Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾರ್ವಜನಿಕ ಸ್ಥಳಗಳಲ್ಲಿ ಗುಂಪು...

ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಚಟುವಟಿಕೆಗೆ ನಿರ್ಬಂಧ; ಸರಕಾರದ ಆದೇಶದ ಮೇಲಿನ ತಡೆಯಾಜ್ಞೆ ಅರ್ಜಿದಾರರಿಗಷ್ಟೇ ಸೀಮಿತಗೊಳಿಸಲು ಹೈಕೋರ್ಟ್ ನಕಾರ

ವಾರ್ತಾಭಾರತಿವಾರ್ತಾಭಾರತಿ17 Nov 2025 10:39 PM IST
share
ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಚಟುವಟಿಕೆಗೆ ನಿರ್ಬಂಧ; ಸರಕಾರದ ಆದೇಶದ ಮೇಲಿನ ತಡೆಯಾಜ್ಞೆ ಅರ್ಜಿದಾರರಿಗಷ್ಟೇ ಸೀಮಿತಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು/ಧಾರವಾಡ: ಸಾರ್ವಜನಿಕ ಸ್ಥಳಗಳಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ 10ಕ್ಕೂ ಅಧಿಕ ಮಂದಿ ಗುಂಪು ಸೇರಿದರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ಅರ್ಜಿದಾರರಿಗೆ ಮಾತ್ರ ಸೀಮಿತಗೊಳಿಸಲು ನಿರಾಕರಿಸಿರುವ ಹೈಕೋರ್ಟ್, ಮಧ್ಯಂತರ ಆದೇಶ ಎಲ್ಲರಿಗೂ ಅನ್ವಯಿಸಲಿದೆ ಎಂದು ಸ್ಪಷ್ಟಪಡಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ 2025ರ ಅಕ್ಟೋಬರ್ 18ರಂದು ಹೊರಡಿಸಿದ್ದ ಆದೇಶ ರದ್ದು ಕೋರಿ ಹುಬ್ಬಳ್ಳಿಯ ಪುನಃಶ್ಚೇತನ ಸೇವಾ ಟ್ರಸ್ಟ್ ಮತ್ತಿತರರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಸೋಮವಾರ ವಿಚಾರಣೆ ನಡೆಸಿತು.

ರಾಜ್ಯ ಸರಕಾರದ ಪರ ಹಾಜರಾದ ಅಡ್ವೋಕೇಟ್​ ಜನರಲ್​ ಕೆ. ಶಶಿಕಿರಣ್ ಶೆಟ್ಟಿ ಅವರು, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕೆಂದು ನ್ಯಾಯಪೀಠಕ್ಕೆ ಮನವಿ ಮಾಡಿದರಲ್ಲದೆ, ಸರಕಾರದ ಆದೇಶಕ್ಕೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ಅರ್ಜಿದಾರರಿಗೆ ಮಾತ್ರ ಸೀಮಿತವಾಗಿ ಅನ್ವಯಿಸಿ ಆದೇಶಿಸಬೇಕೆಂದು ಕೋರಿದರು.

ಈ ಮನವಿಯನ್ನು ತಳ್ಳಿ ಹಾಕಿದ ನ್ಯಾಯಪೀಠ, ಸರಕಾರದ ಆದೇಶಕ್ಕೆ ತಡೆ ನೀಡಿ ಅಕ್ಟೋಬರ್ 28ರಂದು ಹೊರಡಿಸಲಾಗಿದ್ದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಭಾಗೀಯ ನ್ಯಾಯಪೀಠ ನವೆಂಬರ್ 6ರಂದು ವಜಾಗೊಳಿಸಿದೆ. ಈ ಮೂಲಕ ಏಕಸದಸ್ಯ ಪೀಠದ ಮಧ್ಯಂತರ ಆದೇಶವನ್ನು ಎತ್ತಿ ಹಿಡಿದಿದೆ. ಇದೀಗ, ಅಡ್ವೊಕೇಟ್ ಜನರಲ್ ಅವರು ಮಧ್ಯಂತರ ಆದೇಶವನ್ನು ಅರ್ಜಿದಾರರಿಗೆ ಮಾತ್ರ ಸೀಮಿತಗೊಳಿಸುವಂತೆ ಮನವಿ ಮಾಡಿದ್ದಾರೆ. ಆದರೆ, ಸರಕಾರದ ಆದೇಶದಿಂದ ಭಾರತೀಯ ಸಂವಿಧಾನದ ಅಧ್ಯಾಯ III ರ ಉಲ್ಲಂಘನೆಯಾಗಿದೆ. ಅಂದರೆ ಪರಿಚ್ಛೇದ 19(1) (ಎ) ಮತ್ತು (ಬಿ) ಅಡಿಯಲ್ಲಿನ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಆದ್ದರಿಂದ, ಸರಕಾರ ಹೊರಡಿಸಿರುವ ಆದೇಶವನ್ನು ಅರ್ಜಿದಾರರಿಗೆ ಸೀಮಿತಗೊಳಿಸಿ, ಇತರರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಅನುಮತಿಸಲಾಗದು ಎಂದು ಸ್ಪಷ್ಟಪಡಿಸಿತು.

ಜತೆಗೆ, ಅರ್ಜಿಗೆ ಸಂಬಂಧಿಸಿದಂತೆ ಸರಕಾರ ಆಕ್ಷೇಪಣೆಗಳನ್ನು ಸಲ್ಲಿಸಿದಲ್ಲಿ, ವಿಚಾರಣೆ ನಡೆಸಿ ಇತ್ಯರ್ಥಪಡಿಸಲಾಗುವುದು ಎಂದು ನ್ಯಾಯಪೀಠ ತಿಳಿಸಿತು. ಆಗ ಅಡ್ವೋಕೇಟ್​ ಜನರಲ್​ ಅವರು, ಆಕ್ಷೇಪಣೆ ಸಲ್ಲಿಸಲು 4 ವಾರ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ 4 ವಾರ ಕಾಲಾವಕಾಶ ನೀಡಿ, ವಿಚಾರಣೆಯನ್ನು ಡಿಸೆಂಬರ್ 15ಕ್ಕೆ ಮುಂದೂಡಿತಲ್ಲದೆ, ಈ ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಅರ್ಜಿಯ ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X