Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ 'ಐಎಎಸ್ ಜೀತ ಪದ್ಧತಿ' ಜಾರಿ:...

ರಾಜ್ಯದಲ್ಲಿ 'ಐಎಎಸ್ ಜೀತ ಪದ್ಧತಿ' ಜಾರಿ: ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಎಚ್​ಡಿ ಕುಮಾರಸ್ವಾಮಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ18 July 2023 10:15 AM IST
share
ರಾಜ್ಯದಲ್ಲಿ ಐಎಎಸ್ ಜೀತ ಪದ್ಧತಿ ಜಾರಿ: ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಎಚ್​ಡಿ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: 'ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ?' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, 'ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ' ಎಂದು ಕಿಡಿಕಾರಿದ್ದಾರೆ.

''ಯಾವುದೇ ಒಂದು ರಾಜ್ಯದ ಅಭಿವೃದ್ಧಿ, ಆಡಳಿತ, ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳು ಕೇವಲ ಅಧಿಕಾರಿಗಳಷ್ಟೇ ಅಲ್ಲ; ಆಯಾ ರಾಜ್ಯಗಳ ಕ್ಷಮತೆ, ದಕ್ಷತೆಯ ಪ್ರತೀಕ. ಅಂಥವರನ್ನು ಇನ್ನೊಬ್ಬರ ಆಜ್ಞಾಪಾಲಕರನ್ನಾಗಿ ಮಾಡಿ, ಬಾಗಿಲು ಕಾಯುವ ಕೆಲಸ ಹಚ್ಚಿದ್ದು ಆಡಳಿತ ಪಕ್ಷದ ಅಹಂಕಾರದ ಪರಮಾವಧಿ'' ಎಂದು ಅವರು ಹೇಳಿದ್ದಾರೆ.

''ಇದು ನಿಶ್ಚಿತವಾಗಿಯೂ ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ನನಗೆ ಅತೀವ ಅಚ್ಚರಿ, ಆಘಾತ ಉಂಟು ಮಾಡಿದೆ. ಇಂಥ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕಿದೆ'' ಎಂದು ಹೇಳಿದ್ದಾರೆ.

''ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ 'ಐಎಎಸ್ ಜೀತ ಪದ್ಧತಿ'ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ 'ರಾಜಕೀಯ, ಆಡಳಿತ ವಸಾಹತುಶಾಹಿ'ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಹೌದು; ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ'' ಎಂದು ಟೀಕಿಸಿದ್ದಾರೆ.

''135 ಸೀಟು ಕೊಟ್ಟ ತಪ್ಪಿಗೆ ಕನ್ನಡಿಗರಿಗೆ ವಿಪರೀತ ದರ್ಪ ತೋರಿದೆ ಕಾಂಗ್ರೆಸ್. ಸತ್ಯಯುಗದಲ್ಲಿ ಹಿರಣ್ಯಕಶಿಪು ಅಷ್ಟದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ. ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡುವ ಮೂಲಕ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ'' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Tags

HD Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X