Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗೃಹ ಸಚಿವರೇ ಅಸಹಾಯಕರಾದರೆ ಸರ್ಕಾರ ಅಕ್ರಮ...

ಗೃಹ ಸಚಿವರೇ ಅಸಹಾಯಕರಾದರೆ ಸರ್ಕಾರ ಅಕ್ರಮ ಮರಳು ಗಣಿಗಾರಿಕೆ ತಡೆಯುವುದೆಂಬ ಭರವಸೆ ಉಳಿಯದು : ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ31 Jan 2026 11:22 PM IST
share
ಗೃಹ ಸಚಿವರೇ ಅಸಹಾಯಕರಾದರೆ ಸರ್ಕಾರ ಅಕ್ರಮ ಮರಳು ಗಣಿಗಾರಿಕೆ ತಡೆಯುವುದೆಂಬ ಭರವಸೆ ಉಳಿಯದು : ಹೈಕೋರ್ಟ್

ಬೆಂಗಳೂರು : ಮರಳು ಅಕ್ರಮ ದಂಧೆಗೆ ಕಡಿವಾಣ ಹಾಕಲು ರಾಜ್ಯದ ಗೃಹ ಸಚಿವರೇ ಅಸಹಾಯಕತೆ ವ್ಯಕ್ತಪಡಿಸಿದರೆ ರಾಜ್ಯ ಸರ್ಕಾರವು ಅದಕ್ಕೆ ಕಡಿವಾಣ ಹಾಕಲಿದೆ ಎಂಬ ಭರವಸೆ ಹೊಂದಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್, ಇದೊಂದು ಗಂಭೀರ ವಿಚಾರವಾಗಿರುವುದರಿಂದ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಕೇಂದ್ರೀಯ ಸಂಸ್ಥೆ ಅಥವಾ ವಿಶೇಷ ತನಿಖಾ ಸಂಸ್ಥೆಯಿಂದ ತನಿಖೆ (ಎಸ್‌ಐಟಿ) ನಡೆಸಬೇಕಾದ ಅಗತ್ಯವಿದೆ ಎಂದು ಹೇಳಿದೆ.

ಗೃಹ ಸಚಿವ ಜಿ. ಪರಮೇಶ್ವರ್‌ ಅವರು ಜನವರಿ 27ರಂದು ಅಧಿವೇಶನದಲ್ಲಿ ಮಾತನಾಡುತ್ತಾ, ರಾಜ್ಯದಲ್ಲಿ ಪಕ್ಷಾತೀತವಾಗಿ ಹಲವು ಪ್ರಭಾವಿಗಳು ಮರಳು ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ನೀಡಿರುವ ಹೇಳಿಕೆ ಕುರಿತು ಜನವರಿ 28ರಂದು ಮಾಧ್ಯಮಗಳು ಪ್ರಕಟಿಸಿರು ವರದಿಯನ್ನು ಉಲ್ಲೇಖಿಸಿ ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್‌ ಮತ್ತು ತಾರಾ ವಿತಾಸ್ತಾ ಗಂಜು ಅವರ ವಿಭಾಗೀಯ ನ್ಯಾಯಪೀಠ, ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲು ರಿಜಿಸ್ಟ್ರಿಗೆ ನಿರ್ದೇಶಿಸಿದೆ.

ಇದೇ ವೇಳೆ, ಪ್ರತಿವಾದಿಗಳಾದ ರಾಜ್ಯ ಗೃಹ, ಗಣಿ ಮತ್ತು ಭೂ ವಿಜ್ಞಾನ ಹಾಗೂ ಅರಣ್ಯ ಮತ್ತು ಪರಿಸರ ಇಲಾಖೆಯ ಕಾರ್ಯದರ್ಶಿಗಳಿಗೆ ನೋಟಿಸ್‌ ಜಾರಿಗೊಳಿಸಿರುವ ನ್ಯಾಯಪೀಠ, 3 ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ನಿರ್ದೇಶಿಸಿದೆ. ಜತೆಗೆ, ಪ್ರಕರಣ ದಾಖಲಿಸಿದ ಬಳಿಕ ಸ್ವಯಂಪ್ರೇರಿತ ಪಿಐಎಲ್‌ ಅನ್ನು ಸೂಕ್ತ ಪೀಠ ವಿಚಾರಣೆ ನಡೆಸಲು ನಿರ್ದೇಶಿಸಲು ಮುಖ್ಯ ನ್ಯಾಯಮೂರ್ತಿಗಳ ಮುಂದಿಡುವಂತೆ ನಿರ್ದೇಶಿಸಿದೆ.

