Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ;...

ರಾಜ್ಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ; ಪ್ರಚಾರ ಪಡೆಯಲಿಲ್ಲ ಅಷ್ಟೇ: ಬಿ.ಕೆ.ಹರಿಪ್ರಸಾದ್

ʼರಾಜ್ಯದ ಜಾತಿಗಣತಿ ಬಹಿರಂಗಪಡಿಸಬೇಕುʼ

ವಾರ್ತಾಭಾರತಿವಾರ್ತಾಭಾರತಿ30 Oct 2023 5:36 PM IST
share
ರಾಜ್ಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ; ಪ್ರಚಾರ ಪಡೆಯಲಿಲ್ಲ ಅಷ್ಟೇ: ಬಿ.ಕೆ.ಹರಿಪ್ರಸಾದ್

ಶಿವಮೊಗ್ಗ, ಅ.30: ʼಜಾತಿಗಣತಿ ವಿಷಯವಾಗಿ ಕಾಂಗ್ರೆಸ್ ನಿಲುವು ಸ್ಪಷ್ಟವಾಗಿದೆ. ರಾಜ್ಯದ ಜಾತಿಗಣತಿ ಬಹಿರಂಗಪಡಿಸಬೇಕು, ಜಾತಿಗಣತಿ ಜಾರಿಗೆ ತರಬೇಕುʼ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ʼಜಾತಿಗಣತಿ ವಿಷಯವಾಗಿ ನಾನು ರಾಜ್ಯದ್ಯಾಂತ ಜನರಲ್ಲಿ ಜಾಗೃತಿ ಮೂಡಿಸಲು ಸಭೆಗಳನ್ನು ನಡೆಸುತ್ತಿದ್ದೇನೆ. ಇದು ಪಕ್ಷ ವಿರೋಧಿ ಚಟುವಟಿಕೆ ಎಂದು ಯಾರೂ ಭಾವಿಸಬೇಕಾಗಿಲ್ಲ. ನಾನು ಈಗಲೂ ರಾಷ್ಟ್ರರಾಜಕಾರಣದಲ್ಲಿದ್ದೇನೆ. ರಾಜ್ಯದಲ್ಲೂ ಸಾಕಷ್ಟು ಕೆಲಸ ಮಾಡಿದ್ದೇನೆ. ಆದರೆ ಪ್ರಚಾರ ಪಡೆಯಲಿಲ್ಲ ಅಷ್ಟೇʼ ಎಂದರು.

ʼಹಿಂದುಳಿದ, ದಲಿತ, ಆದಿವಾಸಿ ಸಮುದಾಯಗಳಿಗೆ ಸಂವಿಧಾನದ ಆಶಯದಂತೆ ಸಮಬಾಳು, ಸಮಪಾಲು ಹಂಚಿಕೆ ಆಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈಗಾಗಲೆ ನಡೆದಿರುವ ಜಾತಿಗಣತಿಯ ಕಾಂತರಾಜ್ ವರದಿಯನ್ನು ಸರಕಾರ ಜಾರಿಗೊಳಿಸಬೇಕಾಗಿದೆʼ ಎಂದರು.

ರಾಜ್ಯದಲ್ಲಿ ನಮ್ಮ ಪಕ್ಷದ್ದೇ ಕಾಂಗ್ರೆಸ್ ಸರ್ಕಾರ ವಿದ್ದಾಗ್ಯೂ ಅಲ್ಲಿ ಎಲ್ಲಾ ಜಾತಿಯ ನಾಯಕರುಗಳು ಇದ್ದಾರೆ. ಬಲಾಡ್ಯ ಜಾತಿಗಳು ಕಾಂತರಾಜ್ ವರದಿಯನ್ನು ವಿರೋಧಿಸುವುದು ಸಹಜವೇ, ಸರಕಾರದಲ್ಲಿ ದುರ್ಬಲ, ಪ್ರಬಲ ಜಾತಿಗಳ ಶಾಸಕರು, ಸಚಿವರುಗಳು ಇರುವುದರಿಂದ ಸಾಧಕ-ಬಾಧಕಗಳನ್ನು ನೋಡಿಕೊಂಡು ವರದಿಯನ್ನುಜಾರಿಗೊಳಿಸಬೇಕಾಗುತ್ತದೆ. ಇದಕ್ಕಾಗಿ ಸರಕಾರ ಮೇಲೆ ಸಾರ್ವಜನಿಕವಾದ ಒತ್ತಡವನ್ನು ಹೇರಬೇಕಾಗಿದ್ದು, ಈ ಹಿನ್ನಲೆಯಲ್ಲಿ ಸರ್ಕಾರೇತರ ಸಂಘ, ಸಂಸ್ಥೆಗಳ ಮೂಲಕ ಜನರಲ್ಲಿ ಜಾತಿಗಣತಿ ಮತ್ತು ಅದರ ಆಧಾರಿತ ಮೀಸಲಾತಿ ಬಗ್ಗೆ ಅರಿವು ಮೂಡಿಸಲು ರಾಜ್ಯಾದ್ಯಂತ ಸಭೆಗಳನ್ನು ನಡೆಸಲಾಗುತ್ತಿದೆ ಎಂದರು.

