Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಧರ್ಮ-ದೇವರ ಹೆಸರಲ್ಲಿ ಸರಕಾರಿ ಜಾಗ...

ಧರ್ಮ-ದೇವರ ಹೆಸರಲ್ಲಿ ಸರಕಾರಿ ಜಾಗ ಒತ್ತುವರಿಗೆ ಅನುಮತಿಸಲಾಗದು : ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ21 Nov 2025 12:29 AM IST
share
ಧರ್ಮ-ದೇವರ ಹೆಸರಲ್ಲಿ ಸರಕಾರಿ ಜಾಗ ಒತ್ತುವರಿಗೆ ಅನುಮತಿಸಲಾಗದು : ಹೈಕೋರ್ಟ್

ಬೆಂಗಳೂರು : ಧರ್ಮದ ಹೆಸರಿನಲ್ಲಿ ಸರಕಾರಿ ಜಾಗ ಅತಿಕ್ರಮಿಸಲು ಹಾಗೂ ದೇವರ ಹೆಸರಿನಲ್ಲಿ ರಿಯಲ್ ಎಸ್ಟೇಟ್‌ ವ್ಯವಹಾರ ನಡೆಸಲು ಅವಕಾಶ ನೀಡಲಾಗದು ಎಂದು ಹೈಕೋರ್ಟ್ ತೀಕ್ಷ್ಣವಾಗಿ ನುಡಿದಿದೆ.

ಕೋಲಾರ ತಾಲೂಕು ವೇಮಗಲ್ ಹೋಬಳಿಯ ಕ್ಯಾಲನೂರು ಗ್ರಾಮದ ಸರಕಾರಿ ಶಾಲೆಯ ಕಾಂಪೌಂಡ್ ಹಾಗೂ ಗ್ರಾಮದ ರಸ್ತೆಯ ಸರಕಾರಿ ಜಾಗದಲ್ಲಿ ನಿರ್ಮಿಸಲಾಗಿರುವ ಮಳಿಗೆಗಳ ತೆರವಿಗೆ ಕೋಲಾರ ತಹಶೀಲ್ದಾರ್ ಜಾರಿಗೊಳಿಸಿರುವ ನೋಟಿಸ್ ಪ್ರಶ್ನಿಸಿ ಗ್ರಾಮದ ವಿರಾಟ್ ಹಿಂದೂ ಸೇವಾ ಚಾರಿಟಬಲ್ ಟ್ರಸ್ಟ್ ಹಾಗೂ ಜಾಮೀಯಾ ಮಸ್ಜಿದ್ ಕಮಿಟಿ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ರೀತಿ ಹೇಳಿದೆ.

ಜತೆಗೆ, ಸರಕಾರಿ ಜಾಗವನ್ನು ಖಾಸಗಿಯವರು ಬಳಕೆ ಮಾಡುತ್ತಿದ್ದರೂ ಇಲ್ಲಿಯವರೆಗೆ ಸುಮ್ಮನೆ ಇದ್ದದ್ದು ಏಕೆ ಎಂದು ಸರಕಾರದ ಪರ ವಕೀಲರನ್ನು ಪ್ರಶ್ನಿಸಿರುವ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರಕಾರ, ಕೋಲಾರ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ನವೆಂಬರ್ 21ಕ್ಕೆ (ಶುಕ್ರವಾರ) ಮುಂದೂಡಿತು.

ಅರ್ಜಿದಾರರ ವಾದವೇನು?

ಗುರುವಾರ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕ್ಯಾಲನೂರು ಗ್ರಾಮದ ಖಾಲಿ ಜಾಗವನ್ನು ದಶಕದಿಂದ ಎರಡೂ ಅರ್ಜಿದಾರ ಸಂಸ್ಥೆಗಳು ನಿರ್ವಹಣೆ ಮಾಡಿಕೊಂಡು ಬಂದಿವೆ. ಗ್ರಾಮಸ್ಥರ ಹಿತದೃಷ್ಟಿಯಿಂದ ಈ ಜಾಗದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಮತ್ತು ವಾಣಿಜ್ಯ ಚಟುವಟಿಕೆ ನಡೆಸಿಕೊಂಡು ಬರಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಸಮುದಾಯದ ದೇಣಿಗೆಗಳಿಂದ ಮಳಿಗೆಗಳನ್ನು ನಿರ್ಮಿಸಿ, ಮೂಲಸೌಕರ್ಯಗಳನ್ನು ಸೃಷ್ಟಿಸಲಾಗಿದೆ. ಇವುಗಳಿಂದ ಬರುವ ಬಾಡಿಗೆ ಹಣವನ್ನು ಧಾರ್ಮಿಕ ಕಾರ್ಯಗಳಿಗೆ ಬಳಕೆ ಮಾಡಲಾಗುತ್ತದೆ. ಈ ಜಾಗ ಅರ್ಜಿದಾರರ ಸಂಸ್ಥೆಗಳಿಗೆ ಮಂಜೂರು ಮಾಡಬೇಕು ಎಂದು 2015ರಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿಯಲ್ಲಿ ನಿರ್ಣಯ ಆಗಿದೆ. ಆ ಪ್ರಸ್ತಾವನೆ ಸದ್ಯ ಜಿಲ್ಲಾಧಿಕಾರಿ ಬಳಿ ಬಾಕಿ ಇದೆ. ಈ ನಡುವೆ, ಮಳಿಗೆಗಳನ್ನು ತೆರವುಗೊಳಿಸಲು ತಹಶೀಲ್ದಾರ್ ನೋಟಿಸ್ ಜಾರಿಗೊಳಿಸಿದ್ದು, ನವೆಂಬರ್ 21ರಂದು ತೆರವು ಕಾರ್ಯಾಚರಣೆ ನಿಗದಿಯಾಗಿದೆ ಎಂದರು.

