Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಜೊತೆ...

ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಜೊತೆ ಗ್ರೀಸ್ ನಿಯೋಗ ಚರ್ಚೆ

ಕರಾವಳಿಯಲ್ಲಿ ಬಂದರು, ಲಾಜಿಸ್ಟಿಕ್ ವಲಯ ನಿರ್ಮಾಣ: ಗ್ರೀಸ್ ಸಹಭಾಗಿತ್ವಕ್ಕೆ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ23 Feb 2024 7:07 PM IST
share
ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಜೊತೆ ಗ್ರೀಸ್ ನಿಯೋಗ ಚರ್ಚೆ

ಬೆಂಗಳೂರು: ಗ್ರೀಸ್ ದೇಶವು ಹಡಗು ನಿರ್ಮಾಣ ಮತ್ತು ಸಾಗರಮಾರ್ಗ ವಹಿವಾಟಿನಲ್ಲಿ ಪರಿಣತಿ ಹೊಂದಿದ್ದು, ನಮ್ಮ ರಾಜ್ಯದ ಕರಾವಳಿ ತೀರದಲ್ಲಿ ಆಧುನಿಕ ಬಂದರು ಮತ್ತು ಸರಕು ಸಾಗಣೆ ತಾಣಗಳ (ಲಾಜಿಸ್ಟಿಕ್ ವಲಯ) ಅಭಿವೃದ್ಧಿ ನಿಟ್ಟಿನಲ್ಲಿ ಆ ದೇಶದೊಂದಿಗೆ ಸಹಭಾಗಿತ್ವಕ್ಕೆ ಆಸಕ್ತಿ ಹೊಂದಿರುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಶುಕ್ರವಾರ ಹೇಳಿದರು.

ಖನಿಜ ಭವನದಲ್ಲಿ ತಮ್ಮನ್ನು ಭೇಟಿಯಾದ ಗ್ರೀಸ್ ದೇಶದ ಉಪವಿದೇಶಾಂಗ ಸಚಿವ ಕೋಸ್ಟಾಸ್ ಫ್ರಾಗ್ಕೋಜಿಯಾನಿಸ್ ನೇತೃತ್ವದ ಉನ್ನತ ಮಟ್ಟದ ನಿಯೋಗದೊಂದಿಗೆ ಮಾತುಕತೆ ನಡೆಸಿದ ಅವರು ರಾಜ್ಯ ಸರಕಾರ ಜಾರಿಗೆ ತಂದಿರುವ ಗೋದಾಮು ಮತ್ತು ಸಾಗಣೆ ವ್ಯವಸ್ಥಾಪನೆ ನೀತಿ ಇದಕ್ಕೆ ಪೂರಕವಾಗಿದೆ ಎಂದು ಗಮನ ಸೆಳೆದರು.

ಗ್ರೀಸ್ ದೇಶವು ಕೃಷಿ ಆಧಾರಿತ ಉದ್ದಿಮೆಗಳು ಮತ್ತು ಆಹಾರ ಸಂಸ್ಕರಣೆ ಕ್ಷೇತ್ರಗಳಲ್ಲಿ ಕೂಡ ಮುಂಚೂಣಿಯಲ್ಲಿದೆ. ಹೀಗಾಗಿ, ನಾವು ಆಲಿವ್ ಬೆಳೆಗಾರಿಕೆ, ಫೆಟಾ ಗಿಣ್ಣು ಉತ್ಪಾದನೆ, ಮೆಡಿಟರೇನಿಯನ್ ವಲಯದ ಆಹಾರ ಸಂಸ್ಕರಣಾ ತಂತ್ರಗಳನ್ನು ಅವರೊಂದಿಗಿನ ಸಹಭಾಗಿತ್ವದ ಮೂಲಕ ಕಲಿಯಲು ಉತ್ಸುಕರಾಗಿದ್ದೇವೆ ಎಂದು ಅವರು ವಿವರಿಸಿದರು.

ವಿಜಯಪುರದಲ್ಲಿ ಸದ್ಯದಲ್ಲೇ ಸ್ಥಾಪನೆಯಾಗಲಿರುವ ಫುಡ್ ಪಾರ್ಕ್ ಬಗ್ಗೆ ಪ್ರಸ್ತಾಪಿಸಿ, ಇಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆ ಪರಿಶೀಲಿಸಬೇಕು ಎಂದು ಗ್ರೀಕ್ ನಿಯೋಗದ ಗಮನ ಸೆಳೆದರು.

ರಾಜ್ಯವು ಪ್ರವಾಸೋದ್ಯಮ, ಪಾರಂಪರಿಕ ತಾಣಗಳ ಅಭಿವೃದ್ಧಿ, ಕರಾವಳಿ ಪ್ರವಾಸೋದ್ಯಮ, ವೆಲ್ನೆಸ್ ರಿಟ್ರೀಟ್ ಮುಂತಾದ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲು ಆದ್ಯತೆ ಕೊಡಲಿದೆ. ಜತೆಗೆ ವಿದ್ಯುತ್ ಚಾಲಿತ ವಾಹನ, ಮರುಬಳಕೆ ಇಂಧನ, ಸೌರಶಕ್ತಿ, ಹೈಡ್ರೋಜನ್ ಉತ್ಪಾದನೆ, ಹಸಿರು ಅಮೋನಿಯಾ ಮುಂತಾದ ವಲಯಗಳ ಬಗ್ಗೆಯೂ ಗಮನ ಕೇಂದ್ರೀಕರಿಸಲಿದೆ. ಈ ಕ್ಷೇತ್ರಗಳಲ್ಲಿ ಹೂಡಿಕೆ ಮಾಡುವುದಕ್ಕೂ ಗ್ರೀಸ್ ವಿದೇಶಕ್ಕೆ ಒಳ್ಳೆಯ ಅವಕಾಶಗಳಿವೆ ಎಂದು ಪಾಟೀಲ ವಿವರಿಸಿದರು.

ಇದಕ್ಕೆ ಸ್ಪಂದಿಸಿದ ಗ್ರೀಸ್ ಉಪವಿದೇಶಾಂಗ ಸಚಿವರು, ದುಬಾರಿ ವೆಚ್ಚದ ಸಿನಿಮಾಗಳ ತಯಾರಿಕೆಗೆ ಹೆಸರಾಗಿರುವ ಕರ್ನಾಟಕದ ಚಿತ್ರರಂಗವು ಗ್ರೀಸ್ ದೇಶಕ್ಕೆ ಬಂದು ಚಿತ್ರೀಕರಣ ಮಾಡುವ ಮೂಲಕ ಅಲ್ಲಿನ ಪ್ರೋತ್ಸಾಹಕ ನೀತಿಗಳ ಪ್ರಯೋಜನ ಪಡೆಯಬೇಕು. ಜತೆಗೆ, ವಿದೇಶಗಳಿಗೆ ಪ್ರವಾಸ ಕೈಗೊಳ್ಳುವ ರಾಜ್ಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಗ್ರೀಸ್ ಗೆ ಭೇಟಿ ನೀಡಬೇಕು. ಈ ಸಂಬಂಧ ಪ್ರವಾಸ ಆಯೋಜಕರ ಜತೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಭಾರತದಿಂದ, ಅದರಲ್ಲೂ ಬೆಂಗಳೂರಿನಿಂದ ಗ್ರೀಸ್ ನ ಅಥೆನ್ಸ್ ಗೆ ನೇರ ವಿಮಾನ ಸಂಚಾರ ಆರಂಭಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X