Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಕಂಬಳೋತ್ಸವ’ಕ್ಕೆ ಅನುದಾನ ಒದಗಿಸುವ...

‘ಕಂಬಳೋತ್ಸವ’ಕ್ಕೆ ಅನುದಾನ ಒದಗಿಸುವ ಕುರಿತು ಸಿಎಂ ಜೊತೆ ಚರ್ಚೆ : ಸಚಿವ ಎಚ್.ಕೆ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ22 July 2024 9:22 PM IST
share
‘ಕಂಬಳೋತ್ಸವ’ಕ್ಕೆ ಅನುದಾನ ಒದಗಿಸುವ ಕುರಿತು ಸಿಎಂ ಜೊತೆ ಚರ್ಚೆ : ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಡೆಯುವಂತಹ ಕಂಬಳೋತ್ಸವಕ್ಕೆ ರಾಜ್ಯ ಸರಕಾರದ ವತಿಯಿಂದ ಹೆಚ್ಚುವರಿ ಅನುದಾನ ಒದಗಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ಸೋಮವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಅಶೋಕ್ ಕುಮಾರ್ ರೈ ಅವರು ಕರಾವಳಿ ಭಾಗದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತಿ ವರ್ಷ ನಡೆಯುವ ಕಂಬಳೋತ್ಸವಕ್ಕೆ ಸರಕಾರ ಅನುದಾನ ನೀಡುತ್ತಿತ್ತು. ಆದರೆ, ಕಳೆದ ವರ್ಷದಿಂದ ಯಾವುದೆ ಅನುದಾನ ನೀಡದಿರುವ ಕುರಿತು ಗಮನ ಸೆಳೆದ ಸೂಚನೆಗೆ ಎಚ್.ಕೆ.ಪಾಟೀಲ್ ಉತ್ತರಿಸಿದರು.

ಕಂಬಳೋತ್ಸವಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ಆ ಭಾಗದ ಶಾಸಕರನ್ನು ಒಳಗೊಂಡಂತೆ ಸಭೆ ನಡೆಸಲಾಗಿದೆ. ಹಿಂದಿನ ಸರಕಾರದ ಅವಧಿಯಲ್ಲಿ ಅನುದಾನ ನೀಡಲಾಗುತ್ತಿತ್ತು ಎಂಬುದನ್ನು ಶಾಸಕರು ಗಮನ ಸೆಳೆದಿದ್ದಾರೆ. ನಮ್ಮ ಇಲಾಖೆಗೆ ಲಭ್ಯವಿರುವ ಅನುದಾನ ಆಧರಿಸಿ 10 ಕಂಬಳಗಳಿಗೆ ತಲಾ 5 ಲಕ್ಷ ರೂ.ಗಳನ್ನು ನೀಡುವುದಾಗಿ ತಿಳಿಸಿದ್ದೆ ಎಂದು ಅವರು ಹೇಳಿದರು.

ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಅಶೋಕ್ ಕುಮಾರ್ ರೈ, ಪ್ರತಿ ವರ್ಷ ಎರಡು ಜಿಲ್ಲೆಗಳು ಸೇರಿ 25 ಕಂಬಳಗಳು ಆಗುತ್ತವೆ. ಈ ಪೈಕಿ ಕೇವಲ 10 ಕಂಬಳಗಳಿಗೆ ಅನುದಾನ ನೀಡಿದರೆ ಸಾಕಾಗುವುದಿಲ್ಲ. ಪ್ರತಿಯೊಂದು ಕಂಬಳಕ್ಕೂ 5 ಲಕ್ಷ ರೂ.ನೀಡಬೇಕು ಎಂದು ಆಗ್ರಹಿಸಿದರು.

ಇದಕ್ಕೆ ದನಿ ಗೂಡಿಸಿದ ಬಿಜೆಪಿ ಸದಸ್ಯ ವಿ.ಸುನೀಲ್ ಕುಮಾರ್, ಜಿಲ್ಲಾ ಕಂಬಳ ಸಮಿತಿಯವರು ಆಯೋಜಿಸುವ ಕಂಬಳೋತ್ಸವಕ್ಕೆ ಮಾತ್ರ ಸರಕಾರ ಅನುದಾನ ನೀಡುವುದು. ಹಿಂದಿನ ಸರಕಾರದ ಅವಧಿಯಲ್ಲಿ ಅನುದಾನ ನೀಡಲಾಗಿದೆ. ಕಂಬಳ ಕೇವಲ ಸಾಂಸ್ಕೃತಿಕ ಆಚರಣೆ ಅಲ್ಲ, ಅದೊಂದು ಕ್ರೀಡೆ ಹಾಗೂ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಕನಿಷ್ಠ ಒಂದು ಕಂಬಳಕ್ಕೆ 10 ಲಕ್ಷ ರೂ.ಗಳನ್ನಾದರೂ ನೀಡಬೇಕು ಎಂದು ಕೋರಿದರು.

Tags

HK Patilkambala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X