Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚುನಾಯಿತ ಸದಸ್ಯರ ಅವಧಿ...

ಚುನಾಯಿತ ಸದಸ್ಯರ ಅವಧಿ ಪೂರ್ಣಗೊಳ್ಳುವವರೆಗೆ ಆಡಳಿತಾಧಿಕಾರಿ ನೇಮಕ ಬೇಡ; ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ16 Oct 2025 7:34 PM IST
share
ಚುನಾಯಿತ ಸದಸ್ಯರ ಅವಧಿ ಪೂರ್ಣಗೊಳ್ಳುವವರೆಗೆ ಆಡಳಿತಾಧಿಕಾರಿ ನೇಮಕ ಬೇಡ; ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
ಮಂಡ್ಯ, ಹೊಸಕೋಟೆ, ಚಿತ್ರದುರ್ಗ, ಗೌರಿಬಿದನೂರು ನಗರಸಭೆಗಳ ಚುನಾಯಿತ ಸದಸ್ಯರು ಸಲ್ಲಿಸಿದ್ದ ಅರ್ಜಿ

ಬೆಂಗಳೂರು : ಮಂಡ್ಯ, ಹೊಸಕೋಟೆ, ಚಿತ್ರದುರ್ಗ ಹಾಗೂ ಗೌರಿಬಿದನೂರು ನಗರಸಭೆಗಳ ಚುನಾಯಿತ ಸದಸ್ಯರ ಅವಧಿ ಪೂರ್ಣಗೊಳ್ಳುವವರೆಗೆ ಆ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಮಧ್ಯಂತರ ನಿರ್ದೇಶನ ನೀಡಿದೆ.

ನಾಲ್ಕೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹೊಸದಾಗಿ ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಗುರುವಾರ ವಿಚಾರಣೆ ನಡೆಸಿತು.

ಕೆಲ ಕಾಲ ಆರ್ಜಿ ಆಲಿಸಿದ ನ್ಯಾಯಪೀಠ, ನ್ಯಾಯಾಲಯದ ಮುಂದೆ ಬಂದಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಅವಧಿ ಮುಗಿಯುವ ತನಕ ಆಡಳಿತಾಧಿಕಾರಿಗಳನ್ನು ನೇಮಕ ಮಾಡಬಾರದು ಎಂದು ಸರಕಾರಕ್ಕೆ ನಿರ್ದೇಶನ ನೀಡಿತು. ಜತೆಗೆ, ಅರ್ಜಿಗಳ ಸಂಬಂಧ ರಾಜ್ಯ ಸರಕಾರ, ರಾ‍ಜ್ಯ ಚುನಾವಣಾ ಆಯೋಗ, ಆಯಾ ಜಿಲ್ಲಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿತು.

ಈಗ ಹೊಸದಾಗಿ ಅರ್ಜಿ ಸಲ್ಲಿಸಿರುವ ನಾಲ್ಕು ನಗರ ಸ್ಥಳೀಯ ಸಂಸ್ಥೆಗಳು ಸೇರಿ ಈ ಹಿಂದೆ ಅರ್ಜಿ ಸಲ್ಲಿಸಿ ಆಡಳಿತಾಧಿಕಾರಿ ನೇಮಕ ಮಾಡಬಾರದು ಎಂದು ಮಧ್ಯಂತರ ಆದೇಶ ಪಡೆದುಕೊಂಡಿರುವ ಚಳ್ಳಕೆರೆ,‌ ಮುಳಬಾಗಿಲು, ಚಿಕ್ಕಬಳ್ಳಾಪುರ ನಗರಸಭೆಗಳು ಹಾಗೂ ಹೊಳೆನರಸೀಪುರ ಮತ್ತು ಮಳವಳ್ಳಿ ಪುರಸಭೆಗಳ ಅರ್ಜಿಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಸರಕಾರದ ಪರ ವಕೀಲರಿಗೆ ನಿರ್ದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X