ಗೃಹ ಸಚಿವ ಜಿ ಪರಮೇಶ್ವರ್‌ ಅವರು, ಮರಳು ಅಕ್ರಮ ಸಾಗಣೆಯು ದೊಡ್ಡ ರ್ಯಾಕೆಟ್‌ ಆಗಿದ್ದು, ಅದರಲ್ಲಿ ಹಲವು ಪ್ರಭಾವಿಗಳು ಭಾಗಿಯಾಗಿದ್ದಾರೆ. ಇಲ್ಲಿ ನಾನು ಯಾರ ಹೆಸರನ್ನೂ ಹೇಳುತ್ತಿಲ್ಲ. ಏಕೆಂದರೆ ಅದು ಮುಜುಗರ ಉಂಟು ಮಾಡುತ್ತದೆ. ಸೀಮಿತ ಉತ್ತರ ನೀಡಿದ್ದು, ಈ ದಂಧೆಯಲ್ಲಿ ಹಲವು ಪ್ರಭಾವಿಗಳಿದ್ದಾರೆ. ಈ ಕುರಿತು ಚರ್ಚಿಸಲು ಸಭೆ ನಡೆಸಲಾಗುವುದು ಎಂದು ಹೇಳಿರುವುದನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ ಎಂದು ನ್ಯಾಯಪೀಠ ಆದೇಶದಲ್ಲಿ ಉಲ್ಲೇಖಿಸಿದೆ.

ಮರಳು ಗಣಿಗಾರಿಕೆ ನಡೆಸಲು ಬಿಡ್‌ ಆಹ್ವಾನಿಸಲಾಗಿದೆ. ಆದರೆ, ಅವುಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಹಣದ ಹೊಳೆ ಹರಿಸುವ ಈ ರ್ಯಾಕೆಟ್‌ನಲ್ಲಿ ದೊಡ್ಡ ತಿಮಿಂಗಿಲಗಳು ಭಾಗಿಯಾಗಿದ್ದು, ಮರಳು ಗಣಿಗಾರಿಕೆಯನ್ನು ಕಾನೂನಾತ್ಮಕಗೊಳಿಸುವುದು ಅವರಿಗೆ ಇಷ್ಟವಿಲ್ಲ. ಮರಳು ಗಣಿಗಾರಿಕೆಯ ಗುತ್ತಿಗೆಗಾರಿಗೆ ನೀಡಿದರೆ, ಹಣವು ಸರ್ಕಾರದ ಬೊಕ್ಕಸಕ್ಕೆ ಹೋಗಲಿದ್ದು, ಮಾಫಿಯಾಗಳಿಗೆ ಅಕ್ರಮ ಹಣ ಸಂದಾಯವಾಗುವುದು ನಿಂತು ಹೋಗಲಿದೆ ಎಂದು ವರದಿ ಮಾಡಲಾಗಿದೆ ಎಂದೂ ಆದೇಶದಲ್ಲಿ ದಾಖಲಿಸಲಾಗಿದೆ.

ರಾತ್ರಿ ವೇಳೆಯಲ್ಲಿ ಕೃಷ್ಣಾ ನದಿ ತೀರದಲ್ಲಿ ಮರಳು ಅಕ್ರಮ ಸಾಗಣೆ ನಡೆಯುತ್ತಿದ್ದು, ಇದರಿಂದ ಬೆಳೆಗಳ ಮೇಲೆ ಧೂಳು ಕುಳಿತು ಫಸಲಿಗೆ ಹಾನಿಯಾಗುತ್ತಿದೆ ಎಂದು ರೈತರು ದೂರುತ್ತಿದ್ದಾರೆ. ವಿಶೇಷ ಕಾರ್ಯಾಚರಣಾ ದಳವು (ಎಸ್‌ಟಿಎಫ್‌) ನೆಪಮಾತ್ರಕ್ಕೆ ಉಳಿದಿದೆ. ಮರಳು ಅಕ್ರಮ ಗಣಿಗಾರಿಕೆ ನಡೆಯುವ ಜಾಗಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸದಿರುವುದು ಹಾಗೂ ಚೆಕ್‌ ಪೋಸ್ಟ್‌ಗಳು ಇಲ್ಲದೇ ಇರುವುದರಿಂದ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿರುವ ವಾಹನಗಳಿಂದ ಹಲವು ಸಾವುಗಳು ಸಂಭವಿಸಿವೆ. ರಾಯಚೂರು ಜಿಲ್ಲೆಯ ಮಹಿಳಾ ವಿಧಾನಸಭಾ ಸದಸ್ಯರೊಬ್ಬರು ಮರಳು ಮಾಫಿಯಾ ವಿಚಾರದ ಬಗ್ಗೆ ಧ್ವನಿ ಎತ್ತಿದ್ದಕ್ಕೆ ತಮಗೆ ಜೀವ ಬೆದರಿಕೆ ಇರುವುದರ ಕುರಿತು ದೂರಿದ್ದಾರೆ ಎಂದೂ ಆದೇಶದಲ್ಲಿ ವಿವರಿಸಲಾಗಿದೆ.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X