Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಮಹಾದಾಯಿ ಯೋಜನೆ’ | ಗೋವಾ ಮುಖ್ಯಮಂತ್ರಿ...

‘ಮಹಾದಾಯಿ ಯೋಜನೆ’ | ಗೋವಾ ಮುಖ್ಯಮಂತ್ರಿ ಹೇಳಿಕೆ ಆಘಾತಕಾರಿ: ಎಚ್.ಕೆ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ23 July 2025 7:52 PM IST
share
‘ಮಹಾದಾಯಿ ಯೋಜನೆ’ |  ಗೋವಾ ಮುಖ್ಯಮಂತ್ರಿ ಹೇಳಿಕೆ ಆಘಾತಕಾರಿ: ಎಚ್.ಕೆ.ಪಾಟೀಲ್

ಬೆಂಗಳೂರು : ಕೇಂದ್ರ ಸರಕಾರವು ಮಹಾದಾಯಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮೋದನೆ ನೀಡುವುದಿಲ್ಲ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ್ ತಮಗೆ ತಿಳಿಸಿದ್ದಾರೆ ಎಂದು ಗೋವಾ ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಅಲ್ಲಿನ ವಿಧಾನಸಭೆಯಲ್ಲಿ ಅಧಿಕೃತ ಹೇಳಿಕೆ ನೀಡಿರುವುದು ಕರ್ನಾಟಕಕ್ಕೆ ಆಘಾತ ತಂದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ಬುಧವಾರ ವಿಧಾನಸೌಧದಲ್ಲಿ ತುರ್ತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಹಾದಾಯಿ ಜಲವಿವಾದವು ಅಂತರರಾಜ್ಯ ಜಲವಿವಾದ ಕಾಯ್ದೆಯನ್ವಯ ಒಂದು ನ್ಯಾಯಾಧೀಕರಣ ರಚನೆಯಾಗಿ ಅದು ಅಂತಿಮ ತೀರ್ಪು ನೀಡಿ, ಆ ತೀರ್ಪು ಕೇಂದ್ರ ಸರಕಾರದ ಗೆಜೆಟ್‍ನಲ್ಲಿ ಪ್ರಕಟಣೆಯಾಗಿ ನ್ಯಾಯಾಧೀಕರಣದ ತೀರ್ಪು ಜಾರಿಗೆ ಬಂದಿದೆ ಎಂದು ಹೇಳಿದರು.

ಕರ್ನಾಟಕವು ಕಳಸಾ-ಬಂಡೂರಿ ಯೋಜನೆಗೆ 7.56 ಟಿ.ಎಂ.ಸಿ ಅಡಿ ನೀರನ್ನು ಮಲಪ್ರಭಾ ಕಣಿವೆಗೆ ತಿರುಗಿಸಿಕೊಳ್ಳಲು ತನ್ನ ಕೋರಿಕೆ ಸಲ್ಲಿಸಿತ್ತು. ಇದರಲ್ಲಿ 3.90 ಟಿ.ಎಂ.ಸಿ ನೀರನ್ನು ಕರ್ನಾಟಕದ ಪಾಲಿಗೆ ಹಂಚಿಕೆ ಮಾಡಿದೆ. ಅಂತರ್ ಕಣಿವೆ ತಿರುಗಿಸುವಿಕೆಯನ್ನು ಕರ್ನಾಟಕದ ಕಡೆಯಿಂದ ಮಾಡಿಕೊಳ್ಳಲು ನ್ಯಾಯಾಧೀಕರಣ ಒಪ್ಪಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ಈ ಯೋಜನೆ ಜಾರಿಗೊಳಿಸಲು ಪ್ರಸ್ತಾವನೆಯನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರಕ್ಕೆ ಕರ್ನಾಟಕ ಮಂಜೂರಿಗಾಗಿ/ತೀರುವಳಿಗಾಗಿ (Clearance) ಅರ್ಜಿ ಸಲ್ಲಿಸಿತ್ತು. 10.6 ಹೆಕ್ಟೇರ್ ಅರಣ್ಯ ಭೂಮಿ ಕಾಳಿ ಮತ್ತು ಸಹ್ಯಾದ್ರಿ ಹುಲಿ ಕಾಯ್ದಿಟ್ಟ ಪ್ರದೇಶದಲ್ಲಿ ಬರುತ್ತದೆ ಎಂದು ಗೋವಾ ಆಕ್ಷೇಪಿಸಲು ಪ್ರಾರಂಭಿಸಿತು. ಈ ಹಿನ್ನೆಲೆಯಲ್ಲಿ 2024ರ ಜ.23ರಂದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರವು ಈ ಅರಣ್ಯ ಪ್ರದೇಶವನ್ನು ಬಳಕೆ ಮಾಡಿಕೊಳ್ಳಲು ಶಿಫಾರಸ್ಸು ಮಾಡಿದೆ ಎಂದು ಅವರು ಮಾಹಿತಿ ನೀಡಿದರು.

