Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆಫ್ರಿಕಾದಲ್ಲಿ ಭಾರತದ ಮೊದಲ ಸರಕಾರಿ...

ಆಫ್ರಿಕಾದಲ್ಲಿ ಭಾರತದ ಮೊದಲ ಸರಕಾರಿ ಕೌಶಲ್ಯ ಪಾಲುದಾರಿಕೆ; ‘ನಮೀಬಿಯಾ ಜೊತೆ ಜಿಟಿಟಿಸಿ ಸಹಯೋಗ’

ವಾರ್ತಾಭಾರತಿವಾರ್ತಾಭಾರತಿ20 July 2025 6:20 PM IST
share
ಆಫ್ರಿಕಾದಲ್ಲಿ ಭಾರತದ ಮೊದಲ ಸರಕಾರಿ ಕೌಶಲ್ಯ ಪಾಲುದಾರಿಕೆ; ‘ನಮೀಬಿಯಾ ಜೊತೆ ಜಿಟಿಟಿಸಿ ಸಹಯೋಗ’

ಬೆಂಗಳೂರು : ಭಾರತ-ಆಫ್ರಿಕಾ ನಡುವಿನ ಮಹತ್ವದ ಸಹಕಾರದಲ್ಲಿ ಹೆಗ್ಗುರುತು ಮೂಡಿದೆ. ಕರ್ನಾಟಕದ ಸರಕಾರಿ ಸ್ವಾಮ್ಯದ ಸರಕಾರಿ ಉಪಕರಣ ಮತ್ತು ತರಬೇತಿ ಕೇಂದ್ರವನ್ನು ನಮೀಬಿಯಾ ಈಗ ತನ್ನ ತಾಂತ್ರಿಕ ಜ್ಞಾನ ಮತ್ತು ವೃತ್ತಿಪರ ತರಬೇತಿ ಪಾಲುದಾರನಾಗಿ ಆಯ್ಕೆ ಮಾಡಿದೆ. ಆಫ್ರಿಕಾದ ನೆಲದಲ್ಲಿ ಭಾರತೀಯ ಸರಕಾರಿ ಜ್ಞಾನ ಸಂಸ್ಥೆಯೊಂದು ಮೀಸಲಾದ ಘಟಕವನ್ನು ಅಲ್ಲಿ ಸ್ಥಾಪಿಸುತ್ತಿದೆ.

ರವಿವಾರ ಇಲ್ಲಿನ ವಿಕಾಸಸೌಧದಲ್ಲಿ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಸಮ್ಮುಖದಲ್ಲಿ ಜಿಟಿಟಿಸಿಯ ಡಾ.ವೈ.ಕೆ.ದಿನೇಶ್ ಕುಮಾರ್ ಮತ್ತು ಆಫ್ರಿಕಾ ಇಂಡಿಯಾ ಎಕನಾಮಿಕ್ ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ಅನಿಲ್ ಶಿಂಧೆ ಅವರ ಸಹಯೋಗವನ್ನು ಔಪಚಾರಿಕಗೊಳಿಸುವ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದರು.

ಐದು ದಶಕಗಳ ಇತಿಹಾಸ ಹೊಂದಿರುವ ಜಿಟಿಟಿಸಿ ಕರ್ನಾಟಕ ರಾಜ್ಯಾದ್ಯಂತ 20ಕ್ಕೂ ಹೆಚ್ಚು ಕೇಂದ್ರಗಳನ್ನು ಹೊಂದಿದೆ. ಪ್ರತಿವರ್ಷ ಸಾವಿರಾರು ಜನರಿಗೆ ನಿಖರ ಉಪಕರಣ ತಯಾರಿಕೆ, ಸಿಎನ್‍ಸಿ ಕಾರ್ಯಾಚರಣೆ, ಮೆಕಾಟ್ರಾನಿಕ್ಸ್ ಮತ್ತು ರೊಬೊಟಿಕ್ಸ್‌ ನಲ್ಲಿ ತರಬೇತಿ ನೀಡುತ್ತಿದೆ. ಇದರ ಹಳೆಯ ವಿದ್ಯಾರ್ಥಿಗಳ ಜಾಲವು 5ಲಕ್ಷಕ್ಕೂ ಹೆಚ್ಚು ಕೌಶಲ್ಯಪೂರ್ಣ ವೃತ್ತಿಪರರನ್ನು ಹೊಂದಿದೆ ಮತ್ತು ಅದರ ಪಠ್ಯಕ್ರಮವು ಪ್ರಸ್ತುತ ಉದ್ಯಮದ ಅಗತ್ಯಗಳಿಗೆ ನಿಕಟವಾಗಿ ಹೊಂದಿಕೊಂಡಿದೆ.

ಜಿಟಿಟಿಸಿಯು ಆಫ್ರಿಕಾದ ಕೈಗಾರಿಕಾ ಕೌಶಲ್ಯ ಅಗತ್ಯಗಳಿಗೆ ಒಂದು ದೃಢವಾದ ಮಾದರಿಯಾಗಿದೆ. ಇದು ‘ಆಫ್ರಿಕನ್ ಪರಿಸ್ಥಿತಿಗೆ ಹೊಂದಿಕೊಳ್ಳುವ’ ಸಾಮರ್ಥ್ಯ ವನ್ನು ಹೊಂದಿದೆ. ಈ ಪಾಲುದಾರಿಕೆಯು ನಮೀಬಿಯಾದಲ್ಲಿ ಕೌಶಲ್ಯಪೂರ್ಣ ಪ್ರತಿಭೆಯ ಕಣಜ ನಿರ್ಮಿಸುತ್ತದೆ. ಆಫ್ರಿಕಾದಾದ್ಯಂತ ಜಿಟಿಸಿಸಿ ಪದವೀಧರರಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.

