Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼನಮ್ಮ ಕ್ಲಿನಿಕ್ʼ ನಂ.1 ಕ್ಲಿನಿಕ್...

ʼನಮ್ಮ ಕ್ಲಿನಿಕ್ʼ ನಂ.1 ಕ್ಲಿನಿಕ್ ಗಳನ್ನಾಗಿ ಮಾರ್ಪಡಿಸಲು ಮುಂದಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಪ್ರಾಯೋಗಿಕವಾಗಿ ಶೇ.25 ರಷ್ಟು ಕ್ಲಿನಿಕ್ ಗಳಿಗೆ ಮೇಜರ್ ಸರ್ಜರಿ

ವಾರ್ತಾಭಾರತಿವಾರ್ತಾಭಾರತಿ9 Aug 2023 5:48 PM IST
share
ʼನಮ್ಮ ಕ್ಲಿನಿಕ್ʼ ನಂ.1 ಕ್ಲಿನಿಕ್ ಗಳನ್ನಾಗಿ ಮಾರ್ಪಡಿಸಲು ಮುಂದಾದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಾದ್ಯಂತ ನಮ್ಮ ಕ್ಲಿನಿಕ್ ಗಳನ್ನ ನಂಬರ್ 1 ಕ್ಲಿನಿಕ್ ಗಳನ್ನಾಗಿ ಮಾರ್ಪಡಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಭಿನ್ನ ಪ್ರಯೋಗಗಳಿಗೆ ಕೈಹಾಕಿದ್ದಾರೆ.‌ ನಗರ ಪ್ರದೇಶಗಳ ಬಡವರು ಹಾಗೂ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಯನ್ನ ನಮ್ಮ ಕ್ಲಿನಿಕ್ ಗಳ ಮುಖಾಂತರ ಒದಗಿಸಬಹುದು. ಈ ನಿಟ್ಟಿನಲ್ಲಿ ನಮ್ಮ ಕ್ಲಿನಿಕ್ ಗಳಿಗೆ ಹೊಸ ಕಾಯಕಲ್ಪ‌ ನೀಡಲು ಯೋಜನೆ ರೂಪಿಸಲಾಗುತ್ತಿದೆ.

ಪ್ರಾಯೋಗಿಕ ಹಂತವಾಗಿ ರಾಜ್ಯದಲ್ಲಿರುವ ನಮ್ಮ ಕ್ಲಿನಿಕ್ ಗಳಲ್ಲಿ ಶೇ 25 ರಷ್ಟು ಕ್ಲಿನಿಕ್ ಗಳ ಸಮಯ ಬದಲಾವಣೆಗೆ ನಿರ್ಧರಿಸಲಾಗಿದೆ. ಅಸಹಾಯಕರು ಬಡವರಿಗೆ ಅನುಕೂಲ ಆಗಲಿ ಎಂದು ರಾಜ್ಯದ ನಗರ ಪ್ರದೇಶಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನ ತೆರೆಯಲಾಗಿತ್ತು. ಆದರೆ, ನಮ್ಮ ಕ್ಲಿನಿಕ್ ಗಳು ತೆರೆಯುತ್ತಿದ್ದ ಸಮಯ, ಜನಸಾಮಾನ್ಯರಿಗೆ ಅನುಕೂಲಕರವಾಗಿಲ್ಲ. ಪ್ರಸ್ತುತ ನಮ್ಮ ಕ್ಲಿನಿಕ್ ಗಳು ಬೆಳಗ್ಗೆ 9 ಗಂಟೆಗೆ ತೆರದು ಮಧ್ಯಾಹ್ನ 12.30ಕ್ಕೆ ಮುಚ್ಚಲಾಗುತ್ತೆ. ಬಳಿಕ ಮಧ್ಯಾಹ್ನ 2 ಗಂಟೆಗೆ ತೆರೆದು 4.30ಕ್ಕೆ ಕ್ಲೋಸ್ ಮಾಡಲಾಗುತ್ತಿತ್ತು.‌

ಇದೀಗ ನಮ್ಮ ಕ್ಲಿನಿಕ್ ಗಳನ್ನ ಸಂಜೆ ಕ್ಲಿನಿಕ್ ಮಾದರಿಯಲ್ಲಿ ಸಮಯ ಬದಲಾಯಿಸಲು ನಿರ್ಧರಿಸಲಾಗಿದ್ದು, 12 ಗಂಟೆಯಿಂದ ರಾತ್ರಿ 8 ಗಂಟೆಯ ವರೆಗೆ ಕಾರ್ಯನಿರ್ವಸುವಂತೆ ತಯಾರಿ ನಡೆಸಲಾಗಿದೆ. ಕೂಲಿ ಕಾರ್ಮಿಕರು ಕೆಲಸಕ್ಕೆ ಹೋಗುವ ಸಮಯ ಹಾಗೂ ನಮ್ಮ ಕ್ಲಿನಿಕ್ ಗಳ ಸಮಯ ಎರಡು ಕೂಡ ಸೇಮ್ ಆಗುತ್ತಿತ್ತು. ಇದರಿಂದ ಬಡವರು ಈ ಸೌಲಭ್ಯದಿಂದ ವಂಚಿತರಾಗುತ್ತಾರೆ. ಹೀಗಾಗಿ ರಾತ್ರಿಯ ವರೆಗೂ ನಮ್ಮ ಕ್ಲಿನಿಕ್ ಗಳು ಕಾರ್ಯನಿರ್ವಹಿಸುವಂತೆ ಸಮಯ ಬದಲಾವಣೆ ಮಾಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದರು. ರಾತ್ರಿ ವರೆಗು ಕಾರ್ಯನಿರ್ವಹಿಸಬೇಕಾದರೆ ಎರಡು ಶಿಫ್ಟ್ ಮಾಡಬೇಕಾಗಬಹುದು.‌ ಆಗ ಹೆಚ್ಚಿನ‌ ವೈದ್ಯರು ಬೇಕಾಗುತ್ತಾರೆ. ಈಗಾಗಲೇ ವೈದ್ಯರ ಕೊರತೆಯಿದೆ ಎಂಬ ವಾದಗಳು ಕೂಡಾ ಕೇಳಿ ಬಂದಿದ್ದವು. ಅಂತಿಮವಾಗಿ ಎರಡು ಶಿಫ್ಟ್ ಮಾಡುವ ಬದಲು ಒಂದೇ ಶಿಫ್ಟ್ ನಲ್ಲಿ ಸಮಯ ಬದಲಾವಣೆ ಮಾಡಲು ಆರೋಗ್ಯ ಸಚಿವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದರು.‌

