Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಯಡಿಯೂರಪ್ಪ ಅವಧಿಯ ಕೋವಿಡ್ ಹಗರಣದ ಬಗ್ಗೆ...

ಯಡಿಯೂರಪ್ಪ ಅವಧಿಯ ಕೋವಿಡ್ ಹಗರಣದ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ: ಬಿಜೆಪಿ ಶಾಸಕ ಯತ್ನಾಳ್

ವಾರ್ತಾಭಾರತಿವಾರ್ತಾಭಾರತಿ8 Jan 2024 7:55 PM IST
share
ಯಡಿಯೂರಪ್ಪ ಅವಧಿಯ ಕೋವಿಡ್ ಹಗರಣದ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ: ಬಿಜೆಪಿ ಶಾಸಕ ಯತ್ನಾಳ್

ಬೆಂಗಳೂರು: ‘ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ದಿಲ್ಲಿಯಲ್ಲಿ ಭೇಟಿ ಮಾಡಿದ್ದು, ರಾಜ್ಯದಲ್ಲಿನ ಹೊಂದಾಣಿಕೆ ರಾಜಕೀಯದ ಬಗ್ಗೆ ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ’ ಎಂದು ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ಸೋಮವಾರ ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಡೆದ ಕೋವಿಡ್ ಹಗರಣದ ಬಗ್ಗೆಯೂ ಹೈಕಮಾಂಡ್ ನಾಯಕರಿಗೆ ತಿಳಿಸಿದ್ದೇನೆ. ಹೊಸದಿಲ್ಲಿಯ ಭೇಟಿ ಅತ್ಯಂತ ಯಶಸ್ವಿಯಾಗಿದೆ ಎಂದು ವಿವರಣೆ ನೀಡಿದರು.

‘ನಾನು ಪಕ್ಷದ ಕೆಲವರ ವಿರುದ್ಧ ಬಹಿರಂಗವಾಗಿ ಮಾಡಿದ ಆರೋಪ ಸಂಬಂಧಿಸಿದಂತೆ ವರಿಷ್ಠರು ನನಗೆ ಯಾವುದೇ ಎಚ್ಚರಿಕೆಯನ್ನು ನೀಡಿಲ್ಲ. ನಡ್ಡಾ ಮತ್ತು ಶಾ ಅವರು ಅತ್ಯಂತ ಗೌರವಯುತವಾಗಿ ನನ್ನ ಮಾತುಗಳನ್ನು ಕೇಳಿಸಿಕೊಂಡಿದ್ದು, ಭ್ರಷ್ಟಾಚಾರದ ವಿರುದ್ಧ ನನ್ನ ಹೋರಾಟದಲ್ಲಿ ಯಾವುದೇ ರಾಜೀ ಇಲ್ಲ' ಎಂದು ಯತ್ನಾಳ್ ಸ್ಪಷ್ಟಪಡಿಸಿದರು.

ಭವಿಷ್ಯದಲ್ಲಿ ಬದಲಾವಣೆ: ರಾಜ್ಯ ಬಿಜೆಪಿಯಲ್ಲಿ ಮುಂಬರುವ ದಿನಗಳಲ್ಲಿ ಬದಲಾವಣೆ ಬಗ್ಗೆಯೂ ವರಿಷ್ಠರು ತಿಳಿಸಿದ್ದಾರೆ. ಆದರೆ, ವಿಜಯೇಂದ್ರ ಜಾಲತಾಣದ ಮೂಲಕ ಯತ್ನಾಳ್‍ಗೆ ವರಿಷ್ಠರಿಂದ ಶಿಸ್ತು ಕ್ರಮದ ಎಚ್ಚರಿಕೆ, ಪಕ್ಷದಿಂದ ಉಚ್ಛಾಟಿಸುವುದಾಗಿ ಸೂಚನೆ ಎಂದು ಸುಳ್ಳು ಸುದ್ದಿ ಹರಿಬಿಡುತ್ತಿದ್ದಾರೆ ಎಂದು ಯತ್ನಾಳ್ ಇದೇ ವೇಳೆ ದೂರಿದರು.

ಬಿಜೆಪಿ ಸೇರುವ ವೇಳೆ ರಾಜ್ಯದ ಯಾವೊಬ್ಬ ಬಿಜೆಪಿ ನಾಯಕರು ನನ್ನನ್ನು ಸೇರಿಸಿಕೊಂಡಿರಲಿಲ್ಲ, ಯಡಿಯೂರಪ್ಪ, ಸದಾನಂದಗೌಡ ಸೇರಿದಂತೆ ಯಾರ ಉಪಕಾರವೂ ಇಲ್ಲ. ಅಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ಅವರೇ ನೇರವಾಗಿ ನನ್ನೊಂದಿಗೆ ಮಾತನಾಡಿ ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಂಡಿದ್ದರು ಎಂದು ಯತ್ನಾಳ್ ತಿಳಿಸಿದರು.

ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧವಿಲ್ಲ: ಜ.12ರಿಂದ 18ರ ವರೆಗೆ ವಿಜಯಪುರ ನಗರದಲ್ಲಿ ನಡೆಯಲಿರುವ ಸಿದ್ದೇಶ್ವರ ಜಾತ್ರೆಯಲ್ಲಿ ವ್ಯಾಪಾರ, ವಹಿವಾಟಿಗೆ ಹಿಂದೂಗಳಿಗೆ ಅವಕಾಶ ನೀಡಲಾಗುವುದು. ಆದರೆ, ಜಾತ್ರೆಯಲ್ಲಿ ಮುಸ್ಲಿಮ್ ಸಮುದಾಯದವರು ವ್ಯಾಪಾರ ನಡೆಸಲು ಯಾವುದೇ ನಿರ್ಬಂಧವಿಲ್ಲ ಎಂದು ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಶಾಸಕ ಯತ್ನಾಳ್ ಇದೇ ವೇಳೆ ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X