ಕರ್ನಾಟಕ ಮೂಲದ ಎಂಎಸ್‍ಎಂಇಗಳಿಗೆ ಹೆಚ್ಚುವರಿ ಮಾರುಕಟ್ಟೆ ಅವಕಾಶ ಒದಗಿಸಲಿದೆ ಮತ್ತು ಶಿಕ್ಷಣ, ಕೌಶಲ್ಯದಲ್ಲಿ ಜಾಗತಿಕ ಮನ್ನಣೆಯನ್ನು ನೀಡಲಿದೆ. ಶಿಕ್ಷಣ ರಾಜತಾಂತ್ರಿಕತೆಯ ಮೂಲಕ ಕರ್ನಾಟಕದ ಶಕ್ತಿಯನ್ನು ಸಬಲೀಕರಣಗೊಳಿಸಲಿದೆ ಎಂದು ಎಂದು ಡಾ.ಶರಣ ಪ್ರಕಾಶ್ ಪಾಟೀಲ್ ಅವರು ನುಡಿದರು.

ಜಿಟಿಟಿಸಿಯ ವ್ಯವಸ್ಥಾಪಕ ನಿರ್ದೇಶಕ ಡಾ.ವೈ.ಕೆ ದಿನೇಶ್ ಕುಮಾರ್, ಈ ಉಪಕ್ರಮವು ಕರ್ನಾಟಕವನ್ನು ಕೌಶಲ್ಯ ಅಭಿವೃದ್ಧಿಯಲ್ಲಿ ಜಾಗತಿಕ ನಾಯಕನನ್ನಾಗಿ ಮಾಡಿದೆ. ಉಪಕರಣಗಳ ತಯಾರಿಕೆ ಮತ್ತು ಮುಂದುವರಿದ ಉತ್ಪಾದನೆಯಲ್ಲಿ ಜಿಟಿಟಿಸಿಯ ಪರಿಣತಿಯು ಈಗ ಜಾಗತಿಕ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಭಾರತ-ಆಫ್ರಿಕನ್ ರಾಷ್ಟ್ರಗಳ ನಡುವೆ ಸಹಯೋಗ: ಭಾರತ ಮತ್ತು 54 ಆಫ್ರಿಕನ್ ರಾಷ್ಟ್ರಗಳ ನಡುವೆ ಜ್ಞಾನ, ತಂತ್ರಜ್ಞಾನ ಮತ್ತು ಹೂಡಿಕೆ ಸಹಯೋಗವನ್ನು ಬೆಳೆಸಲು ಸ್ಥಾಪಿಸಲಾದ ಎಐಇಎಫ್, ಅಡಿಸ್ ಅಬಾಬಾದಲ್ಲಿ ನಡೆದ ಶೃಂಗಸಭೆ 2020ರಲ್ಲಿ ಅದರ ಉಪಕ್ರಮಗಳನ್ನು ಔಪಚಾರಿಕವಾಗಿ ಸ್ವಾಗತಿಸಿದ ಆಫ್ರಿಕನ್ ಒಕ್ಕೂಟದಿಂದ ಅನುಮೋದನೆಗಳನ್ನು ಪಡೆದಿದೆ. ಎಐಇಎಫ್ ಅಧಿಕಾರಿಗಳು ನಮೀಬಿಯಾದ ಪಾಲುದಾರಿಕೆ ಬಗ್ಗೆ ತಿಳಿಸಿದರು.

ಯುರೇನಿಯಂ, ವಜ್ರಗಳು, ಚಿನ್ನ ಮತ್ತು ಅಪರೂಪದ ಭೂಮಿಯ ಖನಿಜಗಳು ಸೇರಿದಂತೆ ಅದರ ಶ್ರೀಮಂತ ನೈಸರ್ಗಿಕ ಸಂಪನ್ಮೂಲಗಳು ಹಾಗೂ ಸಮುದ್ರ, ಇಂಧನ, ಕೃಷಿ ವ್ಯವಹಾರ, ಲಾಜಿಸ್ಟಿಕ್ಸ್ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಅದರ ತ್ವರಿತ ಅಭಿವೃದ್ಧಿಯನ್ನು ಉಲ್ಲೇಖಿಸಿದರು. ದೇಶದ ರಾಜಕೀಯ ಸ್ಥಿರತೆ, ಇಂಗ್ಲಿಷ್‌ ಮಾತನಾಡುವ ಜನಸಂಖ್ಯೆ ಮತ್ತು ವ್ಯವಹಾರ ಸ್ನೇಹಿ ವಾತಾವರಣವು ಭಾರತೀಯ ಕೌಶಲ್ಯ ಮಾದರಿಯನ್ನು ಜಾರಿಗೆ ತರಲಿದೆ. ಅಲ್ಲದೇ ಇದು ಅತ್ಯುತ್ತಮ ಕೌಶಲ್ಯ ತಾಣವಾಗಿರಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X