ಪ್ರವರ್ಗ 1 ರಲ್ಲಿ 101 ಜಾತಿಗಳಿವೆ, ಕೇವಲ 4-5 ಜಾತಿಗಳು ರಾಜಕೀಯವಾಗಿ ಪ್ರಬಲವಾಗಿವೆ. ಕೆಲವು ಜಾತಿಗಳಲ್ಲಿ ರಾಜಕೀಯ ಪ್ರಜ್ಞೆ ಮೂಡಿಲ್ಲ. ಹಿಂದುಳಿದ ವರ್ಗದಲ್ಲಿ 197 ಸಮಾಜಗಳಿವೆ. 190 ಜಾತಿಗಳು ಇನ್ನು ಕೆಟ್ಟ ಸ್ಥಿತಿಯಲ್ಲಿವೆ ಎಂದರು.

ದೇಶದಲ್ಲಿ ಕೆಲವೇ ಪ್ರಬಲ ಜಾತಿಗಳು ಸರ್ಕಾರದ ಯೋಜನೆಗಳು, ಸೌಲತ್ತುಗಳನ್ನು ಕಬಳಿಸುತ್ತಾ ಬಂದಿವೆ. ಮೀಸಲಾತಿ ಎಂಬುದು ಭಿಕ್ಷೆಯೂ ಅಲ್ಲ ಆರ್ಥಿಕ ಕಾರ್ಯಕ್ರಮವೂ ಅಲ್ಲ. ಅದು ಸಂವಿಧಾನದ ಅಡಿಯಲ್ಲಿ ಬರುವ ಸಾಮಾಜಿಕ ನ್ಯಾಯ ಹಂಚಿಕೆಯಾಗಿದೆ. ಇದನ್ನು ದುರ್ಬಲ ಜಾತಿಗಳಿಗೆ ನೀಡುವುದು ಅಗತ್ಯವಿದೆ. ಇದಕ್ಕಾಗಿ ಜಾತಿಗಣತಿ ಅಗತ್ಯವಿದೆ ಎಂಬುದನ್ನು ಸುಪ್ರೀಂ ಕೋರ್ಟು ನ ತೀರ್ಪುಗಳಲ್ಲಿ ಹೇಳಲಾಗಿದೆ. ಜಾತಿಗಣತಿ ಆಧಾರವಾಗಿಟ್ಟುಕೊಂಡು ಅರ್ಹರಿಗೆ ಮೀಸಲಾತಿ ನೀಡುವುದು ಜಾತಿಗಣತಿಯ ಉದ್ದೇಶವಾಗಿದೆ. ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಎಲ್ಲಾ ರಾಜ್ಯಗಳಲ್ಲೂ ಜಾತಿಗಣತಿ ನಡೆಸಿ ಮೀಸಲಾತಿ ಹಂಚಿಕೆ ಆಗಬೇಕೆಂಬ ನಿರ್ಣಯ ಕೈಗೊಂಡಿದೆ. ಅದರಂತೆ ರಾಜ್ಯದಲ್ಲೂ ಕಾಂತರಾಜ್ ವರದಿಯನ್ನು ಜಾರಿಗೊಳಿಸಬೇಕಾಗಿದೆ ಎಂದರು.

ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರಕ್ಕೆ ಮಾತನಾಡಿದ ಅವರು, ಇದೆಲ್ಲಾ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಕೇಳಬೇಕು. ನನ್ನ ಧ್ವನಿ ಯಾರು ಕಡಿಮೆ ಮಾಡಲು ಸಾಧ್ಯವಿಲ್ಲ. ಜೀವನ ಪೂರ್ತಿ ಧ್ವನಿ ಏರಿಸಿಕೊಂಡು ಬಂದಿದ್ದೇನೆ. ಆ ಧ್ವನಿ ಹಾಗೆಯೇ ಇರುತ್ತದೆ ಎಂದರು.

ಸುದ್ದಿಗೋಷ್ಟಿಯಲ್ಲಿ ಡಿ ಕೆ ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಆರ್ ಮೋಹನ್, ಹಿಂದುಳಿದವರ್ಗಗಳ ಹಿತರಕ್ಷಣಾ ವೇದಿಕೆ ಅಧ್ಯಕ್ಷ ತೀನ ಶ್ರೀನಿವಾಸ್, ಕೆಪಿಸಿಸಿ ಪದಾಧಿಕಾರಿ ಪಿಓ ಶಿವಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ಶಿವಾನಂದ, ಎಸ್.ಪಿ ಜಗನ್ನಾಥ್, ಜಿ ಪದ್ಮನಾಭ್ ಮತ್ತಿತರರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X