Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅ.16ರಿಂದ 21ರ ವರೆಗೆ ಹೈಕೋರ್ಟ್ ರಜೆ,...

ಅ.16ರಿಂದ 21ರ ವರೆಗೆ ಹೈಕೋರ್ಟ್ ರಜೆ, ತುರ್ತು ವಿಚಾರಣೆಗೆ ರಜಾಕಾಲೀನ ಪೀಠಗಳ ರಚನೆ

ವಾರ್ತಾಭಾರತಿವಾರ್ತಾಭಾರತಿ14 Oct 2023 8:35 PM IST
share
ಅ.16ರಿಂದ 21ರ ವರೆಗೆ ಹೈಕೋರ್ಟ್ ರಜೆ, ತುರ್ತು ವಿಚಾರಣೆಗೆ ರಜಾಕಾಲೀನ ಪೀಠಗಳ ರಚನೆ

ಬೆಂಗಳೂರು, ಅ.14: ಇದೇ ಅಕ್ಟೋಬರ್ 16ರಿಂದ 21ರವರೆಗೆ ಹೈಕೋರ್ಟ್‍ಗೆ ದಸರಾ ರಜೆ ನೀಡಲಾಗಿದೆ. ಈ ವೇಳೆ, ರಜಾಕಾಲೀನ ಪೀಠಗಳು ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠದಲ್ಲಿ ಕರ್ತವ್ಯ ನಿರ್ವಹಸಲಿವೆ.

ಬೆಂಗಳೂರು ಪೀಠದಲ್ಲಿ ನ್ಯಾಯಮೂರ್ತಿಗಳಾದ ಬಿ.ಎಂ.ಶ್ಯಾಮ್ ಪ್ರಸಾದ್ ಮತ್ತು ಟಿ.ವೆಂಕಟೇಶ್ ನಾಯ್ಕ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಲಿದ್ದು, ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಮತ್ತು ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರ ನೇತೃತ್ವದ ಏಕಸದಸ್ಯ ಪೀಠಗಳು ತುರ್ತು ಪ್ರಕರಣಗಳ ವಿಚಾರಣೆ ನಡೆಸಲಿವೆ.

ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿಗಳಾದ ಕೆ.ಎಸ್.ಹೇಮಲೇಖಾ ಮತ್ತು ಅನಿಲ್ ಬಿ. ಕಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ಮೊದಲಿಗೆ ವಿಭಾಗೀಯ ಪೀಠದ ಪ್ರಕರಣಗಳನ್ನು ವಿಚಾರಣೆ ನಡೆಸಲಿದೆ. ಆನಂತರ ಉಭಯ ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ಏಕಸದಸ್ಯ ಪೀಠದಲ್ಲಿ ಕುಳಿತು ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ.

ಕಲಬುರ್ಗಿ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಚ್.ಟಿ.ನರೇಂದ್ರ ಪ್ರಸಾದ್ ಮತ್ತು ಜಿ.ಬಸವರಾಜ ಅವರ ನೇತೃತ್ವದ ವಿಭಾಗೀಯ ಪೀಠವು ಮೊದಲಿಗೆ ವಿಭಾಗೀಯ ಪೀಠದ ಪ್ರಕರಣಗಳ ವಿಚಾರಣೆ ನಡೆಸಲಿದ್ದು, ಆನಂತರ ಏಕಸದಸ್ಯ ಪೀಠಗಳು ಪ್ರತ್ಯೇಕವಾಗಿ ಪ್ರಕರಣಗಳ ವಿಚಾರಣೆ ನಡೆಸಲಿದೆ.

ತುರ್ತಾಗಿ ಆಗಬೇಕಾದ ಮಧ್ಯಂತರ ತಡೆಯಾಜ್ಞೆ, ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶದಂಥ ಪ್ರಕರಣಗಳನ್ನು ಮಾತ್ರ ವಿಚಾರಣೆಗೆ ಪರಿಗಣಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೇಲಿನ ಪ್ರಕರಣಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ರಜಾಕಾಲೀನ ಪೀಠದ ವಿಚಾರಣೆಯ ದಿನ ಹೊರತುಪಡಿಸಿ ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರ ವರೆಗೆ ಸಲ್ಲಿಸಬಹುದಾಗಿದೆ. ರಜಾಕಾಲೀನ ಪೀಠದ ವಿಚಾರಣೆಯ ದಿನದಂದು ಅರ್ಜಿ ಸಲ್ಲಿಕೆಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 3.30ರ ವರೆಗೆ ಅವಕಾಶ ಇರಲಿದೆ. ಇದರೊಂದಿಗೆ ಇ-ಫೈಲಿಂಗ್ ಪೋರ್ಟಲ್ ಮೂಲಕ ಇ-ಫೈಲಿಂಗ್ ಮಾಡಬಹುದಾಗಿದೆ ಎಂದು ನ್ಯಾಯಿಕ ರಿಜಿಸ್ಟ್ರಾರ್ ಎಂ.ಚಂದ್ರಶೇಖರ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X