ಇದಾದ ನಂತರ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಮುಂದೆ 77ನೆ, 79ನೆ ಮತ್ತು 80ನೆ ಸಭೆಗಳಲ್ಲಿ ಈ ವಿಷಯವನ್ನು ನಿರ್ಣಯ ಮಾಡದೆ ವೃಥಾ ಕಾಲಹರಣ ಮುಂದೂಡುತ್ತಾ ಬಂದಿದೆ. ಸರ್ವೋಚ್ಛ ನ್ಯಾಯಾಲಯವು ಕರ್ನಾಟಕದ ಮಹಾದಾಯಿ ಯೋಜನೆಗೆ ತಡೆಹಿಡಿಯಬೇಕೆಂಬುವ ಯಾವುದೇ ಆದೇಶ ನೀಡಿಲ್ಲ ಎಂದು ಎಚ್.ಕೆ.ಪಾಟೀಲ್ ಗಮನ ಸೆಳೆದರು.

2022ರ ಡಿ.29ರಂದು ಕೇಂದ್ರ ಜಲ ಆಯೋಗವು ಕಳಸಾ ಮತ್ತು ಬಂಡೂರಿ ಯೋಜನೆಗಳ ಪರಿಷ್ಕೃತ ವಿವರವಾದ ಯೋಜನಾ ವರದಿಗಳಿಗೆ ಅನುಮೋದನೆ ನೀಡಿದೆ. 2023ರ ಎ.19ರಂದು ಸರ್ವೋಚ್ಛ ನ್ಯಾಯಾಲಯವು ಗೋವಾದ ಮೂಲದಾವೆಯ ಮೇಲಿನ ಮಧ್ಯಂತರ ಅರ್ಜಿಯನ್ನು ವಿಲೇವಾರಿ ಮಾಡಿ, ಕಳಸಾ ಯೋಜನೆಗೆ ತಡೆಯೊಡ್ಡುವಂತೆ ಕರ್ನಾಟಕದ ವಿರುದ್ಧ ತಡೆಯಾಜ್ಞೆ ನೀಡುವಂತೆ ಕೋರಿದ್ದ ಗೋವಾದ ಪ್ರಾರ್ಥನೆಯನ್ನು ವಜಾ ಮಾಡಿದೆ ಎಂದು ಅವರು ತಿಳಿಸಿದರು.

ನ್ಯಾಯಾಂಗದ ಯಾವುದೇ ಅಡೆತಡೆ ಇಲ್ಲ್ಲದಿದ್ದರೂ ಕರ್ನಾಟಕದ ವಿರುದ್ಧ ಮಲತಾಯಿ ಧೋರಣೆ ಅನುಸರಿಸುತ್ತಾ ಕರ್ನಾಟಕದ ನ್ಯಾಯಯುತವಾದ ಮತ್ತು ಕಾನೂನುಬದ್ಧವಾದ ಹಾಗೂ ಸಂವಿಧಾನಾತ್ಮಕ ರಕ್ಷಣೆ ಹೊಂದಿರುವ ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ವೃಥಾ ಅಡ್ಡಿ ಮಾಡುತ್ತಿರುವುದು ಒಕ್ಕೂಟ ವ್ಯವಸ್ಥೆಗೆ ಅನ್ಯಾಯಗೊಳಿಸಿದಂತಾಗಿದೆ ಎಂದು ಎಚ್.ಕೆ.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದರು.

ನ್ಯಾಯಾಂಗದಿಂದ ಯಾವುದೇ ಅಡೆತಡೆಯಿಲ್ಲದ ಯೋಜನೆಗಳನ್ನು ಮತ್ತು ಕಾನೂನು ಬದ್ಧವಾಗಿ ಅಂತರ್‍ರಾಜ್ಯ ಜಲವಿವಾದ ಕಾಯ್ದೆಯಡಿಯಲ್ಲಿ ನ್ಯಾಯಾಧೀಕರಣದಿಂದ ಇತ್ಯರ್ಥಗೊಂಡಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಲು, ಕರ್ನಾಟಕಕ್ಕೆ ಕೇಂದ್ರ ಸರಕಾರವು ತಾನು ನೀಡಬೇಕಾದ ಮಂಜೂರಾತಿಗಳನ್ನು ತಕ್ಷಣ ನೀಡದಿರುವುದು ಜನರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಉತ್ತರ ಕರ್ನಾಟಕ ಜನರ ಹಾಗೂ ರೈತರ ಹಿತ ಗಮನಿಸಿ, ಕೇಂದ್ರ ಸರಕಾರ ತಕ್ಷಣ ಅನುಮತಿ ನೀಡಬೇಕು ಎಂದು ಅವರು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X