Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೃತ ಸರಕಾರಿ ನೌಕರನ ಅವಲಂಬಿತಳಾದ ವಿವಾಹಿತ...

ಮೃತ ಸರಕಾರಿ ನೌಕರನ ಅವಲಂಬಿತಳಾದ ವಿವಾಹಿತ ಪುತ್ರಿಯೂ ಅನುಕಂಪದ ನೇಮಕಾತಿಗೆ ಅರ್ಹ : ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ27 Jun 2026 8:07 PM IST
share
ಮೃತ ಸರಕಾರಿ ನೌಕರನ ಅವಲಂಬಿತಳಾದ ವಿವಾಹಿತ ಪುತ್ರಿಯೂ ಅನುಕಂಪದ ನೇಮಕಾತಿಗೆ ಅರ್ಹ : ಹೈಕೋರ್ಟ್

ಬೆಂಗಳೂರು : ವಿವಾಹಿತ ಮಗಳು ಮೃತ ಸರಕಾರಿ ನೌಕರನ ಮೇಲೆ ಅವಲಂಬಿತಳಾಗಿ, ಅವರೊಂದಿಗೇ ವಾಸಿಸುತ್ತಿದ್ದರೆ ಅನುಕಂಪದ ಆಧಾರದಲ್ಲಿ ನೇಮಕಾತಿಗೆ ಅರ್ಹಳಾಗಿರುತ್ತಾಳೆ ಎಂದು ಹೈಕೋರ್ಟ್‌ ಆದೇಶಿಸಿದೆ.

ಚಿತ್ರದುರ್ಗದ ಜೋಗಿಮಟ್ಟಿಯ ಆರ್‌. ಸವಿತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಜಿ. ಪಂಡಿತ್‌ ಹಾಗೂ ನ್ಯಾಯಮೂರ್ತಿ ಕೆ. ರಾಜೇಶ್‌ ರೈ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.

ಕುಟುಂಬದ ವ್ಯಾಖ್ಯಾನದಲ್ಲಿ ವಿವಾಹಿತ ಹೆಣ್ಣುಮಕ್ಕಳನ್ನು ಸೇರಿಸುವ ಕರ್ನಾಟಕ ನಾಗರಿಕ ಸೇವೆಗಳ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996ರ ತಿದ್ದುಪಡಿಯು ಹಿಂದಿನಿಂದಲೂ ಜಾರಿಯಲ್ಲಿದೆ ಹಾಗೂ ವಿವಾಹಿತ ಪುತ್ರಿಯೂ ಅನುಕಂಪದ ಉದ್ಯೋಗದ ಪರಿಗಣನೆಗೆ ಅರ್ಹಳಾಗಿದ್ದಾಳೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಸವಿತಾ ಅವರ ಅರ್ಜಿ ತಿರಸ್ಕರಿಸಿದ್ದ ಕೆಎಟಿ ಆದೇಶವನ್ನು ರದ್ದುಪಡಿಸಿದೆ. ಜತೆಗೆ, ಅನುಕಂಪದ ಆಧಾರದಲ್ಲಿ ಉದ್ಯೋಗ ನೇಮಕಾತಿಗೆ ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ನಿರ್ದೇಶಿಸಿದೆ.

ಹೈಕೋರ್ಟ್ ಆದೇಶದಲ್ಲೇನಿದೆ?

