Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರಕಾರದ ಯೋಜನೆ ಬಗ್ಗೆ ಕೋಮು ಪ್ರಚೋದನಕಾರಿ...

ಸರಕಾರದ ಯೋಜನೆ ಬಗ್ಗೆ ಕೋಮು ಪ್ರಚೋದನಕಾರಿ ವರದಿ ಪ್ರಸಾರ

ವಾರ್ತಾಭಾರತಿವಾರ್ತಾಭಾರತಿ13 Sept 2025 12:03 AM IST
share
ಸರಕಾರದ ಯೋಜನೆ ಬಗ್ಗೆ ಕೋಮು ಪ್ರಚೋದನಕಾರಿ ವರದಿ ಪ್ರಸಾರ
ವಾದ ಮಂಡನೆಗೆ ಸುಧೀರ್ ಚೌಧರಿಗೆ ಅಂತಿಮ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು, ಸೆ.12: ರಾಜ್ಯ ಸರಕಾರದ ’ಸ್ವಾವಲಂಬಿ ಸಾರಥಿ ಯೋಜನೆ’ಯ ಕುರಿತು ಕೋಮು ಪ್ರಚೋದನಕಾರಿ ವರದಿ ಪ್ರಸಾರ ಮಾಡಿದ ಆರೋಪ ಸಂಬಂಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿರುವ ಅರ್ಜಿಗಳ ಕುರಿತು ವಾದ ಮಂಡಿಸಲು ಆಜ್ ತಕ್ ಸುದ್ದಿ ವಾಹಿನಿ ಮತ್ತದರ ಮಾಜಿ ಸಂಪಾದಕ ಸುಧೀರ್ ಚೌಧರಿಗೆ ಅಂತಿಮ ಅವಕಾಶ ನೀಡಿರುವ ಹೈಕೋರ್ಟ್, ಒಂದೊಮ್ಮೆ ವಾದ ಮಂಡಿಸಲು ವಿಫಲವಾದರೆ ಅರ್ಜಿ ವಜಾಗೊಳಿಸುವುದಾಗಿ ಎಚ್ಚರಿಸಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ಆಡಳಿತಾಧಿಕಾರಿ ಎಸ್. ಶಿವಕುಮಾರ್ ನೀಡಿರುವ ದೂರು ಆಧರಿಸಿ ಬೆಂಗಳೂರಿನ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಸುಧೀರ್ ಚೌಧರಿ ಹಾಗೂ ಆಜ್ ತಕ್ ಸುದ್ದಿವಾಹಿನಿ ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಜೆ.ಎಂ. ಖಾಜಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರ ವಿರುದ್ಧ ಆತುರದ ಕ್ರಮ ಕೈಗೊಳ್ಳುವುದಿಲ್ಲ ಎಂದು ಈ ಹಿಂದೆಯೇ ನ್ಯಾಯಾಲಯಕ್ಕೆ ಮೌಖಿಕ ಭರವಸೆ ನೀಡಲಾಗಿದ್ದು ಅದನ್ನು ಮುಂದುವರಿಸಲಾಗಿದೆ.

ಈಗ ಪೊಲೀಸರು ಅರ್ಜಿದಾರರ ಹಾಜರಾತಿಗೆ ನೋಟಿಸ್ ನೀಡಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಅರ್ಜಿದಾರರು ತನಿಖೆಗೆ ಸಹಕರಿಸುತ್ತಿದ್ದಾರೆಯೇ ಎಂಬ ನ್ಯಾಯಪೀಠದ ಪ್ರಶ್ನೆಗೆ ವಕೀಲರು ಹೌದು ಎಂದು ಉತ್ತರಿಸಿದರು.

ರಾಜ್ಯ ಸರಕಾರದ ಪರ ಹಾಜರಿದ್ದ ಹೆಚ್ಚುವರಿ ಸರಕಾರಿ ಅಭಿಯೋಜಕ ಬಿ.ಎನ್.ಜಗದೀಶ ಅವರು ಈ ಪ್ರಕರಣವನ್ನು ಇಂದು ವಿಚಾರಣೆಗಾಗಿ ನಿರ್ದಿಷ್ಟವಾಗಿ ಪಟ್ಟಿ ಮಾಡಲಾಗಿದೆ. ಅರ್ಜಿ ಸಂಬಂಧ ನಾವು ವಾದ ಮಂಡಿಸಲು ಸಿದ್ಧರಿದ್ದೇವೆ. ತನಿಖೆಗೆ ಸಹಕರಿಸಬೇಕೆಂಬ ಷರತ್ತಿನ ಮೇಲೆ ಬಲವಂತದ ಕ್ರಮ ಜರುಗಿಸುವುದಿಲ್ಲ ಎಂದು ಈ ಹಿಂದೆ ಮೌಖಿಕ ಭರವಸೆ ನೀಡಲಾಗಿದೆ. ಹಾಗಾಗಿ, ಅರ್ಜಿದಾರರು ತನಿಖೆಗೆ ಸಹಕರಿಸಲಿ ಎಂದು ಹೇಳಿದರು.

ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಕುರಿತು ವಾದ ಮಂಡಿಸಲು ಅರ್ಜಿದಾರರಿಗೆ ಅಂತಿಮ ಅವಕಾಶ ಕಲ್ಪಿಸಿ, ಪ್ರಕರಣವನ್ನು ಅಕ್ಟೋಬರ್ 13ರಂದು ವಿಚಾರಣೆಗೆ ನಿಗದಿಪಡಿಸಲಾಗುವುದು. ಅಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಲು ವಿಫಲವಾದರೆ, ಅರ್ಜಿಯನ್ನು ವಜಾಗೊಳಿಸಲಾಗುವುದು ಎಂದು ತಿಳಿಸಿ, ವಿಚಾರಣೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X