ಅರ್ಜಿದಾರರು ಮಳಿಗೆಗಳನ್ನು ನಿರ್ಮಿಸಿರುವ ಜಾಗ ಸರಕಾರಿ ಜಮೀನು ಎಂದು ತಿಳಿದ ನ್ಯಾಯಪೀಠ, ಸರಕಾರಿ ಜಾಗದಲ್ಲಿ ಧಾರ್ಮಿಕ ಸಂಸ್ಥೆಗಳ ಕೆಲಸ ಏನಿದೆ? ಯಾವ ಆಧಾರ ಮತ್ತು ಯಾವ ಉದ್ದೇಶಕ್ಕೆ ಮಳಿಗೆಗಳನ್ನು ನಿರ್ಮಿಸಿ, ಬಾಡಿಗೆಗೆ ಕೊಟ್ಟು ಬಾಡಿಗೆ ವಸೂಲಿ ಮಾಡಲಾಗುತ್ತಿದೆ? ಇದು ದೇವರ ಹೆಸರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಅಲ್ಲದೆ ಮತ್ತೇನಿಲ್ಲ ಎಂದು ಹೇಳಿತು.

ಧರ್ಮದ ಹೆಸರಿನಲ್ಲಿ ಈ ರೀತಿ ಸರಕಾರಿ ಜಾಗ ಅತಿಕ್ರಮಿಸುವುದಕ್ಕೆ ಮತ್ತು ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್‌ಗೆ ಅವಕಾಶ ನೀಡಲಾಗದು. ಅರ್ಜಿದಾರರು ಚಾರಿಟಬಲ್ ಟ್ರಸ್ಟ್ ಎಂದು ಹೇಳಿಕೊಂಡಿದ್ದಾರೆ. ಹೀಗಿರುವಾಗ, ಮಳಿಗೆ ಕಟ್ಟಿ ಬಾಡಿಗೆ ವಸೂಲಿ ಮಾಡುವುದು ಏಕೆ? ಎರಡೂ ಧರ್ಮದವರು ಅರ್ಜಿ ಸಲ್ಲಿಸಿದ್ದಾರೆ. 'ರಾಮ್-ರಹೀಮ್' ಸೇರಿ ಬಂದಿರುವುದೇ ಅನುಮಾನಗಳನ್ನು ಹುಟ್ಟುಹಾಕುತ್ತಿದೆ ಎಂದು ನ್ಯಾಯಪೀಠ ನುಡಿಯಿತು.

ಜಾಗ ಮಂಜೂರು ಪ್ರಸ್ತಾವನೆ ಜಿಲ್ಲಾಧಿಕಾರಿ ಮುಂದಿದ್ದರೆ ಅವರ ಬಳಿ ಹೋಗಿ, ಜಾಗ ಮಂಜೂರು ಮಾಡುವುದು ಅವರಿಗೆ ಬಿಟ್ಟಿದ್ದು. ಸದ್ಯಕ್ಕಂತೂ ವಿವಾದಿತ ಜಾಗ ಸರಕಾರಕ್ಕೆ ಸೇರಿದ್ದು. ಸರಕಾರಿ ಜಾಗದಲ್ಲಿ ನೀವು ಹಕ್ಕು ಸಾಧಿಸಲು ಬರುವುದಿಲ್ಲ. ಸರಕಾರಿ ಜಾಗ ಇದ್ದಾಗ ನಿಮಗೆ ಯಾವುದೇ ರಕ್ಷಣೆ ಅಥವಾ ಪರಿಹಾರ ನೀಡಲಾಗದು ಎಂದು ನ್ಯಾಯಪೀಠ ಹೇಳಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X