Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಫ್‌ಐಆರ್ ರದ್ದು ಕೋರಿದ ಅರ್ಜಿಗಳಲ್ಲಿ...

ಎಫ್‌ಐಆರ್ ರದ್ದು ಕೋರಿದ ಅರ್ಜಿಗಳಲ್ಲಿ ಮಧ್ಯಂತರ ಜಾಮೀನಿಗೆ ಮನವಿ ಸರಿಯಲ್ಲ : ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ31 Dec 2025 12:04 AM IST
share
ಎಫ್‌ಐಆರ್ ರದ್ದು ಕೋರಿದ ಅರ್ಜಿಗಳಲ್ಲಿ ಮಧ್ಯಂತರ ಜಾಮೀನಿಗೆ ಮನವಿ ಸರಿಯಲ್ಲ : ಹೈಕೋರ್ಟ್

ಬೆಂಗಳೂರು : ಕ್ರಿಮಿನಲ್‌ ಪ್ರಕರಣಗಳಲ್ಲಿ ಜಾಮೀನು ಪಡೆಯಲು ಅವಕಾಶವಿದ್ದರೂ, ಆರೋಪಿಗಳು ನೇರವಾಗಿ ಹೈಕೋರ್ಟ್‌ಗೆ ಎಫ್‌ಐಆರ್‌ ರದ್ದು ಕೋರಿ ಅರ್ಜಿ ಸಲ್ಲಿಸಿ, ಮಧ್ಯಂತರ ಜಾಮೀನು ಕೋರುವುದು ಸರಿಯಲ್ಲ ಎಂದು ಹೈಕೋರ್ಟ್‌ ಮೌಖಿಕವಾಗಿ ಹೇಳಿದೆ.

ಹಲವು ಕ್ರಿಮಿನಲ್‌ ಪ್ರಕರಣಗಳಲ್ಲಿ ಆರೋಪಿಗಳ ಪರ ವಕೀಲರು ಎಫ್‌ಐಆರ್‌ ರದ್ದತಿಗೆ ಕೋರಿ ಸಲ್ಲಿಸಿದ ಅರ್ಜಿಗಳಲ್ಲಿ ಆರೋಪಿಗಳಿಗೆ ಮಧ್ಯಂತರ ಜಾಮೀನು ಮಂಜೂರಾತಿಗೆ ಮನವಿ ಮಾಡುವುದನ್ನು ಗಮನಿಸಿದ ನ್ಯಾಯಮೂರ್ತಿ ಅನಂತ ರಾಮನಾಥ್ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.

ಅತಿಕ್ರಮ ಪ್ರವೇಶ ಸೇರಿ ಇನ್ನಿತರ ಜಾಮೀನು ಸಿಗಬಹುದಾದ ಪ್ರಕರಣಗಳಲ್ಲಿ ಆರೋಪಿಗಳು ಮೊದಲಿಗೆ ಹೈಕೋರ್ಟ್‌ಗೆ ಎಫ್‌ಐಆರ್‌ ರದ್ದು ಕೋರಿ ಅರ್ಜಿ ಸಲ್ಲಿಸುತ್ತಾರೆ. ಆ ಅರ್ಜಿ ವಿಚಾರಣೆ ವೇಳೆ ಮಧ್ಯಂತರ ಜಾಮೀನು ಕೋರಿ ಆರೋಪಿಗಳ ಪರ ವಕೀಲರು ಮನವಿ ಮಾಡುತ್ತಾರೆ. ಇದು ಸರಿಯಾದ ಕ್ರಮವಲ್ಲ. ಜಾಮೀನು ಕೋರಿಕೆಗೆ ನಿರ್ದಿಷ್ಟ ಕಾರ್ಯ ವಿಧಾನ/ನಿಯಮಗಳ ಮತ್ತು ಪ್ರಕ್ರಿಯೆ ಇರುತ್ತದೆ. ಬಂಧನದ ಆತಂಕವಿದ್ದರೆ, ಮೊದಲಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿ, ವಿಚಾರಣಾ ನ್ಯಾಯಾಲಯದಿಂದಲೇ ಜಾಮೀನು ಪಡೆಯಬಹುದು ಎಂದು ಹೇಳಿತು.

ಆನಂತರ ಹೈಕೋರ್ಟ್‌ನಲ್ಲಿ ಎಫ್‌ಐಆರ್‌ ರದ್ದತಿಗೆ ಕೋರುವ ಅವಕಾಶವಿರುತ್ತದೆ. ಜಾಮೀನು ಪಡೆಯಲು ಅವಕಾಶವಿದ್ದರೂ, ಎಫ್‌ಐಆರ್‌ ರದ್ದತಿ ಕೋರಿದ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಗಳಲ್ಲಿ ಮಧ್ಯಂತರ ಜಾಮೀನು ಕೋರಲಾಗುತ್ತದೆ. ಆರೋಪಿಗಳಿಗೆ ವಕೀಲರು ನೀಡುವ ಭರವಸೆಯಿಂದ ಇಂತಹ ಬೆಳವಣಿಗೆಗಳು ನಡೆಯುತ್ತವೆ ಎಂದು ನ್ಯಾಯಾಲಯ ಮೌಖಿಕವಾಗಿ ನುಡಿಯಿತು.

ಅಂತಿಮವಾಗಿ ಎಫ್‌ಐಆರ್‌ ರದ್ದು ಕೋರಿದ ಹಲವು ಅರ್ಜಿಗಳಲ್ಲಿ ಆರೋಪಿಗಳಿಗೆ ಮಧ್ಯಂತರ ಜಾಮೀನು ಮಂಜೂರಾತಿಗೆ ವಕೀಲರು ಮಾಡಿದ ಮನವಿಗೆ ಒಪ್ಪದ ನ್ಯಾಯಪೀಠ, ಅರ್ಜಿಯಲ್ಲಿರುವ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಕೆಗೆ ಸೂಚಿಸಿ ವಿಚಾರಣೆ ಮುಂದೂಡಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X