ಬೆಳಗ್ಗೆ 7 ಗಂಟೆಗೆ ನಮ್ಮ ಕ್ಲಿನಿಕ್ ಗಳು ತೆರೆಯಲಿದ್ದು, ಬೆಳಗ್ಗೆ ಹೊತ್ತಿನಲ್ಲಿ ಲ್ಯಾಬ್ ಟೆಕ್ನಿಷಿಯನ್ ಮಾತ್ರ ಇರುತ್ತಾರೆ. ಬಳಿಕ 12 ಗಂಟೆಯಿಂದ 8 ಗಂಟೆವರೆಗೂ ವೈದ್ಯರು ಹಾಗೂ ನರ್ಸ್ ಜನರಿಗೆ ಚಿಕಿತ್ಸೆ ನೀಡುವಂತೆ ಯೋಜನೆ ರೂಪಿಸಲಾಗಿದೆ.‌ ರಾಜ್ಯದಲ್ಲಿ ಒಟ್ಟು 415 ನಮ್ಮ ಕ್ಲಿನಿಕ್ ಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ ಶೇ 25 ರಷ್ಟು ಕ್ಲಿನಿಕ್ ಗಳನ್ನ ಪ್ರಾಯೋಗಿಕ ಹಂತದಲ್ಲಿ ಸಂಜೆ ಕ್ಲಿನಿಕ್ ಗಳಾಗಿ ಸಮಯ ಬದಲಾವಣೆ ಮಾಡಲಾಗ್ತಿದೆ. ಇವುಗಳ ಯಶಸ್ವಿಯಾದರೆ ರಾಜ್ಯಾದ್ಯಂತ ಎಲ್ಲ ನಮ್ಮ ಕ್ಲಿನಿಕ್ ಗಳ ಸಮಯವನ್ನ ಬದಲಾವಣೆ ಮಾಡಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ.

ಸಂಜೆ ವೇಳೆ ನಮ್ಮ ಕ್ಲಿನಿಕ್ ಗಳಲ್ಲಿ ಒಪಿಡಿ ತೆರೆಯುವುದರಿಂದ ಸಾಕಷ್ಟು ಅನುಕೂಲ ಕೂಡ ಆಗಲಿದೆ.‌ ಹೀಗೆ ಆಗುವ ಬದಲಾವಣೆಯಿಂದ ಜನರಿಗೆ ಅನುಕೂಲ ಆಗುತ್ತಾ? ಜನ ಈ ಯೋಜನೆಯ ಫಲಾನುಭವಿ ಆಗ್ತಾರಾ ಅಂತ ಕಾದು ನೋಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸಕ್ತಿ ತೋರಿದ್ದಾರೆ. ಬಳಿಕ ಹಂತ ಹಂತವಾಗಿ ನಮ್ಮ ಕ್ಲಿನಿಕ್ ಗಳಲ್ಲಿ ಉತ್ತಮ ಆರೋಗ್ಯ ಸೌಲಭ್ಯಗಳನ್ನ ಒದಗಿಸಲು ಯೋಜಿಸಲಾಗಿದೆ.

ಸುಮಾರು ಮೂರು ಲಕ್ಷದ 96 ಸಾವಿರ ಮಹಿಳೆಯರು ಹಾಗೂ 4 ಲಕ್ಷದ 21 ಸಾವಿರ ಪುರುಷರು ನಮ್ಮ ಕ್ಲಿನಿಕ್ ಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪ್ರತಿ ದಿನ ಸರಾಸರಿ 35 ರಿಂದ 40 ಜನರು ಚಿಕಿತ್ಸೆ ಪಡೆಯಲು ನಮ್ಮ ಕ್ಲಿನಿಕ್ ಗಳಿಗೆ ಭೇಟಿ ನೀಡುತ್ತಿದ್ದಾರೆ. ಇನ್ನೂ 2 ಲಕ್ಷದ 88 ಸಾವಿರ ಜನರು ರೋಗಪರೀಕ್ಷೆಗಳನ್ನ ಮಾಡಿಸಿಕೊಂಡಿದ್ದಾರೆ. ನಮ್ಮ ಕ್ಲಿನಿಕ್ ಗಳಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ವಿಸುವ ನಿಟ್ಟಿನಲ್ಲಿ ಮಹತ್ತರ ಬದಲಾವಣೆಗಳನ್ನ ತರಲಾಗುತ್ತಿದೆ‌.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X