'ಕುಟುಂಬ' ಹಾಗೂ 'ಅವಲಂಬಿ' ಎಂಬ ಪದಗಳ ವ್ಯಾಖ್ಯಾನವನ್ನು ಅವಿವಾಹಿತರು, ವಿವಾಹಿತರು, ವಿಚ್ಛೇದಿತರು ಅಥವಾ ವಿಧವೆಯರು ಆಗಿರಲಿ ಅವರು ಮೃತ ಸರಕಾರಿ ನೌಕರನ ಮೇಲೆ ಅವಲಂಬಿತರಾಗಿದ್ದರೆ ಹಾಗೂ ಅವರೊಂದಿಗೇ ವಾಸಿಸುತ್ತಿದ್ದರೆ, ಅವರನ್ನು ಸೇರ್ಪಡೆ ಮಾಡಲು ವಿಸ್ತರಣೆ ಮಾಡಲಾಗಿತ್ತು. ಕರ್ನಾಟಕ ನಾಗರಿಕ ಸೇವಾ ನಿಯಮಗಳಿಗೆ ತಿದ್ದುಪಡಿಯನ್ನು ಪರ್ಯಾಯದ ಮೂಲಕ ಮಾಡಲಾಗಿದೆ. ಬದಲಿ ನಿಬಂಧನೆಯನ್ನು ಅದರ ಆರಂಭದಿಂದಲೂ ಕಾನೂನಿನ ಭಾಗವಾಗಿದೆ ಎಂದು ಪರಿಗಣಿಸಲಾಗುತ್ತದೆ. ಅರ್ಜಿದಾರರು ಮೃತ ನೌಕರನ ವಿವಾಹಿತ ಮಗಳು ಎಂಬ ಕಾರಣಕ್ಕಾಗಿ ಅನುಕಂಪದ ಆಧಾರದಲ್ಲಿ ನೇಮಕಾತಿ ಅರ್ಜಿ ತಿರಸ್ಕರಿಸಲಾಗುವುದಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ.

ವಿವಾಹಿತ ಪುತ್ರಿಯರು ಇತರ ಅರ್ಹತಾ ಅವಶ್ಯಕತೆಗಳನ್ನು ಪೂರೈಸಿದರೆ ಅನುಕಂಪದ ನೇಮಕಾತಿಗಾಗಿ ಪರಿಗಣಿಸಲು ಅರ್ಹರಾಗಿರುತ್ತಾರೆ. ಅರ್ಜಿದಾರರ ತಾಯಿ ನಿವೃತ್ತ ಸರಕಾರಿ ನೌಕರರಾಗಿದ್ದು, ಅವರು ಪಿಂಚಣಿ ಪಡೆಯುತ್ತಿದ್ದಾರೆಂಬ ಕಾರಣಕ್ಕೆ ಅನುಕಂಪದ ಆಧಾರದಲ್ಲಿ ನೇಮಕಾತಿಗಾಗಿ ಅರ್ಜಿದಾರರ ಮನವಿ ತಿರಸ್ಕರಿಸಲು ಸಾಧ್ಯವಿಲ್ಲ ಎಂದೂ ನ್ಯಾಯಪೀಠ ಆದೇಶಿಸಿದೆ.

ತಿದ್ದುಪಡಿ ತಂದಿದ್ದ ಸರಕಾರ:

ಅನುಕಂಪದ ಆಧಾರದಲ್ಲಿ ನೇಮಕಾತಿಯನ್ನು ಹಕ್ಕಿನ ವಿಷಯವೆಂದು ಹೇಳಲಾಗುವುದಿಲ್ಲ. ಆದರೆ, ಮೃತ ಸರಕಾರಿ ನೌಕರನ ಅರ್ಹ ಅವಲಂಬಿತರು ಅನುಕಂಪದ ಆಧಾರದ ನೇಮಕಾತಿ ಯೋಜನೆಯಡಿ ಪರಿಗಣನೆಗೆ ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಸಮನ್ವಯ ನ್ಯಾಯಪೀಠ ಹೇಳಿದೆ. ಕರ್ನಾಟಕ ನಾಗರಿಕ ಸೇವೆಗಳು (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996ರ ಅಡಿಯಲ್ಲಿ ವಿವಾಹಿತ ಹೆಣ್ಣುಮಕ್ಕಳನ್ನು ಆರಂಭದಲ್ಲಿ ಸಹಾನುಭೂತಿಯ ನೇಮಕಾತಿಗೆ ಅರ್ಹ ಅವಲಂಬಿತರ ವ್ಯಾಖ್ಯಾನದಿಂದ ಹೊರಗಿಡಲಾಗಿತ್ತು. ಆದರೆ, ಭುವನೇಶ್ವರಿ ವಿ. ಪುರಾಣಿಕ್‌ ಹಾಗೂ ಕರ್ನಾಟಕ ಸರ್ಕಾರದ ನಡುವಿನ ಪ್ರಕರಣದಲ್ಲಿ ವಿವಾಹಿತ ಹೆಣ್ಣುಮಕ್ಕಳನ್ನು ಅನುಕಂಪದ ನೇಮಕಾತಿಯಿಂದ ಹೊರಗಿಡುವುದು ಅಸಂವಿಧಾನಿಕ ಎಂದು ಹೈಕೋರ್ಟ್‌ ತೀರ್ಪು ನೀಡಿತ್ತು. ಆನಂತರ, ಹಾಲಿ ಇದ್ದ ನಿಬಂಧನೆಗಳನ್ನು ಬದಲಿಸುವ ಮೂಲಕ ರಾಜ್ಯ ಸರಕಾರ 1996ರ ನಿಯಮಗಳನ್ನು ತಿದ್ದುಪಡಿ ಮಾಡಿತ್ತು.

