ಬಳಕೆಯನ್ನು ಖಚಿತಪಡಿಸಲು ಈಗಾಗಲೇ ವಿವಿಧ ಕ್ರಮಗಳನ್ನು ಜಾರಿಗೊಳಿಸಿದೆ. ಈ ಸಂಬಂಧ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆಯು 2022ರ ಫೆ.21ರಂದೇ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲ ಇಲಾಖೆಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

ವಿದ್ಯುತ್ ಸಂರಕ್ಷಣೆ ಹಾಗೂ ಮಿತವ್ಯಯದ ಕ್ರಮಗಳು: ಸ್ವಯಂಚಾಲಿತ ದೀಪಗಳ ವ್ಯವಸ್ಥೆ. ವಿದ್ಯುತ್ ಉಳಿಸಲು ವಿಧಾನಸೌಧದ ಆವರಣದಲ್ಲಿರುವ ಹೊರಾಂಗಣ ವಿದ್ಯುತ್ ದೀಪಗಳನ್ನು ಸೂರ್ಯೋದಯ ಮತ್ತು ಸೂರ್ಯಾಸ್ತದ ಸಮಯಕ್ಕೆ ಅನುಗುಣವಾಗಿ ಸ್ವಯಂಚಾಲಿತ ವ್ಯವಸ್ಥೆಯ ಮೂಲಕ ಆನ್ ಮತ್ತು ಆಫ್ ಮಾಡಲಾಗುತ್ತಿದೆ.

ಕಚೇರಿ ಸಮಯದ ನಂತರ ಬಂದ್: ಪ್ರತಿದಿನ ಕಚೇರಿ ಅವಧಿ ಮುಕ್ತಾಯವಾದ ನಂತರ ಗ್ರೂಪ್-ಡಿ ಸಿಬ್ಬಂದಿಯ ಮೂಲಕ ಎಲ್ಲ ವಿದ್ಯುತ್ ದೀಪಗಳು ಹಾಗೂ ಅಗತ್ಯವಿಲ್ಲದ ವಿದ್ಯುತ್ ಉಪಕರಣಗಳನ್ನು ಕಡ್ಡಾಯವಾಗಿ ಬಂದ್ ಮಾಡಲಾಗುತ್ತಿದೆ.

ಏಸಿ ತಾಪಮಾನ ನಿಯಂತ್ರಣ: ಎಲ್ಲ ಏರ್ ಕಂಡೀಷನರ್‍ಗಳನ್ನು 24 ರಿಂದ 26 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿಯೇ ಬಳಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಅಧಿಕಾರಿ ಅಥವಾ ಸಿಬ್ಬಂದಿ ಕಚೇರಿಯಲ್ಲಿ ಇಲ್ಲದ ಸಂದರ್ಭದಲ್ಲಿ ಲೈಟ್, ಫ್ಯಾನ್, ಏರ್ ಕಂಡೀಷನರ್ ಹಾಗೂ ಇತರೆ ವಿದ್ಯುತ್ ಉಪಕರಣಗಳನ್ನು ಕಡ್ಡಾಯವಾಗಿ ಬಂದ್ ಮಾಡುವಂತೆ ಮತ್ತೊಮ್ಮೆ ಸೂಚಿಸಲಾಗಿದೆ.

ನೀರಿನ ಮಿತವ್ಯಯ ಹಾಗೂ ಸೋರಿಕೆ ನಿಯಂತ್ರಣ ಕ್ರಮಗಳು: ನೀರಿನ ಸಂರಕ್ಷಣೆಯ ದೃಷ್ಟಿಯಿಂದ, ಮೇಲ್ಮಟ್ಟದ ನೀರಿನ ಟ್ಯಾಂಕ್‍ಗಳಿಂದ ನೀರು ವ್ಯರ್ಥವಾಗಿ ಹರಿಯದಂತೆ ತಡೆಯಲು ‘ಬಾಲ್ ವಾಲ್ವ್'ಗಳನ್ನು ಅಳವಡಿಸಲಾಗಿದೆ.

ವಿಶೇಷ ಅಧಿಕಾರಿ ನೇಮಕ: ವಿಧಾನಸೌಧದಲ್ಲಿನ ನೀರಿನ ಸೋರಿಕೆ ಹಾಗೂ ಅನಗತ್ಯ ಬಳಕೆಯನ್ನು ತಡೆಗಟ್ಟಲು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ವಿಶೇಷ ಜವಾಬ್ದಾರಿಯನ್ನು ವಹಿಸಲಾಗಿದೆ.

ತ್ಯಾಜ್ಯ ನೀರು ಮರುಬಳಕೆ ಮತ್ತು ಮಳೆನೀರು ಕೊಯ್ಲು: ವಿಧಾನಸೌಧದ ಉದ್ಯಾನಗಳ ನಿರ್ವಹಣೆಗೆ ಕೇವಲ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಬಳಸಲಾಗುತ್ತಿದೆ. ಪ್ರಸ್ತುತ ಎರಡು ಬೋರ್‍ವೆಲ್‍ಗಳು ಕಾರ್ಯನಿರ್ವಹಿಸುತ್ತಿದ್ದು, ಮಳೆನೀರು ಕೊಯ್ಲು ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ತಾಂತ್ರಿಕ ಸಹಕಾರ: ನೀರಿನ ಮಿತವ್ಯಯದ ಬಳಕೆ ಹಾಗೂ ಸೋರಿಕೆ ನಿಯಂತ್ರಣಕ್ಕಾಗಿ ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿಯ ತಾಂತ್ರಿಕ ಸಹಕಾರವನ್ನು ಪಡೆಯಲಾಗುತ್ತಿದೆ. ವಿಧಾನಸೌಧದಲ್ಲಿ ಜಾರಿಯಲ್ಲಿರುವ ಈ ಎಲ್ಲ ಸಂರಕ್ಷಣಾ ಕ್ರಮಗಳನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಕಾರ್ಯಕಾರಿ)ಯ ಸರಕಾರದ ಅಧೀನ ಕಾರ್ಯದರ್ಶಿ ಹಾಗೂ ಕಿರಿಯ ಅಭಿಯಂತರರು (ವಿದ್ಯುತ್) ನಿಯಮಿತವಾಗಿ ಪರಿಶೀಲಿಸಿ ಖಚಿತಪಡಿಸಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಲಾಗಿದೆ.

Tags

Karnataka GovtVidhana Soudha
share
ವಾರ್ತಾಭಾರತಿ
ವಾರ್ತಾಭಾರತಿ
Next Story
X