ಪ್ರಕರಣವೇನು?

ಚಳ್ಳಕೆರೆ ತಾಲೂಕಿನ ಪ್ರಿ-ಮೆಟ್ರಿಕ್‌ ಎಸ್‌ಟಿ ಬಾಲಕರ ಹಾಸ್ಟೆಲ್‌ನಲ್ಲಿ ಅಡುಗೆಯವರಾಗಿ (ಗ್ರೂಪ್-ಡಿ) ಕೆಲಸ ಮಾಡುತ್ತಿದ್ದ ಅರ್ಜಿದಾರರ ತಂದೆ ಸೇವೆಯಲ್ಲಿದ್ದಾಗ 2014ರ ಫೆಬ್ರವರಿ 25ರಂದು ಮೃತಪಟ್ಟಿದ್ದರು. ಅವರ ಮಗಳು (ಅರ್ಜಿದಾರರು) ಅನುಕಂಪದ ಆಧಾರದಲ್ಲಿ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದರು. ಅವರು ಅರ್ಜಿ ಸಲ್ಲಿಸುವ ಸಮಯದಲ್ಲಿ, ಕರ್ನಾಟಕ ನಾಗರಿಕ ಸೇವೆಗಳು (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996ರಲ್ಲಿ ವಿವಾಹಿತ ಮಗಳನ್ನು ಅಂತಹ ನೇಮಕಾತಿಗೆ ಪರಿಗಣಿಸಲು ಯಾವುದೇ ನಿಬಂಧನೆ ಇರಲಿಲ್ಲ.

ತಂದೆಯ ಸಾವಿಗೆ ಮುನ್ನವೇ ಸವಿತಾ ವಿವಾಹವಾಗಿದ್ದರು. ಸವಿತಾ ಮೃತರ ವಿವಾಹಿತ ಮಗಳು ಹಾಗೂ ಅವರ ತಾಯಿ ನಿವೃತ್ತ ಸರ್ಕಾರಿ ನೌಕರಳಾಗಿದ್ದು ಪಿಂಚಣಿ ಪಡೆಯುತ್ತಿದ್ದಾರೆ ಎಂಬ ಕಾರಣ ನೀಡಿ ಸಮಾಜ ಕಲ್ಯಾಣ ಇಲಾಖೆಯು ಸವಿತಾ ಅವರಿಗೆ ಅನುಕಂಪದ ಆಧಾರದ ನೇಮಕಾತಿ ಮನವಿಯನ್ನು ತಿರಸ್ಕರಿಸಿ ಹಿಂಬರಹ ನೀಡಿತ್ತು. ಇದನ್ನು ಪ್ರಶ್ನಿಸಿ ಸವಿತಾ ಸಲ್ಲಿಸಿದ್ದ ಅರ್ಜಿಯನ್ನು ಕೆಎಟಿ ತಿರಸ್ಕರಿಸಿತ್ತು, ಆದರೆ, ವಿವಾಹಿತ ಪುತ್ರಿಯೂ ಅನುಕಂಪದ ಆಧಾರದಲ್ಲಿ ಹುದ್ದೆಗೆ ಅರ್ಹರೆಂದು ಹೇಳಿತ್ತು. ಆದ್ದರಿಂದ, ಅರ್ಜಿದಾರರು ಹೈಕೋರ್ಟ್‌ ಮೊರೆ ಹೋಗಿದ್ದರು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X